AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಇಂದು ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ

ಕೆಂಗೇರಿ ಮೆಟ್ರೋ ನಿಲ್ದಾಣನಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.30 ಕ್ಕೆ ಹೊರಡಲಿದ್ದು ಇದು ಕೊನೆ ಸೇವೆಯಾಗಿದೆ. ಭಾನುವಾರದಂದು ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ. 

ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಇಂದು ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ
ನಮ್ಮ ಮೆಟ್ರೋ
TV9 Web
| Edited By: |

Updated on:Apr 23, 2022 | 6:34 AM

Share

ಬೆಂಗಳೂರು: ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ (Metro) ನಿಲ್ದಾಣದ ಮಧ್ಯೆ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನಲೆ ಇಂದು (ಏಪ್ರಿಲ್ 23) ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ವೇಳೆ ಪ್ರಯಾಣಿಕರಿಗೆ ಎಂಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆ ಸಿಗಲಿದೆ. ಕೆಂಗೇರಿ ಮೆಟ್ರೋ ನಿಲ್ದಾಣನಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.30 ಕ್ಕೆ ಹೊರಡಲಿದ್ದು ಇದು ಕೊನೆ ಸೇವೆಯಾಗಿದೆ. ಭಾನುವಾರದಂದು ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೈಯ್ಯಪ್ಪನಹಳ್ಳಿ-ವೈಟ್​ಫೀಲ್ಡ್​​ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನೇರಳೆ ಮಾರ್ಗದ (ಪರ್ಪಲ್ ಲೈನ್) ರೈಲುಗಳ ಕಾರ್ಯಾಚರಣೆ ಆರಂಭವಾಗುವ ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ. ಪ್ಲಾಟ್​ಫಾರಂ 3ರಿಂದ ಮಾತ್ರವೇ ಆಗಮನ, ನಿರ್ಗಮನ ಸಂಚಾರ ನಿರ್ವಹಿಸಲಾಗುತ್ತಿದೆ. ಮಾರ್ಚ್ 2ರಿಂದ ಆರಂಭಿಸಿ ಮುಂದಿನ 6 ತಿಂಗಳ ಕಾಲದಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಮ್ಮ ಮೆಟ್ರೋ ಮಾಧ್ಯಮ ಪ್ರಕಟಣೆ ನೀಡಿದೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮೆಟ್ರೊ

ಬೆಂಗಳೂರಿನ ಹಲವೆಡೆ ಮೆಟ್ರೋ ವಿಸ್ತರಣೆ ಕಾಮಗಾರಿಗಳು ಭರದಿಂದ ಸಾಗಿವೆ. ರಾತ್ರಿ ವೇಳೆ ನಡೆಯುತ್ತಿರುವ ಕಾಮಗಾರಿಗಳಿಂದ ತೊಂದರೆಯಾಗುತ್ತಿದೆ ಎಂದು ಬೆಂಗಳೂರಿನ ವಿವಿಧೆಡೆ ಜನರು ದೂರು ಸಲ್ಲಿಸಿದ್ದರು. ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂಬ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನಿಗಮವು ರಾತ್ರಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಇದನ್ನೂ ಓದಿ:

RCB vs SRH Prediction Playing XI: ಆರ್​ಸಿಬಿಗೆ ಹೈದರಾಬಾದ್ ಸವಾಲು; ಉಭಯ ತಂಡಗಳ ಸಂಭಾವ್ಯ ಇಲೆವೆನ್

ಶಬ್ದಮಾಲಿನ್ಯ: ಹೈಕೋರ್ಟ್ ಆದೇಶ ಉಲ್ಲಂಘಿಸಿದ ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸ್ ನೋಟಿಸ್, ಇಲ್ಲಿದೆ ಪಟ್ಟಿ

Published On - 6:56 pm, Fri, 22 April 22

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?