AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹ; ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಗುರುವಾರದಿಂದ ಧರಣಿ ಸತ್ಯಾಗ್ರಹ

ರಾಜ್ಯ ಸರ್ಕಾರದ ನಡೆಯಿಂದ ಬೇಸರವಾಗಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಮೀಸಲಾತಿ ಸಿಗುವ ತನಕ ಅಹೋರಾತ್ರಿ ಹೋರಾಟ ನಡೆಸ್ತೇವೆ. ಶೇ. 7.5ರಷ್ಟು ಮೀಸಲಾತಿ ಸಿಗುವವರೆಗೆ ಹೋರಾಟ ಕೈಬಿಡಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.

ವಾಲ್ಮೀಕಿ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹ; ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಗುರುವಾರದಿಂದ ಧರಣಿ ಸತ್ಯಾಗ್ರಹ
ಪ್ರಸನ್ನಾನಂದಪುರಿ ಸ್ವಾಮೀಜಿ
TV9 Web
| Updated By: ganapathi bhat|

Updated on: Feb 09, 2022 | 10:55 PM

Share

ಬೆಂಗಳೂರು: ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಾಳೆಯಿಂದ (ಫೆಬ್ರವರಿ 10) ಧರಣಿ ಸತ್ಯಾಗ್ರಹ ನಡೆಯಲಿದೆ. ಈ ಬಗ್ಗೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿಶ್ರೀ ಬುಧವಾರ ಹೇಳಿಕೆ ನೀಡಿದ್ದಾರೆ. ಈ ಮೊದಲು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. ನ್ಯಾ. ನಾಗಮೋಹನ್ ದಾಸ್​ ವರದಿ ಬಳಿಕ ಮೀಸಲಾತಿ ಭರವಸೆ ನೀಡಲಾಗಿತ್ತು.

ಶೇಕಡಾ 7.5 ರಷ್ಟು ಮೀಸಲಾತಿ ನೀಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು. ಕರ್ನಾಟಕ ರಾಜ್ಯ ಸರ್ಕಾರಕ್ಕೆ ನ್ಯಾ.ನಾಗಮೋಹನ್ ದಾಸ್​ ವರದಿ ಸಲ್ಲಿಸಿದ ಬಳಿಕ ಹೀಗೆ ಹೇಳಲಾಗಿತ್ತು. ಆದರೆ ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ನಮ್ಮ ಸಮಾಜದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದ ಬೇಸರವಾಗಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಮೀಸಲಾತಿ ಸಿಗುವ ತನಕ ಅಹೋರಾತ್ರಿ ಹೋರಾಟ ನಡೆಸ್ತೇವೆ. ಶೇ. 7.5ರಷ್ಟು ಮೀಸಲಾತಿ ಸಿಗುವವರೆಗೆ ಹೋರಾಟ ಕೈಬಿಡಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಡಿಸುವುದಾಗಿ ಹೇಳಿದ್ದೆ; ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ: ಶ್ರೀರಾಮುಲು

ವಾಲ್ಮೀಕಿ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿಗೆ ಬೇಡಿಕೆ ಇದೆ. ನಮ್ಮ ಸರ್ಕಾರ ಬಂದರೆ ಮೀಸಲಾತಿ ಕೊಡುವುದಾಗಿ ಹೇಳಿಕೆ ನೀಡಿದ್ದೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಡಿಸುವುದಾಗಿ ಹೇಳಿದ್ದೆ. ಯಾವುದೇ ನಿರ್ಧಾರ ಕಾನೂನಾತ್ಮಕವಾಗಿ ತೆಗೆದುಕೊಳ್ಳುತ್ತೇನೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಬಾಗಲಕೋಟೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಮೊದಲು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ರವಿ ಡಿ ಚನ್ನಣ್ಣವರ್ ವಾಲ್ಮೀಕಿ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಕ್ಕೆ ಎಮ್​ಡಿ ಆಗಿ ವರ್ಗಾವಣೆ!!

ಇದನ್ನೂ ಓದಿ: ‘ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡುವುದಾಗಿ ಹೇಳಿದ್ದೆ; ಮಾತು ಉಳಿಸಿಕೊಳ್ಳುತ್ತೇವೆ’

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ