AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಉಳಿಯಲು 5 ವರ್ಷ ಅವಕಾಶ: ಮೋದಿಗೆ ಧನ್ಯವಾದ ತಿಳಿಸಿದ ಅಮೆರಿಕದ ಉದ್ಯಮಿ

ಅಮೆರಿಕನ್ ಉದ್ಯಮಿ ಟೋನಿ ಕ್ಲೋರ್ ಬೆಂಗಳೂರಿನಲ್ಲಿ ಬ್ಲಾಕ್‌ಚೈನ್ ಮತ್ತು AI ಉದ್ಯಮಕ್ಕಾಗಿ 5 ವರ್ಷಗಳ ಭಾರತ ವೀಸಾ ಪಡೆದಿದ್ದಾರೆ. ಭಾರತದ "ಅತಿಥಿ ದೇವೋ ಭವ" ಸಂಸ್ಕೃತಿ ಮತ್ತು ವಿದೇಶಿಗರನ್ನು ಸ್ವಾಗತಿಸುವ ನೀತಿಯನ್ನು ಅವರು ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿ ಅವರ ನೀತಿ ಭಾರತ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಉಳಿಯಲು 5 ವರ್ಷ ಅವಕಾಶ: ಮೋದಿಗೆ ಧನ್ಯವಾದ ತಿಳಿಸಿದ ಅಮೆರಿಕದ ಉದ್ಯಮಿ
ವೈರಲ್ ಪೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on: Oct 14, 2025 | 3:30 PM

Share

ಬೆಂಗಳೂರು, ಅ.14: ಭಾರತದ ವಿಚಾರಗಳು ಹಾಗೂ ಸಂಸ್ಕೃತಿ, (American entrepreneur )ಮಾನವಿಯ ಮೌಲ್ಯಗಳ ಬಗ್ಗೆ ವಿದೇಶಿಗರು ಹೆಚ್ಚು ಇಷ್ಟಪಡುತ್ತಾರೆ. ಏಕೆಂದರೆ ಭಾರತದ್ದು ಅತಿಥಿ ದೇವೋ ಭವ ಸಂಸ್ಕೃತಿ, ಭಾರತದಲ್ಲಿ ವಿದೇಶಿಗರಿಗೆ ವಿಭಿನ್ನವಾದ ಗೌರವವನ್ನು ನೀಡಲಾಗುತ್ತದೆ. ವಿದೇಶಿಗರಿಗೂ ಅಷ್ಟೇ ಭಾರತದ ಸಂಸ್ಕೃತಿ, ಇಲ್ಲಿನ ವಿಚಾರಧಾರೆಗಳು ತುಂಬಾ ಇಷ್ಟಪಡುತ್ತಾರೆ. ಇದೀಗ ಅಮೆರಿಕ ವ್ಯಕ್ತಿಯೊಬ್ಬರು ತನ್ನ ಉದ್ಯಮಗಾಗಿ ಭಾರತಕ್ಕೆ ಅಂದರೆ ಕರ್ನಾಟಕಕ್ಕೆ ಬಂದಿದ್ದಾರೆ. ಇದೀಗ ಅವರಿಗೆ ಭಾರತ ಸರ್ಕಾರ ವೀಸಾ ನೀಡಿ, 5 ವರ್ಷಗಳ ಕಾಲ ಭಾರತದಲ್ಲಿ ಇರಲು ಅವಕಾಶ ನೀಡಿದೆ. ಈ ಖುಷಿಯ ವಿಚಾರವನ್ನು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಇದರ ಜತೆಗೆ ತಮ್ಮ ಕರ್ನಾಟಕದ ಸ್ನೇಹಿತೆಯನ್ನು ಪರಿಚಯ ಮಾಡಿದ್ದಾರೆ.

ಅಮೆರಿಕದ ಟೋನಿ ಕ್ಲೋರ್​​ ಎಂಬ ಉದ್ಯಮಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈ ವಿಚಾರವನ್ನು ಎಕ್ಸ್​​ನಲ್ಲಿ ತಮ್ಮ ಗೆಳತಿಗೆ ಚುಂಬಿಸುವ ಫೋಟೋವನ್ನು ಹಾಕಿಕೊಂಡು ಹೇಳಿಕೊಂಡಿದ್ದಾರೆ.  ಇನ್ನು ಈ ಪೋಸ್ಟ್​​​ನಲ್ಲಿ ಪ್ರಧಾನಿ ಮೋದಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಟೋನಿ ಕ್ಲೋರ್ ಅವರನ್ನು ಈ ಬಗ್ಗೆ ಹಿಂದೂಸ್ಥಾನ್​​​​ ಟೈಮ್ಸ್​​​  ವಿಶೇಷ ಸಂದರ್ಶನವನ್ನು ಮಾಡಿತ್ತು. ಐದು ವರ್ಷಗಳ ಭಾರತೀಯ ವೀಸಾವನ್ನು ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಟೋನಿ ಕ್ಲೋರ್, ಭಾರತದ ಸ್ವಾಗತಾರ್ಹ ರೀತಿಯನ್ನು ಅಮೆರಿಕದ ನಿರ್ಬಂಧಿತ ವಿಧಾನಕ್ಕೆ ಹೋಲಿಸಿದ್ದಾರೆ. ಅಂದರೆ, ಭಾರತ ಎಲ್ಲರನ್ನೂ ಸ್ವಾಗತಿಸುತ್ತದೆ. ಆದರೆ ಅಮೆರಿಕ ವಲಸಿಗರನ್ನು ಓಡಿಸುವ ಪ್ರವೃತ್ತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಭಾರತವು ವಿದೇಶಿ ಬ್ಲಾಕ್‌ಚೈನ್ ಮತ್ತು AI ಬಿಲ್ಡರ್​​​​ಗಳನ್ನು ಸ್ವಾಗತಿಸುತ್ತಿದೆ. ಈ ಕಾರಣಕ್ಕೆ ನನಗೆ 5 ವರ್ಷಗಳ ವೀಸಾ ನೀಡಿದೆ ಎಂದು ಹೇಳಿದ್ದಾರೆ.

ಇಲ್ಲಿದೆ ನೋಡಿ ಪೋಸ್ಟ್​​:

ಭಾರತ ವಿದೇಶಿಗರಿಗೂ ಅವಕಾಶವನ್ನು ನೀಡುತ್ತಿದೆ. ಈ ಮೂಲಕ ತನ್ನ ದೇಶದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದೆ. ಆದರೆ ಟ್ರಂಪ್ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅಮೆರಿಕ ವಿದೇಶಿಗರಿಗೆ ಕಿಕ್ ರಾಕ್ ಮಾಡುತ್ತಿದೆ.  ಆದರೆ ಭಾರತ ಸ್ವಾಗತ ಭಾಯ್ ಎಂದು ಹೇಳುತ್ತಿದೆ. ಈ ಮೂಲಕ ಟ್ರಂಪ್​​​​​ ವಿಧಾನಕ್ಕೂ ಹಾಗೂ ಭಾರತ ಪ್ರಧಾನಿ ಮೋದಿಯ ನೀತಿಗೂ ಇರುವ ವ್ಯತ್ಯಾಸವನ್ನು ತಿಳಿಸಿದ್ದಾರೆ. ಎಕ್ಸ್​​​ನಲ್ಲಿ ಟೋನಿ ಕ್ಲೋರ್ ತಮ್ಮ ವೀಸಾ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ B-1 ವೀಸಾವನ್ನು ಸೆಪ್ಟೆಂಬರ್ 23, 2025 ರಂದು ನೀಡಲಾಯಿತು ಮತ್ತು ಸೆಪ್ಟೆಂಬರ್ 22, 2030 ರವರೆಗೆ ಮಾನ್ಯವಾಗಿರುತ್ತದೆ. B-1 ವೀಸಾವು ಸಾಮಾನ್ಯವಾಗಿ ಸಭೆಗಳು, ಭೇಟಿ, ವಾಣಿಜ್ಯ ಅವಕಾಶಗಳ ಉದ್ದೇಶಗಳಿಗಾಗಿ ನೀಡಲಾಗುತ್ತದೆ.

ಇದನ್ನೂ ಓದಿ: ಅಬ್ಬಬ್ಬಾ, ಬೆಂಗಳೂರಿನಲ್ಲಿ ಮನೆ ಕೆಲಸದವರಿಗೆ ತಿಂಗಳಿಗೆ 45 ಸಾವಿರ ರೂ. ವೇತನ ನೀಡುವ ರಷ್ಯಾದ ಮಹಿಳೆ

ಭಾರತೀಯ ರಾಯಭಾರ ಕಚೇರಿಗಳ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, B-1 ವೀಸಾ ಭಾರತದಲ್ಲಿ ವ್ಯಾಪಾರ ಉದ್ಯಮಗಳನ್ನು ಸ್ಥಾಪಿಸಲು ಬಯಸುವ ವಿದೇಶಿಯರಿಗೆ ಇದನ್ನು ನೀಡಲಾಗುತ್ತದೆ. ಕೈಗಾರಿಕಾ ಅಥವಾ ವ್ಯಾಪಾರ ಉದ್ಯಮವನ್ನು ಸ್ಥಾಪಿಸಲು, ಇದು ಕೈಗಾರಿಕಾ, ವಾಣಿಜ್ಯ ಅಥವಾ ಗ್ರಾಹಕ ವಸ್ತುಗಳನ್ನು ಖರೀದಿಸಲು ಅಥವಾ ಮಾರಾಟ ಮಾಡಲು ಭಾರತಕ್ಕೆ ಭೇಟಿ ನೀಡಲು” ಅನುಮತಿಸುತ್ತದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್