AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗರೆಡ್ಡಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 14, 2023 | 4:38 PM

ಬೆಂಗಳೂರು, ಸೆಪ್ಟೆಂಬರ್​ 14: ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ್ದಾರೆ. ನಗರದಲ್ಲಿ ಬಸ್ ಸಮಸ್ಯೆ, ಟಿಟಿಎಂಸಿಯಲ್ಲಿ ಇರಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮ

ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ‌ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್​​ಗಳನ್ನು ಬಿಡಲು ನಿರ್ಧರಿಸಿದ್ದೇವೆ. ಶಾಸಕ ಎಸ್.ಟಿ.ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ ಎಂದು ಹೇಳಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಯೋಚನೆ ಇಲ್ಲ: ಶಾಸಕ ಎಸ್​.ಟಿ.ಸೋಮಶೇಖರ್

ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಪ್ರತಿಕ್ರಿಯಿಸಿದ್ದು, ಭಾರತೀಯ ಜನತಾ ಪಕ್ಷದಲ್ಲೇ ಇದ್ದೇನೆ, ನಾನು ಸೈಲೆಂಟ್ ಆಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಯೋಚನೆ ಇಲ್ಲ. ರಾಮಲಿಂಗಾರೆಡ್ಡಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು

ಬಸ್ ನಿಲ್ದಾಣಗಳ ಸಮಸ್ಯೆ ಬಗ್ಗೆ ಹೇಳಲು ಸಚಿವರನ್ನು ಕರೆಸಿದ್ದೆವು. ಸಾರಿಗೆ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಜನವರಿಗೆ ಕೆಂಗೇರಿ ಟಿಟಿಎಂಸಿ ಉದ್ಘಾಟನೆ ಮಾಡೋಣ ಎಂದಿದ್ದಾರೆ ಎಂದರು.

ಪಕ್ಷದ ಕಾರ್ಯಕ್ರದಲ್ಲಿ ಸೋಮಶೇಖರ್ ಕಾಣಿಸಿಕೊಳ್ಳದ ವಿಚಾರವಾಗಿ ಮಾತನಾಡಿದ ಅವರು, ವೈಯಕ್ತಿಕ ಕಾರಣದಿಂದ ಪಕ್ಷದ ಕಾರ್ಯಕ್ರಮಗಳಿಗೆ ಗೈರಾಗಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:33 pm, Thu, 14 September 23

ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ