AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣದ ಇಬ್ಬರು ಪ್ರಮುಖ ಆರೋಪಿಗಳಿಂದ ಸಿಕ್ಕ ಹಣ, ಚಿನ್ನ ಎಷ್ಟು ಗೊತ್ತಾ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಎರಡು ದಿನಗಳಲ್ಲಿ ಎಸ್​ಐಟಿ 16 ಕೆಜಿ ಚಿನ್ನ ಜಪ್ತಿ ಮಾಡಿದೆ. ಹೈದರಾಬಾದ್ ಬಿಲ್ಡರ್‌ರೊಬ್ಬರಿಂದ ₹2.50 ಕೋಟಿ ನಗದು ಜಪ್ತಿ ಮಾಡಲಾಗಿದೆ. ಆರೋಪಿಗಳಿಂದ ಇದುವರೆಗೆ 48.5 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ವಾಲ್ಮೀಕಿ ನಿಗಮ ಹಗರಣದ ಇಬ್ಬರು ಪ್ರಮುಖ ಆರೋಪಿಗಳಿಂದ ಸಿಕ್ಕ ಹಣ, ಚಿನ್ನ ಎಷ್ಟು ಗೊತ್ತಾ?
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Jul 28, 2024 | 9:40 AM

Share

ಬೆಂಗಳೂರು, ಜುಲೈ.28: ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣ (Valmiki Development Corporation Scam) ಸಂಬಂಧ PMLA ಆಕ್ಟ್ ಅಡಿ ಇಡಿ ಒಂದೆಡೆ ಮಾಜಿ ಸಚಿವನ ಬಂಧಿಸಿ ಗ್ರಿಲ್ ಮಾಡ್ತಿದ್ರೆ ಮತ್ತೊಂದೆಡೆ ಸಿಐಡಿ (CID), ಎಸ್​ಐಟಿ (SIT) ಅಧಿಕಾರಿಗಳು ಕದ್ದ ಹಣದಲ್ಲಿ ಆರೋಪಿಗಳ ಕೊಂಡ ನಗ-ನಾಣ್ಯಾ ಆಸ್ತಿಪಾಸ್ತಿಯನ್ನು ಕಲೆಹಾಕಿ ವಶಕ್ಕೆ ಪಡೆಯುತ್ತಿದೆ. ಇತ್ತೀಚೆಗೆ ಈ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾಗೆ ಸೇರಿದ ಫ್ಲಾಟ್​ನಲ್ಲಿ 10 ಕೆ.ಜಿ‌.ಚಿನ್ನದ ಬಿಸ್ಕೆಟ್ ಅನ್ನು ಎಸ್ಐಟಿ ವಶಕ್ಕೆ ಪಡಿದಿತ್ತು. ಇದೀಗ ತಲಾಶ್ ಮುಂದುವರೆಸಿರುವ ಎಸ್​ಐಟಿ ಮತ್ತಷ್ಟು ಚಿನ್ನ ವಶಕ್ಕೆ ಪಡೆದಿದೆ. ಮತ್ತೆ 6 ಕೆಜಿ ಚಿನ್ನ ಹಾಗೂ ಹೈದರಾಬಾದ್ ಬಿಲ್ಡರ್‌ರೊಬ್ಬರಿಂದ ₹2.50 ಕೋಟಿ ನಗದು ಜಪ್ತಿ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಎರಡು ದಿನಗಳಲ್ಲಿ ಎಸ್​ಐಟಿ 16 ಕೆಜಿ ಚಿನ್ನ ಜಪ್ತಿ ಮಾಡಿದೆ. ಸರ್ಚ್ ವಾರೆಂಟ್ ಪಡೆದು ಹೈದರಾಬಾದ್​ನಲ್ಲಿ ಇರುವ ಸತ್ಯನಾರಾಯಣ ವರ್ಮಾ ಮತ್ತು ಕಾಕಿ ಶ್ರೀನಿವಾಸ್ ಮನೆ ಮೇಲೆ ದಾಳಿ ಮಾಡಿದ್ದ SIT, ಶುಕ್ರವಾರ ಹಾಗೂ ಶನಿವಾರ ತಲಾಶ್ ಮಾಡಿದೆ. ಹೈದರಾಬಾದ್​​ ಫಸ್ಟ್ ಫೈನಾನ್ಸ್ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದ ಸತ್ಯನಾರಾಯಣ ವರ್ಮಾ ಬಳಿ ಇದುವರೆಗೆ 15 ಕೆಜಿ ಚಿನ್ನ ಜಪ್ತಿ ಮಾಡಲಾಗಿದೆ.

ಸತ್ಯನಾರಾಯಣ ಮನೆಯಲ್ಲಿ 10 ಕೆಜಿ ಚಿನ್ನ, ಫ್ಲ್ಯಾಟ್​ನಲ್ಲಿ 5 ಕೆಜಿ ಚಿನ್ನ ಜಪ್ತಿ ಮಾಡಲಾಗಿದೆ. ಇನ್ನು ಮಧ್ಯವರ್ತಿ ಶ್ರೀನಿವಾಸ್ ಎಂಬಾತನ ನಿವಾಸದಲ್ಲಿ 1 ಕೆಜಿ ಚಿನ್ನ ಜಪ್ತಿ ಮಾಡಲಾಗಿದೆ. ಇದರ ಜೊತೆಗೆ ಕೆಲ ಬಿಲ್ಡರ್​ಗಳಿಗೆ ಕೊಟ್ಟಿದ್ದ ಹಣ ಕೂಡ ವಾಪಸ್ ಪಡೆಯಲಾಗಿದೆ. ಸದ್ಯ ಬಿಲ್ಡರ್​ಗಳು ಸುಮಾರು 2.5 ಕೋಟಿ ಹಣ ವಾಪಸ್ ನೀಡಿದ್ದಾರೆ. ಆರೋಪಿಗಳಿಂದ ಇದುವರೆಗೆ 48.5 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ನೆಕ್ಕಂಟಿ ನಾಗರಾಜ್, ವೆಂಕಟೇಶ್ವರ ರಾವ್ ನಂಬಿದವರಿಗೆ ಸಂಕಷ್ಟ, ಹಣ ವಾಪಾಸ್ ನೀಡುವಂತೆ SIT ಒತ್ತಡ

ಇನ್ನು ಸತ್ಯನಾರಾಯಣ್ ವರ್ಮಾ ಬಂಧಿಸುವ ವೇಳೆಗೆ ಎಲ್ಲಾ ಹಣ ಚಿನ್ನ ಬೇರೆ ಬೇರೆ ಕಡೆ ಅಡಗಿಸಿಟ್ಟಿದ್ದ. ಬೆಂಗಳೂರಿಗೆ ಕರೆತಂದು ಸತ್ಯನಾರಾಯಣ್ ವರ್ಮಾ ವಿಚಾರಣೆ ನಡೆಸ್ತಿದ್ದಂತೆ, ಹಣ ಹಾಗೂ ಫ್ಲಾಟ್ ಖರೀದಿ ಬಗ್ಗೆ ಬಾಯಬಿಟ್ಟಿದ್ದಾನೆ. ನಂತರ ಎಸ್​ಐಟಿ ತಂಡ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಹೈದರಾಬಾದ್ ವರ್ಮಾ ಫ್ಲಾಟ್ ಶೋಧ ಕಾರ್ಯ ನಡೆಸಿದ್ದಾರೆ. ಬಳಿಕ ಹೈದರಾಬಾದ್ ಸೀಮಾ ಪೇಟೆ, ಮೀಯಾ ಪುರದಲ್ಲಿ ವಾಸವಿ ಬಿಲ್ಡರ್ಸ್ ನಲ್ಲಿ ತಲಾ ಎರಡು ಫ್ಲಾಟ್ ಖರೀದಿ ಮಾಡಿದ್ದು, ಒಟ್ಟು 11 ಫ್ಲಾಟ್ ಖರೀದಿಸಿರುವ ಬಗ್ಗೆ ಎಸ್​ಐಟಿಗೆ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್ ಫ್ಲಾಟ್​ನಲ್ಲಿ ಬ್ಯಾಗ್​ನಲ್ಲಿ ಸಿಕ್ಕ 8 ಕೋಟಿ ಹಣ ಸೀಜ್ ಮಾಡಿದ್ದ ಎಸ್ಐಟಿ ತಂಡ, ಹಣ ಎಣಿಕೆ ಮಿಷನ್ ತರಿಸಿ ಹಣ ಎಣಿಕೆ ಮಾಡಿ ಜಪ್ತಿ‌ ಮಾಡಿದೆ. ದಿನ‌ಕಳೆದಂತೆ ಕೋಟಿ ಕೋಟಿ ಹಗರಣದ ಹಿಂದಿನ ಕಾಣದ ಕೈಗಳು ಹೊರಬರ್ತಿದ್ದರೇ ಭ್ರಷ್ಟರ ಬಿಲ ಸೇರಿದ್ದ ನಿಗಮದ ಹಣ ಸಂಗ್ರಹಿಸುವ ಕೆಲಸದಲ್ಲಿ ಎಸ್ ಐಟಿ ಫುಲ್ ವರ್ಕ್ ಔಟ್ ಮಾಡ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!