AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ಗೆ ಬೆಂಬಲ ನೀಡುವಂತೆ ಮನವಿ; ಸೋಮವಾರ ವಾಟಾಳ್ ನಾಗರಾಜ್​ರಿಂದ ಉರುಳು ಸೇವೆ

Vatal Nagaraj: ಎಂಇಎಸ್ ಬ್ಯಾನ್ ಮಾಡುವಂತೆ ಆಗ್ರಹಿಸಿ ಬಂದ್ ಮಾಡುತ್ತೇವೆ. ಹೀಗಾಗಿ ಬಸ್, ಆಟೋ, ರೈಲು ಯಾವುದೇ ವಾಹನಗಳು ಇರಲ್ಲ. ಹೀಗಾಗಿ ಮನೆಯಿಂದ ಹೊರಗಡೆ ಬರಬೇಡಿ ಎಂದು ಅನೌನ್ಸ್ ಮಾಡುತ್ತಿದ್ದಾರೆ.

ಕರ್ನಾಟಕ ಬಂದ್​ಗೆ ಬೆಂಬಲ ನೀಡುವಂತೆ ಮನವಿ; ಸೋಮವಾರ ವಾಟಾಳ್ ನಾಗರಾಜ್​ರಿಂದ ಉರುಳು ಸೇವೆ
ವಾಟಾಳ್ ನಾಗರಾಜ್
TV9 Web
| Edited By: |

Updated on: Dec 26, 2021 | 4:44 PM

Share

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್ ನಡೆಸಲಿರುವ ಹಿನ್ನೆಲೆ, ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಈ ಸಂಬಂಧ ಸೋಮವಾರ ಮಲ್ಲೇಶ್ವರಂ ಸರ್ಕಲ್‌ನಲ್ಲಿ ಉರುಳು ಸೇವೆ ಮಾಡುತ್ತೇವೆ. ಉರುಳು ಸೇವೆ ಮಾಡುವ ಮೂಲಕ ಮನವಿ ಮಾಡಿಕೊಳ್ಳುತ್ತೇವೆ. ಕರ್ನಾಟಕ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ನೈತಿಕ ಬೆಂಬಲ ಕೊಡುತ್ತೇವೆ ಎನ್ನುವವರು ಮನೆಯಲ್ಲೇ ಇರಿ. ನಿಮ್ಮ ನೈತಿಕ ಬೆಂಬಲ ನಮಗೆ ಬೇಡವೇ ಬೇಡ ಎಂದು ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ದಾರಿಯುದ್ದಕ್ಕೂ ಮನವಿ ಮಾಡುತ್ತಿರುವ ವಾಟಾಳ್ ನಾಗರಾಜ್, ಡಿಸೆಂಬರ್ 31ರಂದು ಮನೆಯಿಂದ ಯಾರೂ ಹೊರ ಬರಬೇಡಿ. ಎಂಇಎಸ್ ಬ್ಯಾನ್ ಮಾಡುವಂತೆ ಆಗ್ರಹಿಸಿ ಬಂದ್ ಮಾಡುತ್ತೇವೆ. ಹೀಗಾಗಿ ಬಸ್, ಆಟೋ, ರೈಲು ಯಾವುದೇ ವಾಹನಗಳು ಇರಲ್ಲ. ಹೀಗಾಗಿ ಮನೆಯಿಂದ ಹೊರಗಡೆ ಬರಬೇಡಿ ಎಂದು ಅನೌನ್ಸ್ ಮಾಡುತ್ತಿದ್ದಾರೆ.

ಕರ್ನಾಟಕ ಬಂದ್ ಬೆಂಬಲಿಸುವುದಾಗಿ ಮಂತ್ರಿ ಮಾಲ್​ನವರು ಹೇಳಿದ್ದಾರೆ. ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮನವಿಗೆ ಸ್ಪಂದನೆ ನೀಡಿದ್ದಾರೆ. ರಾಜ್ಯದಲ್ಲಿ MES ನಿಷೇಧಕ್ಕೆ ಸರ್ಕಾರ ಮೇಲೆ ಒತ್ತಡ ತರಬೇಕು. ಕೇಂದ್ರ, ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಬಂದ್​ಗೆ ಕರೆ ನೀಡಬೇಕು. ಡಿ.31ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್​ ಮಾಡ್ಬೇಕು. ಎಲ್ಲಾ ಮಾಲ್​ಗಳು ಕನ್ನಡ ಪರ ಹೋರಾಟಗಾರರನ್ನು ಬೆಂಬಲಿಸಿ ಎಂದು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಕರ್ನಾಟಕ ಬಂದ್‌ನಿಂದ ಮಹಾರಾಷ್ಟ್ರದವರಿಗೆ ತೊಂದರೆ ಆಗಲ್ಲ; ಬಂದ್‌ಗೆ ಕರೆ ನೀಡಿದವರು ಈ ಬಗ್ಗೆ ಯೋಚಿಸಬೇಕು’

ಇದನ್ನೂ ಓದಿ: ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ