AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಎಸ್.ಟಿ ಮೀಸಲಾತಿ ಶೇ 3 ರಿಂದ ಶೇ 7ಕ್ಕೆ ರಾಜ್ಯ ಸರ್ಕಾರ ಹೆಚ್ಚಿಸಿದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ಅವರನ್ನ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 07, 2022 | 10:59 PM

Share

ಬೆಂಗಳೂರು: ನಗರದಲ್ಲಿ ಇಂದು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿಯವರು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿ ಮಾಡಿ ಆಶೀರ್ವದಿಸಿ ಕೃತಜ್ಞತೆ ಅರ್ಪಿಸಿದರು. ಎಸ್.ಟಿ ಮೀಸಲಾತಿ ಶೇ 3 ರಿಂದ ಶೇ 7ಕ್ಕೆ ರಾಜ್ಯ ಸರ್ಕಾರ ಹೆಚ್ಚಿಸಿದ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಪ್ರಲ್ಹಾದ್ ಜೋಶಿ ಅವರನ್ನ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಈ ಹಿಂದೆ ಸ್ವಾಮೀಜಿಯವರು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಿರತರಾಗಿದ್ದಾಗ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ವಾಮೀಜಿಯವರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ್ದರು. ಮೀಸಲಾತಿ ಹೆಚ್ಚಳ ವಿಚಾರವಾಗಿ ಸಿಎಂ ಹಾಗೂ ರಾಜ್ಯ ಸರ್ಕಾರದ ಜೊತೆ ಚರ್ಚಿಸಿ ಸಹಕರಿಸುವುದಾಗಿ ಭೇಟಿ ವೇಳೆ ಸ್ವಾಮೀಜಿಗೆ ಜೋಶಿಯವರು ಭರವಸೆ ನೀಡಿದ್ದರು.

ಆ ಬಳಿಕ ಪ್ರಲ್ಹಾದ್ ಜೋಶಿಯವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಎಸ್.ಟಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ ನಡೆಸಿದ್ದರು. ಅಲ್ಲದೇ ಕೇಂದ್ರ ಸರ್ಕಾರದಿಂದ ಅಗತ್ಯ ಕಾನೂನು ಸಹಕಾರ ನೀಡುವು ಭರವಸೆ ನೀಡಿದ್ದರು. ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3% ನಿಂದ ಶೇ 7% ಗೆ ಹೆಚ್ಚಿಸಿದಕ್ಕೆ ಪ್ರಸನ್ನಾನಂದ ಸ್ವಾಮೀಜಿ ಪ್ರಲ್ಹಾದ್ ಜೋಶಿ ಅವರ ಭೇಟಿ ವೇಳೆ ಹರ್ಷ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇನ್ನು ಮುಂದೆಯೂ ಕೇಂದ್ರ ಸರ್ಕಾರದಿಂದ ಅಗತ್ಯವಾದ ಎಲ್ಲಾ ಸಹಕಾದ ನೀಡೋದಾಗಿ ಭರವಸೆ ನೀಡಿದ್ದಾರೆ.

ವಿಜಯಪುರದಿಂದ ಕೊಟ್ಟಾಯಂವರಿಗೆ ಹೊಸ ರೈಲು: ಅಯ್ಯಪ್ಪ ಸ್ವಾಮಿ ಭಕ್ತರ ಮನವಿಗೆ ಸ್ಪಂದಿಸಿದ ಪ್ರಲ್ಹಾದ್ ಜೋಶಿ

ವಿಜಯಪುರ: ಹುಬ್ಬಳ್ಳಿ ಧಾರವಾಡ ಹಾಗೂ ಉತ್ತರ ಕರ್ನಾಟಕ ಭಾಗದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಪಿಸಲು ಹೊಸ ರೈಲು ಸೇವೆ (New train) ಸೋಮವಾರದಿಂದ ಆರಂಭವಾಗಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಈ ವಿಷಯ ತಿಳಿಸಿದ್ದಾರೆ. ಹುಬ್ಬಳ್ಳಿಯಿಂದ ಶಬರಿ ಮಲೈಗೆ ಪ್ರಯಾಣಿಸಲು ರೈಲು ವ್ಯವಸ್ಥೆ ಕಲ್ಪಿಸುವಂತೆ ಅಯ್ಯಪ್ಪ ಸ್ವಾಮಿ ಭಕ್ತರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿ ಮಾಡಿ ಮನವಿ ಮಾಡಿದ್ದರು.‌ ಅಯ್ಯಪ್ಪ ಸ್ವಾಮಿ ಭಕ್ತರ ಕೋರಿಕೆಗೆ ಸ್ಪಂದಿಸಿದ ಪ್ರಲ್ಹಾದ್ ಜೋಶಿ, ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಗಮನಕ್ಕೆ ಈ ವಿಷಯ ತಂದು, ಸೂಕ್ತ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದ ಭಾಗದಿಂದ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ತೆರಳುತ್ತಾರೆ. ಕೇವಲ ಹುಬ್ಬಳ್ಳಿ-ಧಾರವಾಡ ಅಷ್ಟೇ ಅಲ್ಲದೆ ಉತ್ತರ ಕರ್ನಾಟಕ ಭಾಗದ ಎಲ್ಲ ಭಕ್ತರಿಗೂ ರೈಲಿನ ಅನುಕೂಲ ದೊರೆಯಲಿ ಎಂದು ಯೋಚಿಸಿ ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಶಬರಿ ಮಲೈಗೆ ಹೊಸ ರೈಲು ಕಲ್ಪಿಸುವಂತೆ ಪ್ರಲ್ಹಾದ್ ಜೋಶಿ ಕೇಂದ್ರ ರೈಲು ಸಚಿವರನ್ನ ಕೋರಿದ್ದರು.

ಅದರಂತೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಕೊಟ್ಟಾಯಂವರೆಗೆ ರೈಲನ್ನು ಆರಂಭಿಸುವಂತೆ ಆದೇಶಿಸಿದ್ದಾರೆ. 07385 ಸಂಖ್ಯೆಯ ಸಾಪ್ತಾಹಿಕ ರೈಲು ಸೋಮವಾರ ರಾತ್ರಿ 11 ಗಂಟೆಗೆ ವಿಜಯಪುರದಿಂದ ಹೊರಡಲಿದ್ದು, ಬುಧವಾರ ಬೆಳಗಿನ ಜಾವ 2 ಗಂಟೆಗೆ ಕೊಟ್ಟಾಯಂ ತಲುಪಲಿದೆ.

ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ, ಬಾದಾಮಿ, ಹೊಳೆ ಆಲೂರು, ಆಲಮಟ್ಟಿ, ಗದಗ, ಹುಬ್ಬಳ್ಳಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸಿಕೇರೆ, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಇರೋಡ್, ತಿರುಪ್ಪೂರು, ಕೊಯಂಬತ್ತೂರು, ಪಾಲಕ್ಕಾಡ್, ತ್ರಿಸ್ಸೂರು ಹಾಗೂ ಎರ್ನಾಕುಲಂ ಮಾರ್ಗವಾಗಿ ರೈಲು ಕೊಟ್ಟಾಯಂ ತಲುಪಲಿದೆ. ಕೋರಿಕೆಗೆ ಸ್ಪಂದಿಸಿ, ರೈಲು ಆರಂಭಿಸಲು ಆದೇಶಿಸಿರುವ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಧನ್ಯವಾದಗಳನ್ನ ತಿಳಿಸಿದ್ದಾರೆ. ಭಕ್ತಾದಿಗಳು ಈ ವರ್ಷದ ಮಾಲಧಾರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹೊಸ ರೈಲು ಅವರಿಗೆ ಅನುಕೂಲವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:52 pm, Mon, 7 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ