AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Siddaramaiah: ವರುಣಾ ಕ್ಷೇತ್ರದ ಜನರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸುಲಭ ಭೇಟಿಗೆ ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ತಮ್ಮ ಸರ್ಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ.

CM Siddaramaiah: ವರುಣಾ ಕ್ಷೇತ್ರದ ಜನರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
ಆಯೇಷಾ ಬಾನು
|

Updated on: May 31, 2023 | 12:00 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಎರಡೆರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿ, ಬಿಜೆಪಿ ಮುಖಂಡರ ಬಾಯಿಗೆ ಸಿಕ್ಕು, ಕೊನೆಗೆ ಇದಾ ಆದಾ ಎಂಬ ಚಿಂತೆಯಲ್ಲಿ ತಲೆ ಮೇಲೆ ಕೈ ಹಿಡಿದು ಕುಂತಿದ್ದ ಸಿದ್ದರಾಮಯ್ಯ(Siddaramaiah) ಗೆಲುವನ್ನು ತಮ್ಮದಾಗಿಸಿಕೊಂಡು ರಾಜ್ಯದ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಸದ್ಯ ತಮಗೆ ಈ ಸ್ಥಾನ ಸಿಗುವಂತೆ ಮಾಡಿದ ಮತದಾರ ಪ್ರಭುಗಳಿಗೆ ತಮ್ಮನ್ನು ಭೇಟಿ ಮಾಡಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇನ್ನು ಮುಂದೆ ವರುಣಾ ಕ್ಷೇತ್ರದ(Varuna Constituency) ಜನ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡುವುದು ತುಂಬಾ ಸುಲಭ.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸುಲಭ ಭೇಟಿಗೆ ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ತಮ್ಮ ಸರ್ಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ವರುಣಾದಿಂದ ಬಂದ ಮತದಾರರು ತಮ್ಮ ಅಡ್ರೆಸ್ ತೋರಿಸಿ ಒಳಗೆ ಹೋಗಲು ಅವಕಾಶ ನೀಡಲಾಗಿದೆ. ಆಧಾರ್, ಐಡಿ ಚೆಕ್ ಮಾಡಿ ವರುಣಾ ಕ್ಷೇತ್ರದ ಮತದಾರರು ಇದ್ರೆ ಅವರನ್ನು ಸಿಎಂ ಭೇಟಿಗೆ ಬಿಡಲು ಪೊಲೀಸರಿಗೆ ಸೂಚಿಸಲಾಗಿದೆ. ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಿಎಂ ಆಗಿದ್ದಾರೆ. ಹೀಗಾಗಿ ಕೊನೆಯ ಅಧಿಕಾರದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಮತದಾರರಿಗೆ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಅಭಿಮಾನಿಗಳು ಮತ್ತಷ್ಟು ಖುಷಿ ಪಟ್ಟಿ ಸಂಭ್ರಮಿಸಿದ್ದಾರೆ.

ಇದನ್ನೋ ಓದಿ: Siddaramaiah Profile: ಕುರಿ ಎಣಿಸುವ ಕುರುಬನಿಗ್ಯಾಕೆ ಹಣಕಾಸು ಖಾತೆ ಎಂದವರು ಮುಖ ಮುಚ್ಚಬೇಕಾಯ್ತು; ಕರ್ನಾಟಕ ರಾಜಕೀಯ ಮಾಸ್ತರ ಸಿದ್ದರಾಮಯ್ಯ, ಹೌದೋ ಹುಲಿಯಾ

ಕುರಿ ಎಣಿಸುವ ಕುರುಬ ಹಣಕಾಸು ಖಾತೆ ಇಟ್ಟುಕೊಂಡು ಏನ್ ಮಾಡ್ತಾನೆ ಎಂದು ಹಂಗಿಸಿದವರ ಮುಂದೆ ದಾಖಲೆಯ 13 ಬಾರಿ ಬಜೆಟ್ ಮಂಡಿಸಿ ತಾನೆಂಥವ ಎಂದು ತೋರಿಸಿದವರು ಸಿದ್ದರಾಮಯ್ಯ. ಸಿದ್ದರಾಮಯ್ಯ ಬಹಳ ಕಷ್ಟ ಕಾರ್ಪಣ್ಯದ ಸ್ಥಿತಿಯಲ್ಲಿ ಬೆಳೆದವರಾದ್ದರಿಂದ ಬಡವರ ಬಗ್ಗೆ ಸಹಜವಾಗಿಯೇ ಕಾಳಜಿ ಹೆಚ್ಚು. ಖ್ಯಾತ ಸಮಾಜವಾದಿ ಡಾಕ್ಟರ್ ರಾಮಮನೋಹರ್ ಲೋಹಿಯಾ ಸಿದ್ಧಾಂತದಿಂದ ಪ್ರೇರಿತರಾದ ಸಿದ್ದರಾಮಯ್ಯ ಸಿಎಂ ಆದಾಗ ಬಡವರ ಏಳ್ಗೆಗೆ ಮತ್ತವರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲು ಮೀನ ಮೇಷ ಎಣಿಸಲಿಲ್ಲ. ಅನ್ನ ಭಾಗ್ಯ, ಕ್ಷೀರ ಭಾಗ್ಯ, ವಿದ್ಯಾಸಿರಿ ಇತ್ಯಾದಿ ಅವರ ಜನಪ್ರಿಯ ಯೋಜನೆಗಳ ಸಾಲಿನಲ್ಲಿ ನಿಲ್ಲುತ್ತವೆ. ಈಗ ಮತ್ತೆ ಎರಡನೇ ಬಾರಿಗೆ ಸಿಎಂ ಆಗಿ ಜನಪರ ಯೋಜನೆಗಳನ್ನು ಜಾರಿ ಮಾಡುತ್ತಿದ್ದಾರೆ. ತಮಗೆ ಮತ ಹಾಕಿದ ಮತದಾರ ಪ್ರಭುಗಳ ಕಷ್ಟ ಆಲಿಸಲು ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿ ಜನ ಸ್ನೇಹಿ ಸಿಎಂ ಆಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ