ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದೀಗ ಮಾಜಿ ಸಚಿವ ಬಿ.ನಾಗೇಂದ್ರ(B. Nagendra) ಹಾಗೂ ಶಾಸಕ ದದ್ದಲ್​ಗೂ ಎಸ್ಐಟಿ(SIT) ಮತ್ತೆ ನೋಟಿಸ್ ನೀಡಿದೆ. ಈ ಮೂಲಕ ಇಬ್ಬರಿಗೂ ಮೂರನೇ ಬಾರಿ ಎಸ್ಐಟಿ ನೋಟಿಸ್ ಜಾರಿ ಮಾಡಿದಂತಾಗಿದೆ.

ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್
ಬಿ.ನಾಗೇಂದ್ರ, ಬಸನಗೌಡ ದದ್ದಲ್
Follow us
|

Updated on: Jul 10, 2024 | 6:47 PM

ಬೆಂಗಳೂರು, ಜು.10: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ(B. Nagendra) ಹಾಗೂ ಶಾಸಕ ದದ್ದಲ್​ಗೂ ಎಸ್ಐಟಿ(SIT) ಮತ್ತೆ ನೋಟಿಸ್ ನೀಡಿದೆ. ಇಂದು ವಿಚಾರಣೆಗೆ ಗೈರಾದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲಾಗಿದ್ದು, ನಾಳೆ(ಜು.11) ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ ಇಬ್ಬರಿಗೂ ಮೂರನೇ ಬಾರಿ ಎಸ್ಐಟಿ ನೋಟಿಸ್ ಜಾರಿ ಮಾಡಿದಂತಾಗಿದೆ.

ಇಂದು (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ. ಇನ್ನು ವಾಲ್ಮೀಕಿ ನಿಗಮ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದ್ದು, ಎಸ್​ಐಟಿಯಿಂದ 11, ಇಡಿಯಿಂದ ಓರ್ವನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

ಪ್ರಕಣದಲ್ಲಿ ಬಂಧನ ಆಗಿರೋರು ವಿವರ ಇಲ್ಲಿದೆ?

1. ಸತ್ಯನಾರಾಯಣ, FFCCSL ಅಧ್ಯಕ್ಷ

2.ಸತ್ಯನಾರಾಯಣ ವರ್ಮಾ, 3. ಚಂದ್ರಮೋಹನ್, 4. ಶ್ರೀನಿವಾಸ್ 5. ಜಗದೀಶ್ – ಮಧ್ಯವರ್ತಿಗಳು

6.ಜೆ.ಜೆ.ಪದ್ಮನಾಭ್‌ – ವಾಲ್ಮೀಕಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ)

7. ಪರಶುರಾಮ ದುರುಗಣ್ಣವರ, ನಿಗಮದ ಹಿಂದಿನ ಲೆಕ್ಕಾಧಿಕಾರಿ

8. ನೆಕ್ಕಂಟಿ ನಾಗರಾಜ್‌ – ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ

9. ನಾಗೇಶ್ವರ ರಾವ್‌ – ಮಾಜಿ ಸಚಿವ ನಾಗೇಂದ್ರ ಸಂಬಂಧಿ

10. ಸಾಯಿ ತೇಜ, ಸತ್ಯನಾರಾಯಣ ವರ್ಮಾ ಸಹಚರ

11. ತೇಜ ತಮ್ಮಯ್ಯ, ಶಾಸಕ ದದ್ದಲ್ ಪಿಎ

12. ಹರೀಶ್, ಮಾಜಿ ಮಂತ್ರಿ ನಾಗೇಂದ್ರ ಪಿಎ

ಹೈದರಾಬಾದ್​ನಲ್ಲಿ ಎಸ್ಐಟಿ ತಂಡ ಐವರನ್ನ ಬಂಧಿಸಿದ್ದರು. ಇಂದು ಇಡಿ ಅಧಿಕಾರಿಗಳು ಹರೀಶ್​ನನ್ನ ಬಂಧಿಸಿದ್ದಾರೆ. ಬೆಂಗಳೂರು, ದಾವಣಗೆರೆ ಯಲ್ಲಿ ಉಳಿದ ಐವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಜೊತೆಗೆ ಎಸ್ಐಟಿಯಿಂದ ಇದುವರೆಗೂ ಒಟ್ಟು 35 ಕೋಟಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣವನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ