AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಹಗರಣದ ಆರೋಪಿಗಳ‌ ಮತ್ತೊಂದು ಕಹಾನಿ ಬಯಲು

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಅದರಂತೆ ಇದೀಗ ಆರೋಪಿಗಳ‌ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್​ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು ಬಂದಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಹಗರಣದ ಆರೋಪಿಗಳ‌ ಮತ್ತೊಂದು ಕಹಾನಿ ಬಯಲು
ವಾಲ್ಮೀಕಿ ನಿಗಮದ ಹಗರಣದ ಆರೋಪಿಗಳ‌ ಮತ್ತೊಂದು ಕಹಾನಿ ಬಯಲು
ಕಿರಣ್ ಹನುಮಂತ್​ ಮಾದಾರ್
|

Updated on: Jul 11, 2024 | 5:51 PM

Share

ಬೆಂಗಳೂರು, ಜು.11: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ (Maharshi Valmiki Development Corporation)ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅದರಂತೆ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಲಿದೆ. ಇದೀಗ ಆರೋಪಿಗಳ‌ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್​ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು ಬಂದಿದೆ.

ಉದ್ಯಮಿಗಳ ಹೆಸರಲ್ಲಿ ನಕಲಿ ಖಾತೆ

ಬೆಂಗಳೂರಿನ ಉದ್ಯಮಿಗಳ ಹೆಸರಲ್ಲಿ ಆರೋಪಿಗಳು ನಕಲಿ ಖಾತೆಗಳನ್ನು ತೆರೆದಿದ್ದರು. ಆ ನಕಲಿ ಖಾತೆಗಳ‌ ಮೂಲಕವೇ ಖದೀಮರು ಕೋಟ್ಯಾಂತರ ರೂ. ಹಣ ವರ್ಗಾಯಿಸಿಕೊಂಡಿದ್ದಾರೆ. ಬೆಂಗಳೂರಿನ ರಾಮ್ ಎಂಟರ್ ಪ್ರೈಸೆಸ್(5.7 ಕೋಟಿ ರೂ.), ಜಿ ಎನ್ ಇಂಡಸ್ಟ್ರೀಸ್, (4.42 ಕೋಟಿ ರೂ.), ಸುಜಲಾ ಎಂಟರ್ ಪ್ರೈಸೆಸ್(5.63 ಕೋಟಿ), ನೊವೆಲ್ ಸೆಕ್ಯುರಿಟಿ ಸರ್ವಿಸ್(4 ಕೋಟಿ) ಸೇರಿದಂತೆ 18 ಉದ್ಯಮಿಗಳ‌ ಹೆಸರಲ್ಲಿ‌ ನಕಲಿ ಖಾತೆಗಳು ತೆರೆಯಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಹಗರಣ: ಬಿ ನಾಗೇಂದ್ರ ಫ್ಲ್ಯಾಟ್​ನಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಇಡಿ

ನಕಲಿ ಖಾತೆಗಳಿಗೆ 89 ಕೋಟಿ ಹಣ ವರ್ಗಾವಣೆ

ಹೌದು, ಬೆಂಗಳೂರಿನ ಉದ್ಯಮಿಗಳ ಹೆಸರು, ವಿಳಾಸ ಬಳಸಿ ಫಸ್ಟ್ ಫೈನಾನ್ಸ್ ಬ್ಯಾಂಕ್​ನಲ್ಲಿ‌ ನಕಲಿ ಖಾತೆ ತೆರೆಯಲಾಗಿದೆ. ಬಳಿಕ ಆರೋಪಿಗಳು ಈ ನಕಲಿ ಅಕೌಂಟ್​ಗಳಿಗೆ ಯೂನಿಯನ್ ಬ್ಯಾಂಕ್​ನಿಂದ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದರು. ಸುಳ್ಳು ದಾಖಲೆಗಳನ್ನ ಸೃಷ್ಟಿಸಿ ತೆರಿದಿದ್ದ 18 ನಕಲಿ ಖಾತೆಗಳಿಗೆ 89 ಕೋಟಿ ಹಣ ವರ್ಗಾವಣೆಯಾಗಿತ್ತು. ಈ ವಿಚಾರ ಗೊತ್ತಾದ ಮೇಲೆ ಉದ್ಯಮಿಗಳು ವಂಚನೆ ಕೇಸ್ ದಾಖಲು ಮಾಡಿದ್ದರು. ಬೆಂಗಳೂರಿನ ಕೆಲ ಪೊಲೀಸ್ ಠಾಣೆಗಳಲ್ಲಿ ಉದ್ಯಮಿಗಳ ದೂರಿನ ಅನ್ವಯ ಎಫ್​ಐಆರ್​ ದಾಖಲಿಸಿದ್ದರು. ಸಧ್ಯ ಈ ಕೇಸ್​ಗಳನ್ನು ವರ್ಗಾವಣೆ ಮಾಡಿಕೊಂಡು ಎಸ್​ಐಟಿ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?