AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿ ಸಿಎಂ ಆದಿತ್ಯನಾಥ್ ಮಂಡ್ಯ ಭೇಟಿ ರದ್ದು: ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ ಯೋಗಿ

ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರ ಕರ್ನಾಟಕ ಪ್ರವಾಸ ರದ್ದಾಗಿದೆ.

ಯುಪಿ ಸಿಎಂ ಆದಿತ್ಯನಾಥ್ ಮಂಡ್ಯ ಭೇಟಿ ರದ್ದು:  ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ ಯೋಗಿ
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Edited By: ವಿವೇಕ ಬಿರಾದಾರ|

Updated on:Oct 15, 2022 | 4:09 PM

Share

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರ (Yogi Adityanath) ಕರ್ನಾಟಕ ಪ್ರವಾಸ ರದ್ದಾಗಿದೆ. ಈ ಮೂಲಕ ಮಂಡ್ಯದ ಕೆಆರ್​ಪೇಟಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ (Kumbmela) ಸಿಎಂ ಯೋಗಿ ಆದಿತ್ಯನಾಥ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಜೊತೆಗೆ ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ್ದಾರೆ.

ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡಗೆ ನಿರಾಸೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಸಚಿವ ನಾರಾಯಣಗೌಡ ಫುಲ್​ ಆಕ್ಟಿವ್​ ಆಗಿದ್ದು, ಕುಂಬಮೇಳ ಮಾಡುವ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಬರಲಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ಯೋಗಿ ಆದಿತ್ಯನಾಥ್​​ ರಾಜ್ಯ ಪ್ರವಾಸ ರದ್ದಾಗಿದೆ. ಈ ಮೂಲಕ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ನಿರಾಸೆಯಾಗಿದೆ.

ಜೆಡಿಎಸ್ ಭದ್ರ ಕೋಟೆ ಎನಿಸಿಕಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಈ ಭಾರಿಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಕಮಲ ಅರಳಿಸಬೇಕೆಂದು ಬಿಜೆಪಿ ಸಾಕಷ್ಟು ಸರ್ಕಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮಂಡ್ಯದಲ್ಲಿ (ಅ.01) ರಂದು ಹಿಂದೂಳಿದ ವರ್ಗಗಳ ಜಾಗೃತಿ ಸಮಾವೇಶ ಮಾಡಿತ್ತು. ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 15 October 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ