Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಪ್ರಣಾಳಿಕೆಯಲ್ಲಿ ಮೇಕಾದಟು: ತಮಿಳುನಾಡು ಸಿಎಂ ಸ್ಟಾಲಿನ್​ ವಿರುದ್ಧ ವಾಟಾಳ್​​ ಗರಂ

ಕೇಂದ್ರದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ ನೀಡೋದಾಗಿ ಡಿಎಂಕೆ ಪಕ್ಷ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ. ಇದನ್ನು ವಿರೋಧಿಸಿ ಬೆಂಗಳೂರು ನಗರ ಜಿಲ್ಲೆ ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಡಿಎಂಕೆ ಪ್ರಣಾಳಿಕೆಯಲ್ಲಿ ಮೇಕಾದಟು: ತಮಿಳುನಾಡು ಸಿಎಂ ಸ್ಟಾಲಿನ್​ ವಿರುದ್ಧ ವಾಟಾಳ್​​ ಗರಂ
ವಾಟಾಳ್​ ನಾಗರಾಜ್​​
Follow us
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on: Mar 24, 2024 | 2:53 PM

ಆನೇಕಲ್, ಮಾರ್ಚ್​​ 24: ಕೇಂದ್ರದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು (Mekedatu Project) ತಡೆಯುವುದಾಗಿ ಡಿಕೆಎಂಕೆ (DMK Party) ತನ್ನ ಲೋಕಸಭಾ ಪ್ರಾಣಾಳಿಕೆಯಲ್ಲಿ ಹೊರಡಿಸಿರುವುದನ್ನು ವಿರೋಧಿಸಿ ಬೆಂಗಳೂರು ನಗರ ಜಿಲ್ಲೆಯ ಆನೆಕಲ್​ ತಾಲೂಕಿನ ಗಡಿಭಾಗ ಅತ್ತಿಬೆಲೆಯಲ್ಲಿ ಕನ್ನಡ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ (Vatal Nagar) ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವಾ, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕುಮಾರ್ ಭಾಗಿಯಾಗಿದ್ದರು.

ಪ್ರತಿಭಟನೆ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಾಟಾಳ್​ ನಾಗರಾಜ್​, ಮೇಕೆದಾಟು ಯೋಜನೆಗೆ ತಮಿಳುನಾಡು (Tamilanadu) ರಾಜಕಾರಣಿಗಳು ಏಕೆ ವಿರೋಧ ಮಾಡುತ್ತಿದ್ದೀರಿ? ಕರುಣಾನಿಧಿ, ಜಯಲಲಿತಾ, ಎಂಜಿಆರ್ ಕಾಲದಿಂದಲೂ ನಾವು ಹೋರಾಟ ಮಾಡುತ್ತಿದ್ದೆವೆ. ಮೇಕೆದಾಟು ಯೋಜನೆಯಿಂದ ನಿಮಗೆ ಆಗುವ ನಷ್ಟ ಏನು. ಅದನ್ನು ಮೊದಲು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆಯಿಂದ ರಾಜ್ಯಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಮಳೆಗಾಲದಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯುತ್ತೇವೆ. ನಿಮ್ಮ ಡ್ಯಾಮ್​ಗಳಿಗೂ ನೀರನ್ನು ಹರಿಸುತ್ತೇವೆ. ಆದರೆ ಸ್ಟಾಲಿನ್ ತಮಿಳುನಾಡು ಜನರನ್ನು ರಾಜ್ಯದ ವಿರುದ್ಧ ಎತ್ತುಕಟ್ಟುತ್ತಿದ್ದಾರೆ. ನಾವು ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದರು.

ಇದನ್ನೂ ಓದಿ: ಇಂಡಿಯಾ ಕೂಟ ಗೆದ್ರೆ ಮೇಕೆದಾಟು ಬಂದ್‌ ಎಂದ ಡಿಎಂಕೆ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ

ಸದ್ಯ ಬೆಂಗಳೂರಿನಲ್ಲಿ ಕುಡಿಯುವ ನೀರಿಲ್ಲ. ಬೆಂಗಳೂರಿನಲ್ಲೂ ತಮಿಳರು ಇದ್ದಾರೆ. ಸ್ಟಾಲಿನ್ ಅವರೆ ನಿಮ್ಮ ತಮಿಳರನ್ನು ವಾಪಸ್ ಕರೆಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರ ತಮಿಳುನಾಡಿಗೆ ಈಗಾಗಲೇ ನೀರು ಹರಿಸಿದೆ. ರಾಜ್ಯದ ಜನರ ಹಿತ ಮರೆತು ಅಧಿಕಾರಕ್ಕಾಗಿ‌ ನೀರು ಹರಿಸಿದ್ದಾರೆ. ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳು ಮೇಕೆದಾಟಿಗಾಗಿ ಪಾದಯಾತ್ರೆ ಮಾಡಿದರು. ಈಗ ಅವರೇ ಯೋಜನೆ ಮರೆತು ನೀರು ಬಿಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ನಮ್ಮ ರಾಜ್ಯದ ಸಿನಿಮಾ ನಟರು ಕಾವೇರಿ ಹೋರಾಟದಲ್ಲಿ ಮತ್ತು ರೈತರ ಹೋರಾಟದಲ್ಲಿ ಬೀದಿಗೆ ಬರಬೇಕು. ತಮಿಳು ನಟರಾದ ರಜನಿಕಾಂತ್, ಕಮಲ್ ಹಾಸನ್ ಸ್ಟಾಲಿನ್​ಗೆ ಮೇಕೆದಾಟು ಯೋಜನೆ ಜಾರಿಗೆ ಅಡ್ಡಿಪಡಿಸದಂತೆ ಹೇಳಬೇಕು. ಇಲ್ಲವಾದರೆ ರಜನಿಕಾಂತ್, ಕಮಲ್ ಹಾಸನ್ ನಮ್ಮ ರಾಜ್ಯಕ್ಕೆ ಬರಬೇಡಿ. ರಾಜ್ಯದಲ್ಲಿ ತಮಿಳು ಸಿನಿಮಾಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ