AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗರೆಡ್ಡಿ
ಕಿರಣ್​ ಹನಿಯಡ್ಕ
| Edited By: |

Updated on:Sep 14, 2023 | 4:38 PM

Share

ಬೆಂಗಳೂರು, ಸೆಪ್ಟೆಂಬರ್​ 14: ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ್ದಾರೆ. ನಗರದಲ್ಲಿ ಬಸ್ ಸಮಸ್ಯೆ, ಟಿಟಿಎಂಸಿಯಲ್ಲಿ ಇರಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮ

ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ‌ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್​​ಗಳನ್ನು ಬಿಡಲು ನಿರ್ಧರಿಸಿದ್ದೇವೆ. ಶಾಸಕ ಎಸ್.ಟಿ.ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ ಎಂದು ಹೇಳಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಯೋಚನೆ ಇಲ್ಲ: ಶಾಸಕ ಎಸ್​.ಟಿ.ಸೋಮಶೇಖರ್

ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಪ್ರತಿಕ್ರಿಯಿಸಿದ್ದು, ಭಾರತೀಯ ಜನತಾ ಪಕ್ಷದಲ್ಲೇ ಇದ್ದೇನೆ, ನಾನು ಸೈಲೆಂಟ್ ಆಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಯೋಚನೆ ಇಲ್ಲ. ರಾಮಲಿಂಗಾರೆಡ್ಡಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು

ಬಸ್ ನಿಲ್ದಾಣಗಳ ಸಮಸ್ಯೆ ಬಗ್ಗೆ ಹೇಳಲು ಸಚಿವರನ್ನು ಕರೆಸಿದ್ದೆವು. ಸಾರಿಗೆ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಜನವರಿಗೆ ಕೆಂಗೇರಿ ಟಿಟಿಎಂಸಿ ಉದ್ಘಾಟನೆ ಮಾಡೋಣ ಎಂದಿದ್ದಾರೆ ಎಂದರು.

ಪಕ್ಷದ ಕಾರ್ಯಕ್ರದಲ್ಲಿ ಸೋಮಶೇಖರ್ ಕಾಣಿಸಿಕೊಳ್ಳದ ವಿಚಾರವಾಗಿ ಮಾತನಾಡಿದ ಅವರು, ವೈಯಕ್ತಿಕ ಕಾರಣದಿಂದ ಪಕ್ಷದ ಕಾರ್ಯಕ್ರಮಗಳಿಗೆ ಗೈರಾಗಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:33 pm, Thu, 14 September 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು