AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಪ್ರಣಾಳಿಕೆಯಲ್ಲಿ ಮೇಕಾದಟು: ತಮಿಳುನಾಡು ಸಿಎಂ ಸ್ಟಾಲಿನ್​ ವಿರುದ್ಧ ವಾಟಾಳ್​​ ಗರಂ

ಕೇಂದ್ರದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ ನೀಡೋದಾಗಿ ಡಿಎಂಕೆ ಪಕ್ಷ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ. ಇದನ್ನು ವಿರೋಧಿಸಿ ಬೆಂಗಳೂರು ನಗರ ಜಿಲ್ಲೆ ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಡಿಎಂಕೆ ಪ್ರಣಾಳಿಕೆಯಲ್ಲಿ ಮೇಕಾದಟು: ತಮಿಳುನಾಡು ಸಿಎಂ ಸ್ಟಾಲಿನ್​ ವಿರುದ್ಧ ವಾಟಾಳ್​​ ಗರಂ
ವಾಟಾಳ್​ ನಾಗರಾಜ್​​
ರಾಮು, ಆನೇಕಲ್​
| Edited By: |

Updated on: Mar 24, 2024 | 2:53 PM

Share

ಆನೇಕಲ್, ಮಾರ್ಚ್​​ 24: ಕೇಂದ್ರದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು (Mekedatu Project) ತಡೆಯುವುದಾಗಿ ಡಿಕೆಎಂಕೆ (DMK Party) ತನ್ನ ಲೋಕಸಭಾ ಪ್ರಾಣಾಳಿಕೆಯಲ್ಲಿ ಹೊರಡಿಸಿರುವುದನ್ನು ವಿರೋಧಿಸಿ ಬೆಂಗಳೂರು ನಗರ ಜಿಲ್ಲೆಯ ಆನೆಕಲ್​ ತಾಲೂಕಿನ ಗಡಿಭಾಗ ಅತ್ತಿಬೆಲೆಯಲ್ಲಿ ಕನ್ನಡ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ (Vatal Nagar) ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವಾ, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕುಮಾರ್ ಭಾಗಿಯಾಗಿದ್ದರು.

ಪ್ರತಿಭಟನೆ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಾಟಾಳ್​ ನಾಗರಾಜ್​, ಮೇಕೆದಾಟು ಯೋಜನೆಗೆ ತಮಿಳುನಾಡು (Tamilanadu) ರಾಜಕಾರಣಿಗಳು ಏಕೆ ವಿರೋಧ ಮಾಡುತ್ತಿದ್ದೀರಿ? ಕರುಣಾನಿಧಿ, ಜಯಲಲಿತಾ, ಎಂಜಿಆರ್ ಕಾಲದಿಂದಲೂ ನಾವು ಹೋರಾಟ ಮಾಡುತ್ತಿದ್ದೆವೆ. ಮೇಕೆದಾಟು ಯೋಜನೆಯಿಂದ ನಿಮಗೆ ಆಗುವ ನಷ್ಟ ಏನು. ಅದನ್ನು ಮೊದಲು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆಯಿಂದ ರಾಜ್ಯಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಮಳೆಗಾಲದಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯುತ್ತೇವೆ. ನಿಮ್ಮ ಡ್ಯಾಮ್​ಗಳಿಗೂ ನೀರನ್ನು ಹರಿಸುತ್ತೇವೆ. ಆದರೆ ಸ್ಟಾಲಿನ್ ತಮಿಳುನಾಡು ಜನರನ್ನು ರಾಜ್ಯದ ವಿರುದ್ಧ ಎತ್ತುಕಟ್ಟುತ್ತಿದ್ದಾರೆ. ನಾವು ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದರು.

ಇದನ್ನೂ ಓದಿ: ಇಂಡಿಯಾ ಕೂಟ ಗೆದ್ರೆ ಮೇಕೆದಾಟು ಬಂದ್‌ ಎಂದ ಡಿಎಂಕೆ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ

ಸದ್ಯ ಬೆಂಗಳೂರಿನಲ್ಲಿ ಕುಡಿಯುವ ನೀರಿಲ್ಲ. ಬೆಂಗಳೂರಿನಲ್ಲೂ ತಮಿಳರು ಇದ್ದಾರೆ. ಸ್ಟಾಲಿನ್ ಅವರೆ ನಿಮ್ಮ ತಮಿಳರನ್ನು ವಾಪಸ್ ಕರೆಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರ ತಮಿಳುನಾಡಿಗೆ ಈಗಾಗಲೇ ನೀರು ಹರಿಸಿದೆ. ರಾಜ್ಯದ ಜನರ ಹಿತ ಮರೆತು ಅಧಿಕಾರಕ್ಕಾಗಿ‌ ನೀರು ಹರಿಸಿದ್ದಾರೆ. ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳು ಮೇಕೆದಾಟಿಗಾಗಿ ಪಾದಯಾತ್ರೆ ಮಾಡಿದರು. ಈಗ ಅವರೇ ಯೋಜನೆ ಮರೆತು ನೀರು ಬಿಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ನಮ್ಮ ರಾಜ್ಯದ ಸಿನಿಮಾ ನಟರು ಕಾವೇರಿ ಹೋರಾಟದಲ್ಲಿ ಮತ್ತು ರೈತರ ಹೋರಾಟದಲ್ಲಿ ಬೀದಿಗೆ ಬರಬೇಕು. ತಮಿಳು ನಟರಾದ ರಜನಿಕಾಂತ್, ಕಮಲ್ ಹಾಸನ್ ಸ್ಟಾಲಿನ್​ಗೆ ಮೇಕೆದಾಟು ಯೋಜನೆ ಜಾರಿಗೆ ಅಡ್ಡಿಪಡಿಸದಂತೆ ಹೇಳಬೇಕು. ಇಲ್ಲವಾದರೆ ರಜನಿಕಾಂತ್, ಕಮಲ್ ಹಾಸನ್ ನಮ್ಮ ರಾಜ್ಯಕ್ಕೆ ಬರಬೇಡಿ. ರಾಜ್ಯದಲ್ಲಿ ತಮಿಳು ಸಿನಿಮಾಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ