AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕೊರೆದು 13 ತಿಂಗಳ ನಂತರ ಹೊರಬಂದ ಊರ್ಜಾ ಯಂತ್ರ

ಉರ್ಜಾ ಯಂತ್ರ ಕಂಟೋನ್ಮೆಂಟ್ನಿಂದ ಶಿವಾಜಿನಗರ ಮಾರ್ಗವಾಗಿ ಸುರಂಗ ಕೊರೆದಿದೆ. 855 ಮೀಟರ್ ಸುರಂಗ ಕೊರೆದು ಟಿಬಿಎಂ ಹೊರ ಬಂದಿದೆ. ಎರಡನೇ ಹಂತದಲ್ಲಿ ಒಟ್ಟು 9 ಟಿಬಿಎಂ ಮಿಷನ್​ಗಳು ಕಾರ್ಯ ನಿರ್ವಹಿಸುತ್ತಿವೆ.

ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕೊರೆದು 13 ತಿಂಗಳ ನಂತರ ಹೊರಬಂದ ಊರ್ಜಾ ಯಂತ್ರ
ಊರ್ಜಾ ಯಂತ್ರ ಹೊರಬರುತ್ತಿರುವುದನ್ನು ಬಸವರಾಜ ಬೊಮ್ಮಾಯಿ ವೀಕ್ಷಿಸಿದರು
TV9 Web
| Edited By: |

Updated on:Sep 22, 2021 | 10:57 AM

Share

ಬೆಂಗಳೂರು: ಮೆಟ್ರೋ (Metro) ಸುರಂಗ (Tunnel) ಕೊರೆದು ಸುಮಾರು 13 ತಿಂಗಳ ನಂತರ ಊರ್ಜಾ ಯಂತ್ರ (Urja Machine) ಹೊರಬಂದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕಾಮಗಾರಿ ನಡೆಯುತ್ತಿದೆ. 855 ಮೀಟರ್ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, 2020ರ ಆಗಸ್ಟ್​ನಲ್ಲಿ ಊರ್ಜಾ ಯಂತ್ರ ಸುರಂಗ ಪ್ರವೇಶಿಸಿತ್ತು. 13 ತಿಂಗಳ ಬಳಿಕ ಇಂದು (ಸೆ.22) ಊರ್ಜಾ ಯಂತ್ರ ಹೊರಬಂದಿದೆ. ಯಂತ್ರ ಹೊರಬರುವ ವೇಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದು, ಊರ್ಜಾ ಬ್ರೇಕ್ ಥ್ರೂ ವೀಕ್ಷಿಸಿದ್ದಾರೆ.

ಉರ್ಜಾ ಯಂತ್ರ ಕಂಟೋನ್ಮೆಂಟ್​ನಿಂದ ಶಿವಾಜಿನಗರ ಮಾರ್ಗವಾಗಿ ಸುರಂಗ ಕೊರೆದಿದೆ. 855 ಮೀಟರ್ ಸುರಂಗ ಕೊರೆದು ಟಿಬಿಎಂ ಹೊರ ಬಂದಿದೆ. ಎರಡನೇ ಹಂತದಲ್ಲಿ ಒಟ್ಟು 9 ಟಿಬಿಎಂ ಮಿಷನ್​ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಸುರಂಗ ಮಾರ್ಗ ಕೆಲಸ ಪೂರ್ಣಗೊಳಿಸಿ ಮೊದಲ ಟಿಬಿಎಂ ಉರ್ಜಾ ಹೊರಬಂದಿದೆ.

ಶಿವಾಜಿನಗರ ಭಾಗದಲ್ಲಿ ಭೂಮಿಯೊಳಗೆ ಸುರಂಗ ಮಾರ್ಗ ಕೊರೆಯುವುದು ದೊಡ್ಡ ಸವಾಲಾಗಿತ್ತು. ಸಡಿಲ ಮಣ್ಣು ಹಾಗೂ ಸಾಕಷ್ಟು ಬೋರ್​ವೆಲ್​ಗಳು ಸಿಕ್ಕಿದ್ದವು. ಇದನ್ನೆಲ್ಲಾ ಬೇಧಿಸಿ ಊರ್ಜಾ ಯಶಸ್ವಿಯಾಗಿ ತನ್ನ ಕೆಲಸ ಮುಗಿಸಿ ಸುರಂಗ ಮಾರ್ಗದಿಂದ ಹೊರಬಂದಿದೆ. ಈ ಮಹತ್ವದ ಕ್ಷಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಾಕ್ಷಿಯಾಗಿದ್ದಾರೆ. ಮೆಟ್ರೋ ಫೇಸ್ 2 ನಲ್ಲಿ, ಗೊಟ್ಟಿಗೆರೆಯಿಂದ ನಾಗಾವರವರೆಗೆ 21 ಕಿ.ಮೀ ಉದ್ದ ಮೆಟ್ರೋ ಕಾಮಗಾರಿ ನಡೆಯುತ್ತಿದೆ.

ಇದರಲ್ಲಿ ಸುಮಾರು 13 ಕಿ.ಮೀ ನಷ್ಟು ಸುರಂಗ ಮಾರ್ಗ ಕಾಮಗಾರಿ ಮಾಡಲಾಗುತ್ತಿದೆ. ಇದಕ್ಕಾಗಿ 9 ಟಿಬಿಮ್ (ಟನಲ್ ಬೋರಿಂಗ್ ಮಿಷನ್)ಗಳು ಕೆಲಸ ನಿರ್ವಹಿಸುತ್ತಿವೆ. ಈ 9 ಮಿಷನ್ಗಳ ಪೈಕಿ ಊರ್ಜಾ ಸುರಂಗ ಮಾರ್ಗ ಕೆಲಸ ಮುಗಿಸಿ ಹೊರ ಬರುತ್ತಿರುವ ಮೊದಲ ಯಂತ್ರವಾಗಿದೆ.

ಇದನ್ನೂ ಓದಿ

ದೇವನಹಳ್ಳಿ: ಬಿಎಸ್ಎಫ್ ಕ್ಯಾಂಪ್​ನಲ್ಲಿ ಕೊರೊನಾ ರಣಕೇಕೆ; ಮೇಘಾಲಯದಿಂದ ಬಂದಿದ್ದ 70 ಯೋಧರಿಗೆ ಕೊರೊನಾ, ಓರ್ವ ಗಂಭೀರ

ಬೆಂಗಳೂರು ಬಸ್​ನಲ್ಲಿ ಗೀತ ಗೋವಿಂದಂ ಸಿನಿಮಾ ಸ್ಟೈಲ್​ನಲ್ಲಿ ಹುಡುಗಿಗೆ ಮುತ್ತು ಕೊಟ್ಟಿದ್ದ ಬಳ್ಳಾರಿಯ ಇಂಜಿನಿಯರ್​ ಬಂಧನ

(Urja machine came out 13 months after the Metro Tunnel was drilled At shivajinagar)

Published On - 10:55 am, Wed, 22 September 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್