ಟಿಕೆಟ್​ ವಿಚಾರಕ್ಕೆ ಗಲಾಟೆ: ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಮಹಿಳೆ ಹಲ್ಲೆ ಆರೋಪ

ಟಿಕೆಟ್‌ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್​ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ. 

ಟಿಕೆಟ್​ ವಿಚಾರಕ್ಕೆ ಗಲಾಟೆ: ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಮಹಿಳೆ ಹಲ್ಲೆ ಆರೋಪ
ಮಹಿಳಾ ಕಂಡಕ್ಟರ್​ ಮೇಲೆ ಹಲ್ಲೆ
Edited By:

Updated on: Jan 14, 2024 | 3:00 PM

ಬೆಂಗಳೂರು, ಜನವರಿ 14: ಟಿಕೆಟ್‌ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ (BMTC) ಮಹಿಳಾ ಕಂಡಕ್ಟರ್​ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಇಂದು ಬೆಳಿಗ್ಗೆ ನಗರೂರಿನಿಂದ ಮೆಜಸ್ಟಿಕ್ ಬರುವ ಮಾರ್ಗದಲ್ಲಿ ಡಿಪೋ- 40 ಕ್ಕೆ ಸೇರಿದ ಬಿಎಂಟಿಸಿ ಬಸ್​ನಲ್ಲಿ ಘಟನೆ ನಡೆದಿದೆ. ದಾಸರಹಳ್ಳಿ ಬಳಿ ಬಸ್ ಕಂಡಕ್ಟರ್ ಸುಕನ್ಯಾ ಮೇಲೆ ಹಲ್ಲೆ ಮಾಡಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್​ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ.

ಪಾದಚಾರಿಗಳಿಗೆ ಕಾರು ಡಿಕ್ಕಿ: ಮಹಿಳೆ ಸಾವು, ಮತ್ತೋರ್ವನಿಗೆ ಗಾಯ

ಮೈಸೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ಚಿಕ್ಕಮ್ಮತಾಯಿ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಇದನ್ನೂ ಓದಿ:

ಆಲಗೂಡು ಗ್ರಾಮದ ನಿವಾಸಿ ಜಯಮ್ಮ ಮೃತ ಮಹಿಳೆ. ಜಯರಾಮು ಎಂಬುವರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಂತಾರಾಜ್ಯ ಗಾಂಜಾ ಮಾರಾಟಗಾರನ ಬಂಧನ

ಆನೇಕಲ್: ಅಂತಾರಾಜ್ಯ ಗಾಂಜಾ ಮಾರಾಟಗಾರನನ್ನು ಹೆಬ್ಬಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಸುದೀಪ್ತಾ ಕುಮಾರ್ ಪಂಡ(36) ಬಂಧಿತ ಆರೋಪಿ. ಐದು ಕೆಜಿಯಷ್ಟು ಗಾಂಜಾವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಆರೋಪಿ ವಾಸವಿದ್ದ. ಗ್ರಾನೈಟ್ ಹಾಕುವ ಕೆಲಸ ಮಾಡಿಕೊಂಡಿದ್ದ.

ಇದನ್ನೂ ಓದಿ: ಮಂಡ್ಯದಲ್ಲಿ ಬುದ್ಧಿಮಾಂದ್ಯ ಮಹಿಳೆಯ ರೇಪ್​ & ಮರ್ಡರ್? ಜಮೀನೊಂದರಲ್ಲಿ ಬೆತ್ತಲೆ ಶವ ಪತ್ತೆ

ಒರಿಸ್ಸಾದಿಂದ ರೈಲಿನ ಮೂಲಕ ಗಾಂಜಾ ತಂದು ಬೊಮ್ಮಸಂದ್ರ ಡಿ-ಮಾರ್ಟ್ ಹಿಂಭಾಗದಲ್ಲಿ ಮಾರಾಟ ಮಾಡುತ್ತಿದ್ದ. ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ-ಬಿಟಿ ಕಂಪನಿ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಹೆಬ್ಬಗೋಡಿ ಪೊಲೀಸರ ದಾಳಿ ಮಾಡಿದ್ದಾರೆ. ಈ ವೇಳೆ ಗಾಂಜಾ ಸಮೇತವಾಗಿ ಆರೋಪಿಯ ಬಂಧಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Sun, 14 January 24

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us