AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ವಿ.ಸೋಮಣ್ಣ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಸಮನ್ಸ್ ಜಾರಿ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್

ವಸತಿ ಸಚಿವ ವಿ.ಸೋಮಣ್ಣ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ಎಂದು ಜಾರಿ ಮಾಡಲಾಗಿದ್ದ, ಸಮನ್ಸ್​ನ್ನು ಹೈಕೋರ್ಟ್ ರದ್ದುಪಡಿಸಿ ಪ್ರಕರಣವನ್ನು ಮತ್ತೆ ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾವಣೆ ಮಾಡಿದೆ.

ಸಚಿವ ವಿ.ಸೋಮಣ್ಣ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಸಮನ್ಸ್ ಜಾರಿ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್
ವಸತಿ ಸಚಿವ ವಿ ಸೋಮಣ್ಣ
TV9 Web
| Edited By: |

Updated on:Sep 05, 2022 | 2:48 PM

Share

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ (V Somanna) ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ಎಂದು ಜಾರಿ ಮಾಡಲಾಗಿದ್ದ, ಸಮನ್ಸ್​ನ್ನು ಹೈಕೋರ್ಟ್ (Highcount) ರದ್ದುಪಡಿಸಿ ಪ್ರಕರಣವನ್ನು ಮತ್ತೆ ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾವಣೆ ಮಾಡಿದೆ. ತನಿಖೆ ಸಂಬಂಧ ತನಿಖಾಧಿಕಾರಿಯಿಂದ ಸ್ಪಷ್ಟನೆ ಪಡೆಯಬೇಕು. ಹೈಕೋರ್ಟ್ ಸೂಚನೆಗಳನ್ನು ಆಧರಿಸಿ ಕೇಸ್ ಪರಿಗಣಿಸಲು ಹೈಕೋರ್ಟ್ ಸೂಚನೆ ನೀಡಿದೆ.

2013ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಎಂಬುವರು ವಸತಿ ಸಚಿವ ವಿ.ಸೋಮಣ್ಣ ಅವರು ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆ ಎಂದು ಖಾಸಗಿ ದೂರು ದಾಖಲಿಸಿದ್ದರು. ದೂರಿನಲ್ಲಿ ಸೋಮಣ್ಣ ಮತ್ತು ಕುಟುಂಬದವರು ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ ಮೌಲ್ಯಕ್ಕಿಂತಲೂ ಕಡಿಮೆ ದರದಲ್ಲಿ ಜಮೀನು ಖರೀದಿಸಿದ್ದಾರೆ. ಎಸಿಬಿ ತನಿಖೆಯಲ್ಲಿ ಕೇವಲ ಅವರ ವೈಯಕ್ತಿಕ ಮತ್ತು ಖಾಸಗಿ ಸಾಲಗಳ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ದೂರು ನಿಡಿದ್ದರು.

ಸೋಮಣ್ಣ ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. ಆದ್ದರಿಂದ, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು ಎಂದು ಕೋರಿದ್ದರು.

ಈ ಸಂಬಂಧ ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿತ್ತು‌. ವಿ. ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಕೋರ್ಟ್ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್​​ನ್ನು ತಿರಸ್ಕರಿಸಿ ಹೈಕೋರ್ಟ್ ಸೂಚನೆಗಳನ್ನು ಆಧರಿಸಿ ಕೇಸ್ ಪರಿಗಣಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:45 pm, Mon, 5 September 22

Follow Us
Web contact
Web contact

TV9 Kannada

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು