
ಬೆಂಗಳೂರು, ಜೂನ್ 26: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಸದ್ಯ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವುದು ಮತ್ತು ಓಹೆಚ್ಇ (OHE) ಪೋರ್ಟಲ್ಗಳನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜುಲೈ 2 ರಿಂದ 28 ರವರೆಗೆ ಅಂದರೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗಿದೆ. ಆ ಮೂಲಕ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲುಗಳ ಮಾರ್ಗದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.
Kindly note the diversion of Vande Bharat Express Trains.#SWRupdates pic.twitter.com/xK7FrHQHjj
ಇದನ್ನೂ ಓದಿ— South Western Railway (@SWRRLY) June 25, 2025
ಇದನ್ನೂ ಓದಿ: ಮುಕ್ತಾಯ ಹಂತಕ್ಕೆ ಸಿಗಂದೂರು ಸೇತುವೆ ಕಾಮಗಾರಿ: ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ಲೋಡ್ ಟೆಸ್ಟಿಂಗ್ ದೃಶ್ಯ
ಮಾರ್ಗ ಬದಲಾವಣೆಯ ಅವಧಿಯಲ್ಲಿ, ಮೇಲೆ ತಿಳಿಸಿದ ಯಾವುದೇ ರೈಲುಗಳ ನಿಲುಗಡೆಗಳನ್ನು ತಪ್ಪಿಸುವುದಿಲ್ಲ. ಎಲ್ಲಾ ನಿಗದಿತ ನಿಲುಗಡೆಗಳನ್ನು ನಿರ್ವಹಿಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲು ಸೇವೆಗಳ ತಾತ್ಕಾಲಿಕ ನಿಲುಗಡೆಯನ್ನು ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಅಂದರೆ ಆರು ತಿಂಗಳ ಅವಧಿಗೆ ವಿಸ್ತರಿಸಿದೆ.
ರೈಲು ಸಂಖ್ಯೆ 16587, 16588 ಯಶವಂತಪುರ-ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿನ ನಿಲುಗಡೆಯು ವಿಸ್ತರಿಸಿದ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ಮುಂದುವರಿಯಲಿದೆ.
ಕೆಳಗಿನ ರೈಲುಗಳು ಪ್ರಾಯೋಗಿಕ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ರಾಮಗಿರಿ ನಿಲ್ದಾಣದಲ್ಲಿ ನಿಲುಗಡೆಯನ್ನು ಮುಂದುವರೆಯಲಿವೆ.
ಇದನ್ನೂ ಓದಿ: ಇನ್ಮುಂದೆ ಐದು ಖಾಸಗಿ ಆ್ಯಪ್ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.