AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹ; ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಗುರುವಾರದಿಂದ ಧರಣಿ ಸತ್ಯಾಗ್ರಹ

ರಾಜ್ಯ ಸರ್ಕಾರದ ನಡೆಯಿಂದ ಬೇಸರವಾಗಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಮೀಸಲಾತಿ ಸಿಗುವ ತನಕ ಅಹೋರಾತ್ರಿ ಹೋರಾಟ ನಡೆಸ್ತೇವೆ. ಶೇ. 7.5ರಷ್ಟು ಮೀಸಲಾತಿ ಸಿಗುವವರೆಗೆ ಹೋರಾಟ ಕೈಬಿಡಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.

ವಾಲ್ಮೀಕಿ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹ; ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಗುರುವಾರದಿಂದ ಧರಣಿ ಸತ್ಯಾಗ್ರಹ
ಪ್ರಸನ್ನಾನಂದಪುರಿ ಸ್ವಾಮೀಜಿ
TV9 Web
| Edited By: |

Updated on: Feb 09, 2022 | 10:55 PM

Share

ಬೆಂಗಳೂರು: ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಾಳೆಯಿಂದ (ಫೆಬ್ರವರಿ 10) ಧರಣಿ ಸತ್ಯಾಗ್ರಹ ನಡೆಯಲಿದೆ. ಈ ಬಗ್ಗೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿಶ್ರೀ ಬುಧವಾರ ಹೇಳಿಕೆ ನೀಡಿದ್ದಾರೆ. ಈ ಮೊದಲು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. ನ್ಯಾ. ನಾಗಮೋಹನ್ ದಾಸ್​ ವರದಿ ಬಳಿಕ ಮೀಸಲಾತಿ ಭರವಸೆ ನೀಡಲಾಗಿತ್ತು.

ಶೇಕಡಾ 7.5 ರಷ್ಟು ಮೀಸಲಾತಿ ನೀಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು. ಕರ್ನಾಟಕ ರಾಜ್ಯ ಸರ್ಕಾರಕ್ಕೆ ನ್ಯಾ.ನಾಗಮೋಹನ್ ದಾಸ್​ ವರದಿ ಸಲ್ಲಿಸಿದ ಬಳಿಕ ಹೀಗೆ ಹೇಳಲಾಗಿತ್ತು. ಆದರೆ ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ನಮ್ಮ ಸಮಾಜದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದ ಬೇಸರವಾಗಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಮೀಸಲಾತಿ ಸಿಗುವ ತನಕ ಅಹೋರಾತ್ರಿ ಹೋರಾಟ ನಡೆಸ್ತೇವೆ. ಶೇ. 7.5ರಷ್ಟು ಮೀಸಲಾತಿ ಸಿಗುವವರೆಗೆ ಹೋರಾಟ ಕೈಬಿಡಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಡಿಸುವುದಾಗಿ ಹೇಳಿದ್ದೆ; ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ: ಶ್ರೀರಾಮುಲು

ವಾಲ್ಮೀಕಿ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿಗೆ ಬೇಡಿಕೆ ಇದೆ. ನಮ್ಮ ಸರ್ಕಾರ ಬಂದರೆ ಮೀಸಲಾತಿ ಕೊಡುವುದಾಗಿ ಹೇಳಿಕೆ ನೀಡಿದ್ದೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಡಿಸುವುದಾಗಿ ಹೇಳಿದ್ದೆ. ಯಾವುದೇ ನಿರ್ಧಾರ ಕಾನೂನಾತ್ಮಕವಾಗಿ ತೆಗೆದುಕೊಳ್ಳುತ್ತೇನೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಬಾಗಲಕೋಟೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಮೊದಲು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ರವಿ ಡಿ ಚನ್ನಣ್ಣವರ್ ವಾಲ್ಮೀಕಿ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಕ್ಕೆ ಎಮ್​ಡಿ ಆಗಿ ವರ್ಗಾವಣೆ!!

ಇದನ್ನೂ ಓದಿ: ‘ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡುವುದಾಗಿ ಹೇಳಿದ್ದೆ; ಮಾತು ಉಳಿಸಿಕೊಳ್ಳುತ್ತೇವೆ’

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!