AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ: ಕೆ.ಆರ್​.ಮಾರ್ಕೆಟ್​ನಲ್ಲಿ ಹೂವು, ಹಣ್ಣು ಖರೀದಿ ಜೋರು

ವರಮಹಾಲಕ್ಷ್ಮೀ ಹಬ್ಬ ಹಿನ್ನಲೆ ಕೆ.ಆರ್ ಮಾರ್ಕೆಟ್​ನಲ್ಲಿ ಹಬ್ಬದ ಖರೀದಿ ಜೋರಾಗಿದ್ದು, ಕೆ.ಆರ್ ಮಾರುಕಟ್ಟೆಯಲ್ಲಿ ಜನಜಾತ್ರೆ ನಡೆದಿದೆ. ನಗರದ ಮಾರುಕಟ್ಟೆಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಖರೀದಿ ಅಬ್ಬರ ಶುರುವಾಗಿದೆ.

ನಾಳೆ ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ: ಕೆ.ಆರ್​.ಮಾರ್ಕೆಟ್​ನಲ್ಲಿ ಹೂವು, ಹಣ್ಣು ಖರೀದಿ ಜೋರು
ಕೆ.ಆರ್​.ಮಾರ್ಕೆಟ್​ನಲ್ಲಿ ಹಬ್ಬದ ಖರೀದಿ ಭರಾಟೆ ಜೋರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 04, 2022 | 10:07 AM

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬ ಹೆಸರೇ ಹೇಳುವಂತೆ ಬೇಡಿದ ವರ ಕರುಣಿಸುವ ಮಹಾಲಕ್ಷ್ಮೀ. (Varamahalakshmi) ಈ ಹಬ್ಬ ಅಥವಾ ವ್ರತ ಆಚರಿಸುವುದರಿಂದ ತಾಯಿ ಲಕ್ಷ್ಮಿಯ ಸಂಪೂರ್ಣ ಅನುಗ್ರಹಕ್ಕೆ ಪಾತ್ರವಾಗಬಹುದು. ಇನ್ನೂ ವರಮಹಾಲಕ್ಷ್ಮೀ ಹಬ್ಬ ಹೆಣ್ಮಕ್ಕಳಿಗೆ ಮೆಚ್ಚಿನ ಹಬ್ಬವೆಂದು ಹೇಳಬಹುದು. ಈ ಹಬ್ಬಕಾಗಿಯೇ ಅವರು ಅಂದವಾಗಿ ರೆಡಿಯಾಗಿ ಮನೆ ತುಂಬಾ ಓಡಾಡುತ್ತಿರುತ್ತಾರೆ. ಈ ಹಬ್ಬಕ್ಕಾಗಿ ಮನೆ ಎರಡು ವಾರಗಳ ಮುಂಚೆಯೇ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ನಾಳೆ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬವಿದ್ದು, ಸಡಗರದ ವರಮಹಾಲಕ್ಷ್ಮೀ ಹಬ್ಬದ ಆಚರಣೆಗೆ ಸಿಟಿ ಜನರು ಮುಂದಾಗಿದ್ದಾರೆ.

ಇದನ್ನೂ ಓದಿ; National Mango Day 2022: ಇಂದು ರಾಷ್ಟ್ರೀಯ ಮಾವು ದಿನ, ಹಣ್ಣುಗಳ ರಾಜನ ಬಗ್ಗೆ ಒಂದಿಷ್ಟು ಅರಿಯೋಣ ಬನ್ನಿ

ವರಮಹಾಲಕ್ಷ್ಮೀ ಹಬ್ಬ ಹಿನ್ನಲೆ ಕೆ.ಆರ್ ಮಾರ್ಕೆಟ್​ನಲ್ಲಿ ಹಬ್ಬದ ಖರೀದಿ ಜೋರಾಗಿದ್ದು, ಕೆ.ಆರ್ ಮಾರುಕಟ್ಟೆಯಲ್ಲಿ ಜನಜಾತ್ರೆ ನಡೆದಿದೆ. ನಗರದ ಮಾರುಕಟ್ಟೆಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಖರೀದಿ ಅಬ್ಬರ ಶುರುವಾಗಿದ್ದು, ಕೆ.ಆರ್ ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಹಬ್ಬದ ವಸ್ತುಗಳನ್ನ ಕೊಳ್ಳಲು ಜನ ಬ್ಯುಸಿಯಾಗಿದ್ದಾರೆ. ಈ ಬಾರಿ ವರಮಹಾಲಕ್ಷ್ಮೀ ಹಬ್ಬವನ್ನು ಜನತೆ ಸಡಗರದಿಂದ ಆಚರಿಸುತ್ತಿದ್ದಾರೆ.

ಇದನ್ನೂ ಓದಿ; 5G Service: ಆಗಸ್ಟ್​ನಿಂದ ಭಾರತದಲ್ಲಿ ಏರ್​ಟೆಲ್ 5G ಸೇವೆ: ಮೊದಲ ಗುತ್ತಿಗೆ ಎರಿಕ್​ಸನ್ ಪಾಲು

ದರದಲ್ಲಿ ಕೊಂಚ ಏರಿಕೆ:

ಕಳೆದ ಮೂರು ದಿನಕ್ಕೆ ಹೋಲಿಸಿದರೆ ಹೂವು, ಹಣ್ಣು ಬೆಲೆಗಳ ದರದಲ್ಲಿ ಸ್ವಲ್ಪ ಏರಿಕೆಯಾಗಿದೆ. ಹಣ್ಣುಗಳಲ್ಲಿ 30-40 ಏರಿಕೆಯಾದರೆ, ಹೂವುಗಳಲ್ಲಿ 40- 50 ರೂ ಏರಿಕೆಯಾಗಿದೆ. ದರ ಕೊಂಚ ಏರಿಕೆಯಾಗಿದ್ರು ಹಬ್ಬದ ಪರ್ಚೆಸಲ್ಲಿ ಸಿಲಿಕಾನ್ ಸಿಟಿ ಮಂದಿ ಬ್ಯುಸಿಯಾಗಿದ್ದಾರೆ. ಕೋವಿಡ್ ಹಿನ್ನಲೆ ಕಳೆದೆರಡು ಮೂರು ವರ್ಷದಿಂದ ಹಬ್ಬ ಆಚರಿಸದ ಜನರಿಗೆ ಈ ಬಾರಿ ಹಬ್ಬ ಜೋರು ಮಾಡುವ ಉತ್ಸಾಹದಲ್ಲಿದ್ದಾರೆ.

ವರಮಹಾಲಕ್ಷ್ಮೀ ಹಬ್ಬಕ್ಕೆ ಬೆಲೆ ಏರಿಕೆಯ ಶಾಕ್

ಮಲ್ಲಿಗೆ ಒಂದು ಮಾರು 200 ಕನಕಾಂಬರ ಒಂದು ಮಾರು 300 kg ಸೇವಂತಿಗೆ 400 kg ಗುಲಾಬಿ – 410 kg ಸುಗಂಧರಾಜ 110 kg ಚೆಂಡು ಹೂವು 80 kg

ಇಂದಿನ ಹಣ್ಣುಗಳ ಬೆಲೆ

– ಸೇಬು 180 kg – ದಾಳಿಂಬೆ 150 kg – ಮೂಸಂಬಿ 100 kg – ಆರೆಂಜ್ 220 kg – ಸಪೋಟ 200 kg – ಸೀಬೆಹಣ್ಣು 100 kg – ಏಲಕ್ಕಿ ಬಾಳೆಹಣ್ಣು 80 kg – ದ್ರಾಕ್ಷಿ 200-220 kg

ಅಗತ್ಯ ವಸ್ತುಗಳ ಬೆಲೆ

– ಮಾವಿನ ಎಲೆ 20 – ಕಟ್ಟು – ಬಾಳೆ ಕಂಬ – 50 – ಬೇವಿನ ಸೊಪ್ಪು – 20 – ಕಟ್ಟು – ತುಳಸಿ ತೋರಣ – 50 – ಮಾರು – ಬೆಲ್ಲ (ಅಚ್ಚು / ಉಂಡೆ) – 70 – 80 kg

Published On - 8:48 am, Thu, 4 August 22

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ