AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹ; ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಗುರುವಾರದಿಂದ ಧರಣಿ ಸತ್ಯಾಗ್ರಹ

ರಾಜ್ಯ ಸರ್ಕಾರದ ನಡೆಯಿಂದ ಬೇಸರವಾಗಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಮೀಸಲಾತಿ ಸಿಗುವ ತನಕ ಅಹೋರಾತ್ರಿ ಹೋರಾಟ ನಡೆಸ್ತೇವೆ. ಶೇ. 7.5ರಷ್ಟು ಮೀಸಲಾತಿ ಸಿಗುವವರೆಗೆ ಹೋರಾಟ ಕೈಬಿಡಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.

ವಾಲ್ಮೀಕಿ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿಗೆ ಆಗ್ರಹ; ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಗುರುವಾರದಿಂದ ಧರಣಿ ಸತ್ಯಾಗ್ರಹ
ಪ್ರಸನ್ನಾನಂದಪುರಿ ಸ್ವಾಮೀಜಿ
TV9 Web
| Edited By: |

Updated on: Feb 09, 2022 | 10:55 PM

Share

ಬೆಂಗಳೂರು: ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಾಳೆಯಿಂದ (ಫೆಬ್ರವರಿ 10) ಧರಣಿ ಸತ್ಯಾಗ್ರಹ ನಡೆಯಲಿದೆ. ಈ ಬಗ್ಗೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿಶ್ರೀ ಬುಧವಾರ ಹೇಳಿಕೆ ನೀಡಿದ್ದಾರೆ. ಈ ಮೊದಲು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. ನ್ಯಾ. ನಾಗಮೋಹನ್ ದಾಸ್​ ವರದಿ ಬಳಿಕ ಮೀಸಲಾತಿ ಭರವಸೆ ನೀಡಲಾಗಿತ್ತು.

ಶೇಕಡಾ 7.5 ರಷ್ಟು ಮೀಸಲಾತಿ ನೀಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು. ಕರ್ನಾಟಕ ರಾಜ್ಯ ಸರ್ಕಾರಕ್ಕೆ ನ್ಯಾ.ನಾಗಮೋಹನ್ ದಾಸ್​ ವರದಿ ಸಲ್ಲಿಸಿದ ಬಳಿಕ ಹೀಗೆ ಹೇಳಲಾಗಿತ್ತು. ಆದರೆ ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ನಮ್ಮ ಸಮಾಜದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದ ಬೇಸರವಾಗಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಮೀಸಲಾತಿ ಸಿಗುವ ತನಕ ಅಹೋರಾತ್ರಿ ಹೋರಾಟ ನಡೆಸ್ತೇವೆ. ಶೇ. 7.5ರಷ್ಟು ಮೀಸಲಾತಿ ಸಿಗುವವರೆಗೆ ಹೋರಾಟ ಕೈಬಿಡಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಡಿಸುವುದಾಗಿ ಹೇಳಿದ್ದೆ; ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ: ಶ್ರೀರಾಮುಲು

ವಾಲ್ಮೀಕಿ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿಗೆ ಬೇಡಿಕೆ ಇದೆ. ನಮ್ಮ ಸರ್ಕಾರ ಬಂದರೆ ಮೀಸಲಾತಿ ಕೊಡುವುದಾಗಿ ಹೇಳಿಕೆ ನೀಡಿದ್ದೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಡಿಸುವುದಾಗಿ ಹೇಳಿದ್ದೆ. ಯಾವುದೇ ನಿರ್ಧಾರ ಕಾನೂನಾತ್ಮಕವಾಗಿ ತೆಗೆದುಕೊಳ್ಳುತ್ತೇನೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಬಾಗಲಕೋಟೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಮೊದಲು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ರವಿ ಡಿ ಚನ್ನಣ್ಣವರ್ ವಾಲ್ಮೀಕಿ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಕ್ಕೆ ಎಮ್​ಡಿ ಆಗಿ ವರ್ಗಾವಣೆ!!

ಇದನ್ನೂ ಓದಿ: ‘ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡುವುದಾಗಿ ಹೇಳಿದ್ದೆ; ಮಾತು ಉಳಿಸಿಕೊಳ್ಳುತ್ತೇವೆ’

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ