AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಉದ್ಯಮಗಳ ಮೇಲೂ ಅಮೆರಿಕದ ಹೆಚ್ಚುವರಿ ತೆರಿಗೆ ಹೊರೆ: ಉದ್ಯೋಗ ಕಡಿತದ ಆತಂಕ

ಭಾರತದ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರ ತೆರಿಗೆ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅಮೆರಿಕದ ಹೆಚ್ಚುವರಿ ತೆರಿಗೆಯ ಬಿಸಿ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ತಟ್ಟಿದೆ. ಮುಖ್ಯವಾಗಿ ಬೆಂಗಳೂರಿಂದ ಸಣ್ಣ ಉದ್ಯಮಗಳ ಮೇಲೆ ತಿರುಗಿ ಹೊರೆ ಬಿದ್ದಿದೆ. ಬೆಂಗಳೂರಿಗೇನು ಸಂಕಷ್ಟ ಎಂಬ ವಿವರ ಇಲ್ಲಿದೆ.

ಬೆಂಗಳೂರಿನ ಉದ್ಯಮಗಳ ಮೇಲೂ ಅಮೆರಿಕದ ಹೆಚ್ಚುವರಿ ತೆರಿಗೆ ಹೊರೆ: ಉದ್ಯೋಗ ಕಡಿತದ ಆತಂಕ
ಉದ್ಯೋಗ ಕಡಿತದ ಆತಂಕ
ವಿನಯ್​ ಕಾಶಪ್ಪನವರ್​
| Edited By: |

Updated on: Aug 29, 2025 | 10:13 AM

Share

ಬೆಂಗಳೂರು, ಆಗಸ್ಟ್ 29: ಭಾರತಕ್ಕೆ ಅಮೆರಿಕದ ಹೆಚ್ಚುವರಿ ತೆರಿಗೆ (US Tax) ಶಾಕ್‌ ನೀಡಿದೆ. ರಷ್ಯಾದಿಂದ ತೈಲ ಖರೀದಿಯ ನೆಪವೊಡ್ಡಿ ಈ ಹಿಂದೆ ಘೋಷಿಸಿದಂತೆ ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಅಮೆರಿಕದ ನಿರ್ಧಾರ ಬುಧವಾರದಿಂದಲೇ ಜಾರಿಗೆ ಬಂದಿದೆ. ಇದರೊಂದಿಗೆ ಭಾರತದ ಉತ್ಪನ್ನಗಳ ಮೇಲಿನ ಅಮೆರಿಕದ ತೆರಿಗೆ ಪ್ರಮಾಣ ಶೇ 50ಕ್ಕೆ ಏರಿಕೆಯಾಗಿದೆ. ಇದರ ಬಿಸಿ ಕರ್ನಾಟಕಕ್ಕೆ, ಅದರಲ್ಲೂ ಬೆಂಗಳೂರಿಗೆ (Bengaluru) ಹೆಚ್ಚಾಗಿ ತಟ್ಟಿದೆ.

ಭಾರತದಿಂದ ರಫ್ತಾಗುವ ಶೇ 66ರಷ್ಟು ಉತ್ಪನ್ನಗಳ ಮೇಲೆ ತೆರಿಗೆಯ ಕಾರ್ಮೋಡ ಕವಿದಿದೆ.ಬೆಂಗಳೂರು ಸರಿದಂತೆ ಸುತ್ತಮುತ್ತಲ ಸಣ್ಣ ಕೈಗಾರಿಕೆ, ಚರ್ಮದ ಉದ್ಯಮ, ಪೀಣ್ಯ ಗಾರ್ಮೆಂಟ್ಸ್ ಎಂಜನಿಯರಿಂಗ್ ಉಪಕರಣಗಳ ಮೇಲೂ ಹೆಚ್ಚುವರಿ ತೆರಿಗೆ ಬಿಸಿ ತಟ್ಟಲಿದೆ ಎಂದು ಎಫೆಕೆಸಿಸಿಐ ತಿಳಿಸಿದೆ.

ಅಮೆರಿಕ ಹೆಚ್ಚುವರಿ ತೆರಿಗೆಯಿಂದ ಬೆಂಗಳೂರಿನ ಯಾವೆಲ್ಲ ಉದ್ಯಮಗಳಿಗೆ ಹೊರೆ?

  • ಬಟ್ಟೆ ಹಾಗೂ ಜವಳಿ
  • ಹರಳುಗಳು ಮತ್ತು ಆಭರಣಗಳು
  • ಫರ್ನಿಚರ್‌ಗಳು, ಕಾರ್ಪೆಟ್‌ಗಳು
  • ಯಂತ್ರೋಪಕರಣಗಳು
  • ಸಿಗಡಿ, ಇತರ ಸಮುದ್ರ ಉತ್ಪನ್ನಗಳು
  • ಚರ್ಮದ ಉದ್ಯಮ

ಯಾವೆಲ್ಲ ವಸ್ತುಗಳಿಗೆ ಹೆಚ್ಚುವರಿ ತೆರಿಗೆಯಿಂದ ವಿನಾಯಿತಿ?

  • ಔಷಧ, ಉಕ್ಕು,
  • ಅಲ್ಯುಮಿನಿಯಂ
  • ತಾಮ್ರದ ವಸ್ತುಗಳು
  • ಪ್ಯಾಸೆಂಜರ್‌ ಕಾರು
  • ಕಡಿಮೆ ಸಾಮರ್ಥ್ಯದ ಟ್ರಕ್‌, ಆಟೋ ಬಿಡಿಭಾಗಗಳು
  • ಎಲೆಕ್ಟ್ರಾನಿಕ್ಸ್‌ ಉಪಕರಣ

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಉತ್ಪನ್ನಗಳ ತೆರಿಗೆ ಏರಿಕೆ ಮಾಡಿರುವುದಕ್ಕೆ ಜನ ಸಾಮಾನ್ಯರು, ರೈತರು ಹಾಗೂ ಐಟಿ ಉದ್ಯೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ಕಡಿತದ ಆತಂಕ

ಶೇ 50ರಷ್ಟು ತೆರಿಗೆಯಿಂದಾಗಿ ಕಾರ್ಮಿಕ ಕೇಂದ್ರಿತ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೆ ನೇರ ಹೊರೆ ಬೀಳುತ್ತಿದೆ. ಬೇಡಿಕೆ ಕುಸಿತದಿಂದ ಹಲವು ಕಂಪನಿಗಳಲ್ಲಿ ಉದ್ಯೋಗ ಕಡಿತದ ಆತಂಕ ಹೆಚ್ಚಾಗಲಿದೆ. ಭಾರತದ ಜಿಡಿಪಿಗೆ ಶೇ 0.2ರಿಂದ 1ರಷ್ಟು ಹೊಡೆತ ಬೀಳುವ ನಿರೀಕ್ಷೆ ಇದ್ದು ಭಾರತ ಇದನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕೇಂದ್ರದ ವಿರುದ್ಧ ಕರ್ನಾಟಕ ಸಚಿವರ ಆಕ್ರೋಶ

ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಅಮೆರಿಕ-ರಷ್ಯಾ ನಡುವಣ ಶೀತಲ ಸಮರ ಭಾರತಕ್ಕೆ ಏಟು ನೀಡಿದೆ. ರಷ್ಯಾದಿಂದ ಭಾರತ ತೈಲೋತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ಟ್ರಂಪ್‌ ಹೊಟ್ಟೆ ಉರಿಗೆ ಕಾರಣವಾಗಿದೆ. ಇದೇ ನೆಪವೊಡ್ಡಿ ಭಾರತದ ಉತ್ಪನ್ನಗಳ ಮೇಲಿದ್ದ ತೆರಿಗೆ ಏರಿಕೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್, ನಮಗೆ ಯಾರು ಸ್ನೇಹಿತರು ಎಂಬುದೇ ತಿಳಿಯುತ್ತಿಲ್ಲ. ಮೋದಿಯವರು ಟ್ರಂಪ್ ಬಹಳ ಆಪ್ತರು ಎನ್ನುತ್ತಾರೆ. ಒಳ್ಳೆಯ ಸಂಬಂಧ ಇದೆ ಅಂತಾರೆ. ಟ್ರಂಪ್ ಅಧ್ಯಕ್ಷರಾದಗ ಬಿಜೆಪಿಯವರು ತುಂಬಾ ಸಂತೋಷ ಪಟ್ಟಿದ್ದರು. ಈಗ ಟ್ರಂಪ್ ನಮ್ಮ ದೇಶದ ಬಗ್ಗೆ ಯಾವುದೇ ಕಾಳಜಿ ತೋರಿಸುತ್ತಿಲ್ಲ. ಪಾಕ್ ಜತೆ ಯುದ್ಧವಾದಾಗಲೂ ಉತ್ತಮ ಬಾಂಧವ್ಯ ತೊರಿಸಿಲ್ಲ. ಪಾಕ್ ಜೊತೆ ಅಮೆರಿಕ ಉತ್ತಮ ಸಂಬಂಧ ಹೊಂದಿದೆ. ಪಾಕಿಸ್ತಾನವನ್ನು ಅಮೆರಿಕ ಹೋಗುಳುತ್ತಿದೆ ಎಂದರು.

ಇದನ್ನೂ ಓದಿ: ಅಮೆರಿಕದ ಶೇ. 50 ಟ್ಯಾರಿಫ್ ಚಾಲ್ತಿಗೆ; ಬಾಧಿತವಾಗುವ ಭಾರತೀಯ ಸೆಕ್ಟರ್​ಗಳ್ಯಾವುವು? ಇಲ್ಲಿದೆ ಡೀಟೇಲ್ಸ್

ಎಲ್ಲಿದೆ ಒಳ್ಳೆಯ ಸ್ನೇಹ ಎಲ್ಲ? ನಮಗೆ ಒಳ್ಳೆಯ ಮಿತ್ರ ದೇಶಗಳೇ ಇಲ್ಲ. ಇತ್ತ ಚೀನಾ ಬೆಂಬಲವೂ ಇಲ್ಲ. ನಮಗೆ ನೆರೆ ದೇಶಗಳ ಬೆಂಬಲ ಇಲ್ಲ. ನಮ್ಮ ವಿದೇಶಾಂಗ ನೀತಿ ಸಂಪೂರ್ಣವಾಗಿ ವಿಫಲವಾಗಿದೆ. ಕೇವಲ ಪ್ರಚಾರಕ್ಕೆ ಮಾತ್ರ ಸಿಮೀತವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ