AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡ್ಡಾಯ ಕನ್ನಡ ನಾಮಫಲಕ ಅಳವಡಿಸದಿದ್ರೆ ಕರ್ನಾಟಕ ಬಂದ್ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

ಫೆಬ್ರವರಿ 28 ರೊಳಗೆ ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಸರ್ಕಾರ ಗಡುವು ನೀಡಿದೆ. ಸದ್ಯ ಈ ಡೆಡ್ ಲೈನ್ ಮುಗಿಯಲು ಎರಡು ದಿನ ಮಾತ್ರ ಬಾಕಿ ಇದೆ. ಒಂದಷ್ಟು ರಸ್ತೆಗಳ ಅಂಗಡಿ ಮುಂಗಟ್ಟುಗಳ ನಾಮಫಲಕ ಬದಲಾಗಿಲ್ಲ. ಹೀಗಾಗಿ ನಾಮಫಲಕ ಕಡ್ಡಾಯವಾಗದಿದ್ರೆ ಕರ್ನಾಟಕ ಬಂದ್ ಮಾಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಕಡ್ಡಾಯ ಕನ್ನಡ ನಾಮಫಲಕ ಅಳವಡಿಸದಿದ್ರೆ ಕರ್ನಾಟಕ ಬಂದ್ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್
ಹೋರಾಟಗಾರ ವಾಟಾಳ್ ನಾಗರಾಜ್
TV9 Web
| Edited By: |

Updated on: Feb 26, 2024 | 2:54 PM

Share

ಬೆಂಗಳೂರು, ಫೆ.26: ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಕನ್ನಡದ ರಣಕಹಳೆ ಮೊಳಗಲು ಸಜ್ಜಾಗ್ತಿದೆ. ಕನ್ನಡ ಕಡ್ಡಾಯ ನಾಮಫಲಕ ಅಳವಡಿಕೆಗೆ ನೀಡಿದ್ದ ಡೆಡ್ ಲೈನ್ ಮುಗಿಯುತ್ತ ಬಂದ್ರೂ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ನಾಮಫಲಕ ಬದಲಾಗದಿರೋದು ಕನ್ನಡ ಹೋರಾಟಗಾರರನ್ನ ಕೆರಳಿಸಿದೆ. ಡೆಡ್ ಲೈನ್ ಮುಗಿಯೋಕೆ ಎರಡೇ ದಿನ ಬಾಕಿ ಇದ್ದು, ನಾಮಫಲಕ ಕಡ್ಡಾಯವಾಗದಿದ್ರೆ ಕರ್ನಾಟಕ ಬಂದ್ (Karnataka Bandh) ಮಾಡೋದಾಗಿ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜ್ (Vatal Nagaraj) ಎಚ್ಚರಿಕೆ ಕೊಟ್ಟಿದ್ದಾರೆ

ರಾಜ್ಯ ರಾಜಧಾನಿಯಲ್ಲಿ ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗಾಗಿ ಕನ್ನಡ ಪರ ಸಂಘಟನೆಗಳು ರಣಕಹಳೆ ಮೊಳಗಿಸಿದ್ವು, ಸಿಕ್ಕ ಸಿಕ್ಕ ಅನ್ಯ ಭಾಷಾ ನಾಮಫಲಕ ಹೊಡೆದುಹಾಕಿದ್ದ ಹೋರಾಟಗಾರರ ಒತ್ತಡಕ್ಕೆ ಮಣಿದ ಸರ್ಕಾರ ಫೆಬ್ರವರಿ 28 ರೊಳಗೆ ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಿತ್ತು. ಆದರೆ ಡೆಡ್ ಲೈನ್ ಮುಗೀತಾ ಬಂದ್ರೂ ಒಂದಷ್ಟು ರಸ್ತೆಗಳ ಅಂಗಡಿ ಮುಂಗಟ್ಟುಗಳ ನಾಮಫಲಕ ಬದಲಾಗಿಲ್ಲ.

ಸದ್ಯ ಬೆಂಗಳೂರಿನ ಪ್ರಮುಖ ರಸ್ತೆಗಳಾದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯ ಕೆಲ ಅಂಗಡಿಗಳು ಇನ್ನೂ ನಾಮಫಲಕ ಬದಲಾಯಿಸಿಲ್ಲ. ಅತ್ತ ಅಧಿವೇಶನದಲ್ಲೂ ಕನ್ನಡ ನಾಮಫಲಕ ಪ್ರತಿಧ್ವನಿಸಿದ್ರೂ ಸರ್ಕಾರ ಕೂಡ ಸೈಲೆಂಟ್ ಆಗಿರೋದಕ್ಕೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಫೆಬ್ರವರಿ 28 ರೊಳಗೆ ಕಡ್ಡಾಯ ಕನ್ನಡ ನಾಮಫಲಕ ಹಾಕದಿದ್ರೆ ಕರ್ನಾಟಕ ಬಂದ್ ಮಾಡೋ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕನ್ನಡ ನಾಮಫಲಕ: ರಾಜ್ಯ ಸರ್ಕಾರ ಮಾತು ತಪ್ಪಿದರೆ ಎಲ್ಲಾ ಜಿಲ್ಲೆ ಗುಡುಗುತ್ತದೆ: ಕರವೇ ಅಧ್ಯಕ್ಷ ನಾರಾಯಣಗೌಡ

ಇನ್ನು ಬೆಂಗಳೂರಿನಲ್ಲಿ ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಸದವರ ವಿರುದ್ಧ ಮತ್ತೆ ಕನ್ನಡದ ಕಿಚ್ಚು ಹೊತ್ತುವ ಲಕ್ಷಣ ಕಾಣ್ತಿದೆ. ಡೆಡ್ ಲೈನ್ ಮುಗಿಯೋಕೆ ಕೇವಲ ಮೂರು ದಿನ ಬಾಕಿಯಿದ್ದು, ಡೆಡ್ ಲೈನ್ ಮುಗಿದ ಬಳಿಕ ಮತ್ತೊಮ್ಮೆ ಕನ್ನಡದ ರಣಕಹಳೆ ಮೊಳಗುತ್ತಾ,ಅಥವಾ ಈಗ ನೀಡಿರೋ ಗಡುವನ್ನ ಸರ್ಕಾರ ವಿಸ್ತರಣೆ ಮಾಡುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ಇನ್ನು ಮತ್ತೊಂದೆಡೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರು ಈ ಬಗ್ಗೆ ಮಾತನಾಡಿದ್ದು ಫೇ.28ರ ಒಳಗೆ ಕನ್ನಡಮಯವಾಗುತ್ತದೆ ಅಂತಾ ಸರಕಾರ ಹೇಳಿ ಸಮಯ ತೆಗೆದುಕೊಂಡಿದೆ. ಸರಕಾರ ಮಾತು ತಪ್ಪಿದರೆ 32 ಜಿಲ್ಲೆಯವರು ಗುಡುಗಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಇನ್ನೊಂದು ಹೋರಾಟದಲ್ಲಿ ನಮ್ಮನ್ನ ಬಂಧಿಸಿ, ಆಗ ಗೊತ್ತಾಗುತ್ತದೆ. ಇಡೀ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!