ಬೆಂಗಳೂರು ಅ.28: ಮಹರ್ಷಿ ವಾಲ್ಮೀಕಿ ಜಯಂತಿ (Valmiki) ಹಿನ್ನೆಲೆಯಲ್ಲಿ ವಿಧಾನಸೌಧದ (Vidhansoudha) ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯವನ್ನು ಉದ್ಘಾಟಿಸಿದರು.
ಮುಖ್ಯಮಂತ್ರಿ @siddaramaiah ಅವರು ಇಂದು ವಾಲ್ಮೀಕಿಯವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಣ್ಯರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ… pic.twitter.com/oHFznkdrfg— CM of Karnataka (@CMofKarnataka) October 28, 2023
ತಳ ಸಮುದಾಯದ ಅಭಿವೃದ್ಧಿಗೆ ಸಿದ್ದರಾಮಯ್ಯರಂತಹ ಸಿಎಂ ಬೇಕು. ಶುಕ್ರವಾರ ಸಿಎಂ ಜತೆ ಪ್ರತ್ಯೇಕ ಸಚಿವಾಲಯದ ಬಗ್ಗೆ ಚರ್ಚೆ ಮಾಡಿದ್ದೇವು. ಇವತ್ತು ಸಿಎಂ ಸಿದ್ದರಾಮಯ್ಯ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣ ಪ್ರತ್ಯೇಕ ಸಚಿವಾಲಯ ಉದ್ಘಾಟನೆ ಮಾಡಿದ್ದಾರೆ. 15 ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಕ್ಷೇತ್ರ ಗೆದಿದ್ದೇವೆ. ಸತೀಶ್ ಅಣ್ಣ ತಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬಗ್ಗೆ ಸಲಹೆ ನೀಡಿದ್ದಾರೆ ಎಂದು ಸಚಿವ ನಾಗೇಂದ್ರ ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಚಿವರಾದ ಬಿ. ನಾಗೇಂದ್ರ, ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಸಿಎಸ್ ವಂದಿತ ಶರ್ಮಾ ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ