AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದೀಗ ಮಾಜಿ ಸಚಿವ ಬಿ.ನಾಗೇಂದ್ರ(B. Nagendra) ಹಾಗೂ ಶಾಸಕ ದದ್ದಲ್​ಗೂ ಎಸ್ಐಟಿ(SIT) ಮತ್ತೆ ನೋಟಿಸ್ ನೀಡಿದೆ. ಈ ಮೂಲಕ ಇಬ್ಬರಿಗೂ ಮೂರನೇ ಬಾರಿ ಎಸ್ಐಟಿ ನೋಟಿಸ್ ಜಾರಿ ಮಾಡಿದಂತಾಗಿದೆ.

ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್
ಬಿ.ನಾಗೇಂದ್ರ, ಬಸನಗೌಡ ದದ್ದಲ್
ಕಿರಣ್ ಹನುಮಂತ್​ ಮಾದಾರ್
|

Updated on: Jul 10, 2024 | 6:47 PM

Share

ಬೆಂಗಳೂರು, ಜು.10: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ(B. Nagendra) ಹಾಗೂ ಶಾಸಕ ದದ್ದಲ್​ಗೂ ಎಸ್ಐಟಿ(SIT) ಮತ್ತೆ ನೋಟಿಸ್ ನೀಡಿದೆ. ಇಂದು ವಿಚಾರಣೆಗೆ ಗೈರಾದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲಾಗಿದ್ದು, ನಾಳೆ(ಜು.11) ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ ಇಬ್ಬರಿಗೂ ಮೂರನೇ ಬಾರಿ ಎಸ್ಐಟಿ ನೋಟಿಸ್ ಜಾರಿ ಮಾಡಿದಂತಾಗಿದೆ.

ಇಂದು (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ. ಇನ್ನು ವಾಲ್ಮೀಕಿ ನಿಗಮ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದ್ದು, ಎಸ್​ಐಟಿಯಿಂದ 11, ಇಡಿಯಿಂದ ಓರ್ವನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

ಪ್ರಕಣದಲ್ಲಿ ಬಂಧನ ಆಗಿರೋರು ವಿವರ ಇಲ್ಲಿದೆ?

1. ಸತ್ಯನಾರಾಯಣ, FFCCSL ಅಧ್ಯಕ್ಷ

2.ಸತ್ಯನಾರಾಯಣ ವರ್ಮಾ, 3. ಚಂದ್ರಮೋಹನ್, 4. ಶ್ರೀನಿವಾಸ್ 5. ಜಗದೀಶ್ – ಮಧ್ಯವರ್ತಿಗಳು

6.ಜೆ.ಜೆ.ಪದ್ಮನಾಭ್‌ – ವಾಲ್ಮೀಕಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ)

7. ಪರಶುರಾಮ ದುರುಗಣ್ಣವರ, ನಿಗಮದ ಹಿಂದಿನ ಲೆಕ್ಕಾಧಿಕಾರಿ

8. ನೆಕ್ಕಂಟಿ ನಾಗರಾಜ್‌ – ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ

9. ನಾಗೇಶ್ವರ ರಾವ್‌ – ಮಾಜಿ ಸಚಿವ ನಾಗೇಂದ್ರ ಸಂಬಂಧಿ

10. ಸಾಯಿ ತೇಜ, ಸತ್ಯನಾರಾಯಣ ವರ್ಮಾ ಸಹಚರ

11. ತೇಜ ತಮ್ಮಯ್ಯ, ಶಾಸಕ ದದ್ದಲ್ ಪಿಎ

12. ಹರೀಶ್, ಮಾಜಿ ಮಂತ್ರಿ ನಾಗೇಂದ್ರ ಪಿಎ

ಹೈದರಾಬಾದ್​ನಲ್ಲಿ ಎಸ್ಐಟಿ ತಂಡ ಐವರನ್ನ ಬಂಧಿಸಿದ್ದರು. ಇಂದು ಇಡಿ ಅಧಿಕಾರಿಗಳು ಹರೀಶ್​ನನ್ನ ಬಂಧಿಸಿದ್ದಾರೆ. ಬೆಂಗಳೂರು, ದಾವಣಗೆರೆ ಯಲ್ಲಿ ಉಳಿದ ಐವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಜೊತೆಗೆ ಎಸ್ಐಟಿಯಿಂದ ಇದುವರೆಗೂ ಒಟ್ಟು 35 ಕೋಟಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣವನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ