AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Exam: ಯುಪಿಎಸ್​ಸಿ ಪರೀಕ್ಷೆ, ಭಾನುವಾರ ಬೆಳಗ್ಗೆ 6ರಿಂದಲೇ ಆರಂಭವಾಗಲಿದೆ ಮೆಟ್ರೋ ಸಂಚಾರ

ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

UPSC Exam: ಯುಪಿಎಸ್​ಸಿ ಪರೀಕ್ಷೆ, ಭಾನುವಾರ ಬೆಳಗ್ಗೆ 6ರಿಂದಲೇ ಆರಂಭವಾಗಲಿದೆ ಮೆಟ್ರೋ ಸಂಚಾರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:May 26, 2023 | 7:17 PM

Share

ಬೆಂಗಳೂರು: ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ (UPSC Preliminary Exam) ಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ತಿಳಿಸಿದೆ. ಯುಪಿಎಸ್​ಸಿ ಪರೀಕ್ಷೆ ಕಾರಣ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್​​ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಇದನ್ನೂ ಓದಿ: Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು

ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತದೆ. ಉಳಿದಂತೆ ವಾರದ ದಿನಗಳಲ್ಲಿ ಸೋಮವಾರದಿಂದ ಶನಿವಾರದ ವರೆಗೆ ಬೆಳಗ್ಗೆ 5 ಗಂಟೆಗೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತದೆ.

ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗದ 2 ಕಿಲೋಮೀಟರ್ ಮಾರ್ಗ ಜುಲೈ 15 ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ. ಬೆನ್ನಿಗಾನಹಳ್ಳಿ ಬಳಿ ಬೆಂಗಳೂರು-ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್ ಅಳವಡಿಕೆ ಕೆಲಸ ಪೂರ್ಣಗೊಳ್ಳದ ಕಾರಣ ಸದ್ಯ ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಜುಲೈ 15ರ ಒಳಗಾಗಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್​ಸಿಎಲ್ ಇತ್ತೀಚೆಗೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 26 May 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ