AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Exam: ಯುಪಿಎಸ್​ಸಿ ಪರೀಕ್ಷೆ, ಭಾನುವಾರ ಬೆಳಗ್ಗೆ 6ರಿಂದಲೇ ಆರಂಭವಾಗಲಿದೆ ಮೆಟ್ರೋ ಸಂಚಾರ

ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

UPSC Exam: ಯುಪಿಎಸ್​ಸಿ ಪರೀಕ್ಷೆ, ಭಾನುವಾರ ಬೆಳಗ್ಗೆ 6ರಿಂದಲೇ ಆರಂಭವಾಗಲಿದೆ ಮೆಟ್ರೋ ಸಂಚಾರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:May 26, 2023 | 7:17 PM

Share

ಬೆಂಗಳೂರು: ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ (UPSC Preliminary Exam) ಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ತಿಳಿಸಿದೆ. ಯುಪಿಎಸ್​ಸಿ ಪರೀಕ್ಷೆ ಕಾರಣ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್​​ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಇದನ್ನೂ ಓದಿ: Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು

ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತದೆ. ಉಳಿದಂತೆ ವಾರದ ದಿನಗಳಲ್ಲಿ ಸೋಮವಾರದಿಂದ ಶನಿವಾರದ ವರೆಗೆ ಬೆಳಗ್ಗೆ 5 ಗಂಟೆಗೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತದೆ.

ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗದ 2 ಕಿಲೋಮೀಟರ್ ಮಾರ್ಗ ಜುಲೈ 15 ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ. ಬೆನ್ನಿಗಾನಹಳ್ಳಿ ಬಳಿ ಬೆಂಗಳೂರು-ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್ ಅಳವಡಿಕೆ ಕೆಲಸ ಪೂರ್ಣಗೊಳ್ಳದ ಕಾರಣ ಸದ್ಯ ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಜುಲೈ 15ರ ಒಳಗಾಗಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್​ಸಿಎಲ್ ಇತ್ತೀಚೆಗೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 26 May 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ