ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್

ಮಸೀದಿಗಳಲ್ಲಿ ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವ ಬಗ್ಗೆ ಆಕ್ಷೇಪಿಸಿ ಬೆಂಗಳೂರಿನ ಥಣಿಸಂದ್ರ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದನ್ನು ಇಂದು ವಿಚಾರಣೆ ನಡೆಸಿದ ರಾಜ್ಯ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ ಥಣಿಸಂದ್ರ ನಿವಾಸಿಗಳು ವಾರ್ಡಿನ 7 ಮಸೀದಿಗಳಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ. ಆಜಾನ್​ಗಾಗಿ ಲೌಡ್ ಸ್ಪೀಕರ್ ಬಳಕೆ ಮಾಡುವುದು ಮೂಲಭೂತ ಹಕ್ಕಲ್ಲ, ಹಾಗಾಗಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ […]

ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ

Updated on: Sep 23, 2020 | 6:58 PM

ಮಸೀದಿಗಳಲ್ಲಿ ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವ ಬಗ್ಗೆ ಆಕ್ಷೇಪಿಸಿ ಬೆಂಗಳೂರಿನ ಥಣಿಸಂದ್ರ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದನ್ನು ಇಂದು ವಿಚಾರಣೆ ನಡೆಸಿದ ರಾಜ್ಯ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ

ಥಣಿಸಂದ್ರ ನಿವಾಸಿಗಳು ವಾರ್ಡಿನ 7 ಮಸೀದಿಗಳಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ.

ಆಜಾನ್​ಗಾಗಿ ಲೌಡ್ ಸ್ಪೀಕರ್ ಬಳಕೆ ಮಾಡುವುದು ಮೂಲಭೂತ ಹಕ್ಕಲ್ಲ, ಹಾಗಾಗಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಪೀಠವು ನಿಯಮ ಉಲ್ಲಂಘನೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಹೇಳಿದೆ.

 

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us