AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಪ್ರವೇಶ​ಕ್ಕೆ ನಕಲಿ ಪಾಸ್​ ಬಳಕೆ: ಕಲರ್ ಜೆರಾಕ್ಸ್, ಅವಧಿ ಮುಗಿದಿರುವ ಪಾಸ್​ಗಳು ಪತ್ತೆ

ಜು.7 ರಾಜ್ಯ ಬಜೆಟ್​ ಮಂಡನೆ ವೇಳೆ ತಿಪ್ಪೇರುದ್ರಪ್ಪ ಎಂಬ ವ್ಯಕ್ತಿ ಸದನದ ಒಳಗೆ ಪ್ರವೇಶಿಸಿ, ಶಾಸಕ ಸ್ಥಾನದಲ್ಲಿ ಕೂತಿದ್ದು ಭದ್ರತಾ ವೈಪಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಇದಾದ ನಂತರ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ವಿಧಾನಸೌಧದಲ್ಲಿ ನಕಲಿ ಪಾಸ್​​ಗಳ ಹಾವಳಿ ಜಾಲವನ್ನು ಪತ್ತೆ ಹಚ್ಚಿದ್ದಾರೆ.

ವಿಧಾನಸೌಧ ಪ್ರವೇಶ​ಕ್ಕೆ ನಕಲಿ ಪಾಸ್​ ಬಳಕೆ: ಕಲರ್ ಜೆರಾಕ್ಸ್, ಅವಧಿ ಮುಗಿದಿರುವ ಪಾಸ್​ಗಳು ಪತ್ತೆ
ನಕಲಿ ಪಾಸ್​​​ಗಳು
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ|

Updated on:Jul 14, 2023 | 11:34 AM

Share

ಬೆಂಗಳೂರು: ಜು.7 ರಂದು ರಾಜ್ಯ ಬಜೆಟ್​ (Karnataka Budget) ಮಂಡನೆ ವೇಳೆ ತಿಪ್ಪೇರುದ್ರಪ್ಪ ಎಂಬ ವ್ಯಕ್ತಿ ಸದನದ ಒಳಗೆ ಪ್ರವೇಶಿಸಿ, ಶಾಸಕರ ಸ್ಥಾನದಲ್ಲಿ ಕೂತಿದ್ದು ಭದ್ರತಾ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಇದಾದ ನಂತರ ಎಚ್ಚೆತ್ತುಕೊಂಡ ಪೊಲೀಸರು (Bengaluru Police) ವಿಧಾನಸೌಧದಲ್ಲಿ (Vidhana Soudha) ನಕಲಿ ಪಾಸ್​​ಗಳ (Fake pass) ಹಾವಳಿ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಈ ನಕಲಿ ಪಾಸ್​ಗಳನ್ನು ಬಳಸಿ ವಿಧಾನಸೌಧದ ಒಳಗೆ ಆಗಮಿಸುತ್ತಿರುವವರನ್ನು ತಡೆದಿದ್ದಾರೆ.

ಹೌದು ವಿಧಾನಸೌಧ ಭದ್ರತೆ ಗಂಭೀರವಾಗಿ ಪರಿಗಣಿಸಿದ ಭದ್ರತಾ ಪೊಲೀಸರು, ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾರೆ. ಕೇವಲ ನಾಲ್ಕೇ ದಿನದಲ್ಲಿ ಬರೋಬ್ಬರಿ ಮುನ್ನೂರಕ್ಕು ಹೆಚ್ಚು ನಕಲಿ ಪಾಸ್ ಪತ್ತೆಹಚ್ಚಿದ್ದಾರೆ. ಅಧಿಕೃತ ಪಾಸ್​ಗಳನ್ನು ಕಲರ್ ಜೆರಾಕ್ಸ್, ಓಲ್ಡ್ ಪಾಸ್​ಗಳು, ಅವಧಿ ಮುಗಿದಿರುವ ಪಾಸ್​ಗಳು, ಮತ್ತು ವಾಹನಗಳ ನಕಲಿ ಪಾಸ್​​ಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭದ್ರತಾ ಲೋಪದ ಬೆನ್ನಲ್ಲೇ ವಿಧಾನಸೌಧಕ್ಕೆ ಹೈ ಟೈಕ್ನಾಲಜಿ ಭದ್ರತೆ, ಮೂರು ಹಂತದ ಭದ್ರತೆ ಹೇಗಿದೆ ಗೊತ್ತಾ?

ವಿಧಾನಸೌದಕ್ಕೆ ಎಂಟ್ರಿಯಾಗುವ ಎಲ್ಲಾ ಗೇಟ್​ಗಳಲ್ಲಿ ಪ್ರತಿಯೊಬ್ಬರನ್ನು ಪರಿಶೀಲನೆ ಮಾಡುತ್ತಿದ್ದಾರೆ. ನಕಲಿ ಪಾಸ್ ಬಳಸಿ‌ ವಿಧಾನಸೌಧ ಒಳ ಪ್ರವೇಶ ಮಾಡುತ್ತಿದ್ದವರಿಗೆ ತಡೆದಿದ್ದಾರೆ. ಇದೀಗ ಪೊಲೀಸರು ಅವಧಿ‌ ಮುಗಿದಿರುವ ಪಾಸ್, ಕಲರ್ ಜೆರಕ್ಸ್ ಪಾಸ್​ಗಳನ್ನು ಸೀಜ್ ಮಾಡಿದ್ದಾರೆ. ಹಲವು ರಾಜಕಾರಣಿಗಳ ಬೆಂಬಲಿಗರಿಂದ ನಕಲಿ ಪಾಸ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಸದ್ಯ ನಕಲಿ ಪಾಸ ಬಳಸುತ್ತಿದ್ದ ಎಲ್ಲರ ಮಾಹಿತಿ ಸಂಗ್ರಹಿಸಿದ್ದಾರೆ.

ಇನ್ನು ಮಾಜಿ ಎಂಎಲ್ಎ, ಎಂಎಲ್​​ಸಿ ಪಾಸ್​ಗಳೇ ನಕಲಿಯಾಗಿದ್ದು ಆಘಾತಕಾರಿ ಸಂಗತಿಯಾಗಿದೆ. ಇದೀಗ ಪೊಲೀಸರು 300 ಕ್ಕೂ ಹೆಚ್ಚು ನಕಲಿ ಪಾಸ್​ಗಳನ್ನು ವಶಕ್ಕೆ ಪಡೆದಿದ್ದು, ಈ ನಕಲಿ ಪಾಸ್​ಗಳ ಹಿಂದಿನ ಉದ್ದೇಶ ಏನಾಗಿತ್ತು ಎಂದು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Fri, 14 July 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?