AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದೀಗ ಮಾಜಿ ಸಚಿವ ಬಿ.ನಾಗೇಂದ್ರ(B. Nagendra) ಹಾಗೂ ಶಾಸಕ ದದ್ದಲ್​ಗೂ ಎಸ್ಐಟಿ(SIT) ಮತ್ತೆ ನೋಟಿಸ್ ನೀಡಿದೆ. ಈ ಮೂಲಕ ಇಬ್ಬರಿಗೂ ಮೂರನೇ ಬಾರಿ ಎಸ್ಐಟಿ ನೋಟಿಸ್ ಜಾರಿ ಮಾಡಿದಂತಾಗಿದೆ.

ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್
ಬಿ.ನಾಗೇಂದ್ರ, ಬಸನಗೌಡ ದದ್ದಲ್
ಕಿರಣ್ ಹನುಮಂತ್​ ಮಾದಾರ್
|

Updated on: Jul 10, 2024 | 6:47 PM

Share

ಬೆಂಗಳೂರು, ಜು.10: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ(B. Nagendra) ಹಾಗೂ ಶಾಸಕ ದದ್ದಲ್​ಗೂ ಎಸ್ಐಟಿ(SIT) ಮತ್ತೆ ನೋಟಿಸ್ ನೀಡಿದೆ. ಇಂದು ವಿಚಾರಣೆಗೆ ಗೈರಾದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲಾಗಿದ್ದು, ನಾಳೆ(ಜು.11) ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ ಇಬ್ಬರಿಗೂ ಮೂರನೇ ಬಾರಿ ಎಸ್ಐಟಿ ನೋಟಿಸ್ ಜಾರಿ ಮಾಡಿದಂತಾಗಿದೆ.

ಇಂದು (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ. ಇನ್ನು ವಾಲ್ಮೀಕಿ ನಿಗಮ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದ್ದು, ಎಸ್​ಐಟಿಯಿಂದ 11, ಇಡಿಯಿಂದ ಓರ್ವನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

ಪ್ರಕಣದಲ್ಲಿ ಬಂಧನ ಆಗಿರೋರು ವಿವರ ಇಲ್ಲಿದೆ?

1. ಸತ್ಯನಾರಾಯಣ, FFCCSL ಅಧ್ಯಕ್ಷ

2.ಸತ್ಯನಾರಾಯಣ ವರ್ಮಾ, 3. ಚಂದ್ರಮೋಹನ್, 4. ಶ್ರೀನಿವಾಸ್ 5. ಜಗದೀಶ್ – ಮಧ್ಯವರ್ತಿಗಳು

6.ಜೆ.ಜೆ.ಪದ್ಮನಾಭ್‌ – ವಾಲ್ಮೀಕಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ)

7. ಪರಶುರಾಮ ದುರುಗಣ್ಣವರ, ನಿಗಮದ ಹಿಂದಿನ ಲೆಕ್ಕಾಧಿಕಾರಿ

8. ನೆಕ್ಕಂಟಿ ನಾಗರಾಜ್‌ – ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ

9. ನಾಗೇಶ್ವರ ರಾವ್‌ – ಮಾಜಿ ಸಚಿವ ನಾಗೇಂದ್ರ ಸಂಬಂಧಿ

10. ಸಾಯಿ ತೇಜ, ಸತ್ಯನಾರಾಯಣ ವರ್ಮಾ ಸಹಚರ

11. ತೇಜ ತಮ್ಮಯ್ಯ, ಶಾಸಕ ದದ್ದಲ್ ಪಿಎ

12. ಹರೀಶ್, ಮಾಜಿ ಮಂತ್ರಿ ನಾಗೇಂದ್ರ ಪಿಎ

ಹೈದರಾಬಾದ್​ನಲ್ಲಿ ಎಸ್ಐಟಿ ತಂಡ ಐವರನ್ನ ಬಂಧಿಸಿದ್ದರು. ಇಂದು ಇಡಿ ಅಧಿಕಾರಿಗಳು ಹರೀಶ್​ನನ್ನ ಬಂಧಿಸಿದ್ದಾರೆ. ಬೆಂಗಳೂರು, ದಾವಣಗೆರೆ ಯಲ್ಲಿ ಉಳಿದ ಐವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಜೊತೆಗೆ ಎಸ್ಐಟಿಯಿಂದ ಇದುವರೆಗೂ ಒಟ್ಟು 35 ಕೋಟಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣವನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!