AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನದ್ದು ಅತ್ಯಂತ ಕೆಟ್ಟ ಟ್ರಾಫಿಕ್, ನಿಷ್ಪ್ರಯೋಜಕ ಸಂಚಾರ ಪೊಲೀಸರು: ಉತ್ತರ ಪ್ರದೇಶದ ಎಸ್​ಪಿ ಸಂಸದ ಆಕ್ರೋಶ

ಉತ್ತರ ಪ್ರದೇಶದ ಎಸ್​​ಪಿ ಸಂಸದ ರಾಜೀವ್ ರೈ ಬೆಂಗಳೂರಿನ ಹದಗೆಟ್ಟ ಸಂಚಾರ ದಟ್ಟಣೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಟ್ರಾಫಿಕ್ ಪೊಲೀಸರ ಅಸಮರ್ಥತೆ ಮತ್ತು ಅದಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಟ್ಯಾಗ್ ಮಾಡಿ ಎಕ್ಸ್​​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ಗುಂಡಿಗಳ ಚರ್ಚೆ ಬೆನ್ನಲ್ಲೇ ಈ ವಿದ್ಯಮಾನ ರಾಜ್ಯದಲ್ಲಿ ಮತ್ತಷ್ಟು ಸದ್ದು ಮಾಡಿದೆ.

ಬೆಂಗಳೂರಿನದ್ದು ಅತ್ಯಂತ ಕೆಟ್ಟ ಟ್ರಾಫಿಕ್, ನಿಷ್ಪ್ರಯೋಜಕ ಸಂಚಾರ ಪೊಲೀಸರು: ಉತ್ತರ ಪ್ರದೇಶದ ಎಸ್​ಪಿ ಸಂಸದ ಆಕ್ರೋಶ
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ) ಹಾಗೂ ಎಸ್​ಪಿ ಸಂಸದ ರಾಜೀವ್ ರೈ
Ganapathi Sharma
|

Updated on:Dec 01, 2025 | 1:03 PM

Share

ಬೆಂಗಳೂರು, ಡಿಸೆಂಬರ್ 1: ಬೆಂಗಳೂರಿನ (Bengaluru) ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆನಂತರ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಉದ್ಯಮಿಗಳ ಜೊತೆ ಮಾತುಕತೆಯನ್ನೂ ನಡೆಸಿದ್ದರು. ಇದೀಗ ಬೆಂಗಳೂರಿನ ಹದಗೆಟ್ಟ ಟ್ರಾಫಿಕ್ ಬಗ್ಗೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಬಿಸಿ ಅವರಿಗೂ ಭಾನುವಾರ ತಟ್ಟಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಟ್ಯಾಗ್ ಮಾಡಿದ್ದಾರೆ.

ಎಸ್‌ಪಿ ಸಂಸದ ರಾಜೀವ್ ರೈ ಎಕ್ಸ್ ಸಂದೇಶದಲ್ಲಿ ಏನಿದೆ?

‘ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ ಕ್ಷಮಿಸಿ, ಬೆಂಗಳೂರಿನದ್ದು ಅತ್ಯಂತ ಕೆಟ್ಟ ಸಂಚಾರ ವ್ಯವಸ್ಥೆ. ಜವಾಬ್ದಾರಿ ಇಲ್ಲದ, ಪ್ರಯೋಜನಕ್ಕೆ ಬಾರದ ಸಂಚಾರ ಪೊಲೀಸರು. ಅವರು ಕನಿಷ್ಠಪಕ್ಷ ದೂರವಾಣಿ ಕರೆಯನ್ನು ಕೂಡ ಸ್ವೀಕರಿಸುವುದಿಲ್ಲ. ನಾನು ಎಷ್ಟು ಬಾರಿ ಫೋನ್ ಮಾಡಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಯನ್ನು ಕೂಡ ಇಲ್ಲಿ ಲಗತ್ತಿಸಿದ್ದೇನೆ. ಸುಮಾರು ಒಂದು ಗಂಟೆಯಿಂದ ನಾವು ರಾಜಕುಮಾರ್ ಸಮಾಧಿ ಬಳಿ ರಸ್ತೆಯಲ್ಲಿ ಸಂಚಾರದಟ್ಟಣೆಯಲ್ಲಿ ಸಿಲುಕಿದ್ದೇವೆ. ಇದರಿಂದಾಗಿ ನಮಗೆ ವಿಮಾನ ತಪ್ಪಲಿದೆ. ಸಂಸತ್ ಅಧಿವೇಶನಕ್ಕೆ ಹಾಜರಾಗುವುದಕ್ಕೆ ಕೂಡ ಅಡ್ಡಿಯಾಗಲಿದೆ. ಇಷ್ಟೊಂದು ಸಂಚಾರ ದಟ್ಟಣೆ, ಟ್ರಾಫಿಕ್ ಜಾಮ್ ಇದ್ದರೂ ಸುತ್ತಲೂ ಒಬ್ಬ ಪೊಲೀಸ್ ಕೂಡ ಕಾಡುತ್ತಿಲ್ಲ. ಈ ಸುಂದರ ನಗರದ ಹೆಸರು ಮತ್ತು ಮೋಡಿಯನ್ನು ಹಾಳು ಮಾಡಲು ಈ ಅಸಮರ್ಥ ಸಂಚಾರ ಪೊಲೀಸ್ ಅಧಿಕಾರಿಗಳು ಸಾಕು. ಈ ಬೆಂಗಳೂರು ಸಂಚಾರ ದಟ್ಟಣೆ ಅತ್ಯಂತ ಕುಖ್ಯಾತಿ ಗಳಿಸಿದೆ ಎಂಬುದರಲ್ಲಿ ಸಂದೇಹವಿಲ್ಲ’ ಎಂದು ರಾಜೀವ್ ರೈ ಎಕ್ಸ್ ಸಂದೇಶದಲ್ಲಿ ಭಾನುವಾರ ಸಂಜೆ ಉಲ್ಲೇಖಿಸಿದ್ದರು.

ಎಸ್‌ಪಿ ಸಂಸದ ರಾಜೀವ್ ರೈ ಎಕ್ಸ್ ಸಂದೇಶ

ಇಷ್ಟೇ ಅಲ್ಲದೆ, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಸಂಬಂಧಿಸಿದ ಯಾವೆಲ್ಲ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿದ್ದರೂ ಅವುಗಳ ಸ್ಕ್ರೀನ್‌ಶಾಟ್ ಲಗತ್ತಿಸಿದ್ದಾರೆ. ಯಾವ ಕರೆಗೂ ಟ್ರಾಫಿಕ್ ಪೊಲೀಸರು ಸ್ಪಂದಿಸಿಲ್ಲ ಎಂದಿದ್ದಾರೆ.

ಈ ಎಕ್ಸ್​ ಸಂದೇಶದ ಬಗ್ಗೆ ಈಗ ವ್ಯಾಪಕ ಚರ್ಚಯಾಗುತ್ತಿದೆ. ನೆಟ್ಟಿಗರು ಅನೇಕ ರೀತಿಯ ಕಮೆಂಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: 5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ

ಈಮಧ್ಯೆ, ಸಂಸದ ರಾಜೀವ್​ ರೈ ಅಸಮಾಧಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ರಾಜೀವ್​ ರೈ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಬೆಂಗಳೂರು ಏನು, ಅದರ ಮಹತ್ವ ಏನು ಎಂಬ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Mon, 1 December 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ