AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಾವರಿ ಅಂದ್ರೆ ಕೃಷ್ಣಾ ಮೇಲ್ದಂಡೆ ಯೋಜನೆ ಮಾತ್ರವಾ? ಅಸೆಂಬ್ಲಿಯಲ್ಲಿ ಉತ್ತರ ಕರ್ನಾಟಕ, ಹಳೆ ಮೈಸೂರು ಶಾಸಕರ ಮಧ್ಯೆ ವಾಗ್ವಾದ

ಗೌಡರೇ ರಾಜ್ಯದ ಒಟ್ಟು ನೀರಾವರಿ ಯೋಜನೆಯ ಶೇಕಡಾ 57ರಷ್ಟು ಕೃಷ್ಣಾ ಭಾಗ್ಯ ಜಲ ನಿಗಮ ವ್ಯಾಪ್ತಿಗೆ ಬರುತ್ತದೆ. ಮೈಸೂರು ಮಹಾರಾಜರು KRS ಕನ್ನಂಬಾಡಿ ಕಟ್ಟಿ ಹೋಗಿದ್ದಕ್ಕೆ ನೀವು ಬದುಕಿದ್ದೀರಿ ಎಂದು ಕೆ.ಎಂ.ಶಿವಲಿಂಗೇಗೌಡಗೆ ಶಿವಾನಂದ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.

ನೀರಾವರಿ ಅಂದ್ರೆ ಕೃಷ್ಣಾ ಮೇಲ್ದಂಡೆ ಯೋಜನೆ ಮಾತ್ರವಾ? ಅಸೆಂಬ್ಲಿಯಲ್ಲಿ ಉತ್ತರ ಕರ್ನಾಟಕ, ಹಳೆ ಮೈಸೂರು ಶಾಸಕರ ಮಧ್ಯೆ ವಾಗ್ವಾದ
ವಿಧಾನಸಭೆ
TV9 Web
| Edited By: |

Updated on:Mar 28, 2022 | 6:46 PM

Share

ಬೆಂಗಳೂರು: ನೀರಾವರಿ ಯೋಜನೆ ಅಂದ್ರೆ ಕೃಷ್ಣಾ ಮೇಲ್ದಂಡೆ ಯೋಜನೆ ಮಾತ್ರವಾ? ಎಂದು ವಿಧಾನಸಭೆಯಲ್ಲಿ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಪ್ರಶ್ನೆ ಮಾಡಿದ್ದಾರೆ. ಹಾಗೂ ಶಿವಲಿಂಗೇಗೌಡ ಪ್ರಶ್ನೆಗೆ ಉತ್ತರ ಕರ್ನಾಟಕ ಭಾಗದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದ ಶಾಸಕರ ನಡುವೆ ವಾಗ್ವಾದ ನಡೆದಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ನಡುವೆ ಏರಿದ ಧ್ವನಿಯಲ್ಲಿ ಚರ್ಚೆ ನಡೆದಿದೆ. ಗೌಡರೇ ರಾಜ್ಯದ ಒಟ್ಟು ನೀರಾವರಿ ಯೋಜನೆಯ ಶೇಕಡಾ 57ರಷ್ಟು ಕೃಷ್ಣಾ ಭಾಗ್ಯ ಜಲ ನಿಗಮ ವ್ಯಾಪ್ತಿಗೆ ಬರುತ್ತದೆ. ಮೈಸೂರು ಮಹಾರಾಜರು KRS ಕನ್ನಂಬಾಡಿ ಕಟ್ಟಿ ಹೋಗಿದ್ದಕ್ಕೆ ನೀವು ಬದುಕಿದ್ದೀರಿ ಎಂದು ಕೆ.ಎಂ.ಶಿವಲಿಂಗೇಗೌಡಗೆ ಶಿವಾನಂದ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಜಲಸಂಪನ್ಮೂಲ ಸಚಿವ ಕಾರಜೋಳ, ನಮ್ಮ ಸರ್ಕಾರ ರಾಜ್ಯದ ಎಲ್ಲಾ ಭಾಗವನ್ನು ಸಮಾನವಾಗಿ ನೋಡುತ್ತೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಈ ಬಾರಿ 5,000 ಕೋಟಿ ಮೀಸಲಿಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 3000, ಎತ್ತಿನಹೊಳೆಗೆ 3,000, ಮೇಕೆದಾಟು, ಮಹದಾಯಿ ಯೋಜನೆಗೆ ತಲಾ 1 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದು ಕೃಷ್ಣೆಯ ಕಣ್ಣೀರಿಗೆ ಕೊನೆ ಎಂದರು. ಈ ಯೋಜನೆ ಪೂರ್ಣಗೊಳಿಸುವುದಕ್ಕೆ ಎಷ್ಟು ಶತಮಾನ ಬೇಕು? ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ನಲ್ಲಿ ಮಾಡಿದಂತೆ UKP ಅಭಿವೃದ್ಧಿ ಮಾಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಎಂದರು.

ಇದನ್ನೂ ಓದಿ: ‘ಮೊದಲ ಮೆಸೇಜ್​ನಲ್ಲೇ ಮದ್ವೆ ಆಗ್ತೀನಿ ಎಂದಿದ್ದೆ’; ಬೆಸ್ಟ್​​ ಫ್ರೆಂಡ್​ನೇ ಮದುವೆ ಆದ ಕಥೆ ಹೇಳಿದ ನಟ ರಕ್ಷ್

Imran Khan ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ; ಮಾರ್ಚ್ 31ರಂದು ನಡೆಯಲಿದೆ ಚರ್ಚೆ

Published On - 6:45 pm, Mon, 28 March 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು