AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ಪ್ರೇಮಿಗಳ ದಿನ ಅಂಗವಾಗಿ ಬೆಂಗಳೂರಿನಿಂದ 2.9 ಕೋಟಿ ಗುಲಾಬಿ ರಫ್ತು

ಪ್ರೇಮಿಗಳ ದಿನ ಅಂಗವಾಗಿ ಈ ವರ್ಷವೂ ಕೋಟ್ಯಾಂತರ ಗುಲಾಬಿಗಳು ವಿದೇಶಗಳಿಗೆ ಹಾರಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 12,22,860 ಕೆಜಿ ತೂಕದ ಸುಮಾರು 2.9 ಕೋಟಿ ಗುಲಾಬಿ ಹೂಗಳು ಹೊರ ರಾಜ್ಯ ಮತ್ತು ವಿದೇಶಕ್ಕೆ ರಫ್ತಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ108 ರಷ್ಟು ರಫ್ತು ಹೆಚ್ಚಾಗಿದೆ.

Valentine's Day: ಪ್ರೇಮಿಗಳ ದಿನ ಅಂಗವಾಗಿ ಬೆಂಗಳೂರಿನಿಂದ 2.9 ಕೋಟಿ ಗುಲಾಬಿ ರಫ್ತು
ಗುಲಾಬಿ
ವಿವೇಕ ಬಿರಾದಾರ
|

Updated on:Feb 15, 2024 | 8:43 AM

Share

ಬೆಂಗಳೂರು, ಫೆಬ್ರವರಿ 15: ಪ್ರೇಮಿಗಳ ದಿನ (Valentine’s Day) ಅಂಗವಾಗಿ ಈ ವರ್ಷವೂ ಕೋಟ್ಯಾಂತರ ಗುಲಾಬಿಗಳು (Rose) ವಿದೇಶಗಳಿಗೆ ಹಾರಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಮೂಲಕ 12,22,860 ಕೆಜಿ ತೂಕದ ಸುಮಾರು 2.9 ಕೋಟಿ ಗುಲಾಬಿ ಹೂಗಳು ಹೊರ ರಾಜ್ಯ ಮತ್ತು ವಿದೇಶಕ್ಕೆ ರಫ್ತಾಗಿವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ (BIAL) ವರದಿ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ108 ರಷ್ಟು ರಫ್ತು ಹೆಚ್ಚಾಗಿದೆ. ಇನ್ನು ಹೊರ ರಾಜ್ಯಗಳಿಗೆ 2 ಕೋಟಿ ಗುಲಾಬಿ ಹೂಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ 148 ರಷ್ಟು ಹೆಚ್ಚಳವಾಗಿದೆ. ಗುಲಾಬಿ ಹೂಗಳು ಬೆಂಗಳೂರಿನಿಂದ, ಕೌಲಾಲಂಪುರ್ (ಮಲೇಷ್ಯಾ), ಸಿಂಗಾಪುರ್, ಕುವೈತ್, ಮನಿಲಾ (ಫಿಲಿಪೈನ್ಸ್), ಮತ್ತು ಶಾರ್ಜಾ (ಯುಎಇ) ದೇಶಗಳಿಗೆ ರಪ್ತಾಗುತ್ತವೆ. ಇನ್ನು ದೆಹಲಿ, ಕೋಲ್ಕತ್ತಾ, ಮುಂಬೈ, ಗುವಾಹಟಿ ಮತ್ತು ಜೈಪುರ ರಾಜ್ಯಗಳಿಗೆ ರಫ್ತಾಗುತ್ತವೆ.

ಬೆಂಗಳೂರಿನ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರಕ್ಕೆ ಮುಖ್ಯವಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಿಂದ ಗುಣಮಟ್ಟದ ಗುಲಾಬಿಗಳನ್ನು ಕಳುಹಿಸಲಾಗುತ್ತದೆ. ಗುಲಾಬಿ ಬೆಳೆಗೆ ತೋಟಗಾರಿಕೆ ಇಲಾಖೆ ನೆರವಿನಿಂದ ಅನೇಕ ರೈತರು ಸಬ್ಸಿಡಿ ಆಧಾರದಲ್ಲಿ ಹಸಿರುಮನೆಗಳನ್ನು ನಿರ್ಮಿಸಿಕೊಂಡಿದ್ದು, ಪ್ರತಿ ವರ್ಷ ಲಕ್ಷಾಂತರ ರೂಪಾಯಿ ಲಾಭ ಕಾಣುತ್ತಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ಹೆಚ್ಚಿದ ಗುಲಾಬಿ ಡಿಮ್ಯಾಂಡ್​! ಕೋಲಾರದ ತಾಜ್​ ಮಹಲ್​ ತಳಿ ಕೆಂಪು ಗುಲಾಬಿ ಬೀರುತ್ತಿದೆ ಕಂಪು!

ಅತಿಹೆಚ್ಚು ಗುಲಾಬಿ ಹೂ ಬೆಳೆಯುವ ರಾಜ್ಯ

ಭಾರತವು ಅತಿದೊಡ್ಡ ಹೂಗಳ ಉತ್ಪಾದಕ ರಾಷ್ಟ್ರಗಳಲ್ಲಿ ಒಂದು. 2021-22ನೇ ಸಾಲಿನಲ್ಲಿ ಭಾರತವು 23,597.17ಎಂಟಿ ಅಷ್ಟು ವಿವಿಧ ಹೂಗಳ ಉತ್ಪನ್ನಗಳನ್ನು ಜಗತ್ತಿನ ವಿವಿಧ ರಾಷ್ಟ್ರಗಳಿಗೆ ರಫ್ತು ಮಾಡಿತ್ತು. ಇದರ ಒಟ್ಟು ಮೌಲ್ಯ 771.41 ಕೋಟಿಗಳಷ್ಟಾಗಿತ್ತು. ಅದೇ ವರ್ಷದಲ್ಲಿ, ಭಾರತವು 2.1 ಮಿಲಿಯನ್ ಟನ್​ಗಳಷ್ಟು ಸಡಿಲ ಹೂವುಗಳನ್ನು ಮತ್ತು 0.8 ಮಿಲಿಯನ್ ಟನ್​ಗಳಷ್ಟು ಕತ್ತರಿಸಿದ ಹೂವುಗಳನ್ನು ಉತ್ಪಾದಿಸಿತ್ತು. ಭಾರತದಲ್ಲಿ ಅತಿ ಹೆಚ್ಚಿನ ಗುಲಾಬಿಹೂ ಬೆಳೆಯುವ ರಾಜ್ಯಗಳೆಂದರೆ ಕರ್ನಾಟಕ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ, ಛತ್ತೀಸ್ಗಢ, ಒರಿಸ್ಸಾ, ಅಸ್ಸಾಂ ಮತ್ತು ತೆಲಂಗಾಣ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:39 am, Thu, 15 February 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು