AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ನದಿಗಳನ್ನು ಉಳಿಸಿಕೊಳ್ಳುವುದರ ಜತೆಗೆ, ಆ ನದಿಗಳ ನೀರನ್ನು ಬದುಕಿಗೆ ಬಳಸಿಕೊಳ್ಳುವ ಶುಭಸಂಕಲ್ಪದೊಂದಿಗೆ ನಾವು ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮೂಲಕ ಹೇಳಿದ್ದಾರೆ.

ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on:Jan 11, 2022 | 9:51 AM

Share

ಬೆಂಗಳೂರು: ರಾಜ್ಯದ ಅತ್ಯಂತ ಸೂಕ್ಷ್ಮನದಿ, ಅಪರೂಪದ ಜೀವವೈವಿಧ್ಯತೆ ಒಡಲು ಅಘನಾಶಿನಿ (Aghanashini River) ಉಳಿವಿಗಾಗಿ ವಿಜಯ ಕರ್ನಾಟಕ ಪತ್ರಿಕೆಯ ಸರಣಿ ವರದಿಗಾರಿಕೆ ಶ್ಲಾಘನೀಯ. ನೆಲ-ಜಲದ ಬಗ್ಗೆ ಕಾಳಜಿಯುಳ್ಳ ಇಂಥ ಜಾಗೃತ ಬರಹಗಳು ಎಲ್ಲರ ಕಣ್ತೆರೆಸುವುದರ ಜತೆಗೆ ನದಿಗಳು ಮತ್ತು ಜಲಮೂಲಗಳನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ದಾರಿದೀಪಗಳೇ ಸರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್​ ಮಾಡಿದ್ದಾರೆ.

ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ. ಈ ಪ್ರಯತ್ನಕ್ಕೆ ನನ್ನ ಮತ್ತು ಜೆಡಿಎಸ್‌ ಪಕ್ಷದ ಬೆಂಬಲ ಇದೆ. ನದಿಗಳನ್ನು ಉಳಿಸಿಕೊಳ್ಳುವುದರ ಜತೆಗೆ, ಆ ನದಿಗಳ ನೀರನ್ನು ಬದುಕಿಗೆ ಬಳಸಿಕೊಳ್ಳುವ ಶುಭಸಂಕಲ್ಪದೊಂದಿಗೆ ನಾವು ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮೂಲಕ ಹೇಳಿದ್ದಾರೆ.

ಸ್ಥಳೀಯರ ಜೀವನಾಧಾರವಾಗಿದ್ದ ಚಿಪ್ಪಿಕಲ್ಲಿನ ಅಂಕೆ ಇಲ್ಲದ ಗಣಿಗಾರಿಕೆ ಅಘನಾಶಿನಿಯ ಅಸ್ತಿತ್ವಕ್ಕೇ ಧಕ್ಕೆ ತಂದಿದೆ. ಇಂಥ ನದಿಯನ್ನು ಕಳೆದುಕೊಂಡರೆ ಅದೊಂದು ರಾಷ್ಟ್ರೀಯ ದುರಂತವೇ ಹೌದು. ಸರಕಾರ ಕೂಡಲೇ ಅಘನಾಶಿನಿ ರಕ್ಷಣೆಗೆ ಅತ್ಯುನ್ನತ ಕಾರ್ಯಪಡೆ ರಚಿಸಿ ನದಿ ಉಳಿವಿಗೆ ವಿಜ್ಞಾನಿಗಳು ನೀಡಿರುವ ವರದಿಗಳನ್ನು ಪರಿಗಣಿಸಿ ಕ್ರಮ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಅತಿ ವಿಶಾಲ ಅಳಿವೆಯುಳ್ಳ, ಅತ್ಯಂತ ಶುದ್ಧ ನದಿಯಾದ ಅಘನಾಶಿನಿಯನ್ನು ಉಳಿಸಲೇಬೇಕು. ಇಲ್ಲಿ ನಡೆಯುತ್ತಿರುವ ಚಿಪ್ಪಿಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಲ್ಲಿಸಬೇಕು ಎಂಬುವುದು ಸರಕಾರಕ್ಕೆ ನನ್ನ ಆಗ್ರಹ. ಈ ಹೋರಾಟದಲ್ಲಿ ನಾನೂ ಅಘನಾಶಿನಿಯ ದನಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

HD Kumaraswamy: ಮೇಕೆದಾಟು ಪಾದಯಾತ್ರೆ ನಾವು ಪ್ಲಾನ್‌ ಮಾಡಿದ್ದನ್ನೇ ಅವರು ಶುರು ಮಾಡಕೊಂಡ್ರು -ಹೆಚ್‌ಡಿ ಕುಮಾರಸ್ವಾಮಿ

Kameng River: ನಿಗೂಢವಾಗಿ ಕಪ್ಪು ಬಣ್ಣಕ್ಕೆ ತಿರುಗಿದ ಕಮೆಂಗ್ ನದಿ; ಸಾವಿರಾರು ಮೀನುಗಳು ಸಾವು

Published On - 9:41 am, Tue, 11 January 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!