Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರನ್ನು ಕಾಪಾಡಿ ಎಂದು ಈಡಿಗಾಯಿ ಒಡೆದು ದೇವಸ್ಥಾನಗಳ ಮುಂದೆ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ

ವಾಟಾಳ್ ನಾಗರಾಜ್ ವಿನೂತನ ಚಳುವಳಿ ಮಾಡಿದ್ದು, ದೇವಸ್ಥಾನಗಳ ಮುಂದೆ ಬೆಂಗಳೂರನ್ನುಕಾಪಾಡಿ ಕಾಪಾಡಿ ಎಂದು ಈಡಿಗಾಯಿ ಒಡೆದು ವಿನೂತನ ಪ್ರತಿಭಟನೆ ಮಾಡಿದ್ದಾರೆ.

ಬೆಂಗಳೂರನ್ನು ಕಾಪಾಡಿ ಎಂದು ಈಡಿಗಾಯಿ ಒಡೆದು ದೇವಸ್ಥಾನಗಳ ಮುಂದೆ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ
ವಾಟಾಳ ನಾಗರಾಜ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 09, 2022 | 5:14 PM

ಬೆಂಗಳೂರು: ವಾಟಾಳ್ ನಾಗರಾಜ್ (Vatal Nagaraj)​ ವಿನೂತನ ಚಳುವಳಿ ಮಾಡಿದ್ದು, ದೇವಸ್ಥಾನಗಳ ಮುಂದೆ ಬೆಂಗಳೂರನ್ನು (Bengaluru) ಕಾಪಾಡಿ ಕಾಪಾಡಿ ಎಂದು ಈಡಿಗಾಯಿ ಒಡೆದು ವಿನೂತನ ಪ್ರತಿಭಟನೆ ಮಾಡಿದ್ದಾರೆ. ಮಳೆಯಿಂದಾಗಿ ಬೆಂಗಳೂರು ಮುಳುಗಿ ಜನರು ಕಣ್ಣೀರಿಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ತಾಯಿ ಅಣ್ಣಮ್ಮ ದೇವಿಯೇ ಬೆಂಗಳೂರನ್ನು ಉಳಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರು ಈಗ ಪರ ಭಾಷಿಗರ ರಾಜ್ಯ ಹಾಗೆ ಆಗಿಬಿಟ್ಟಿದೆ. ತೆಲುಗು, ತಮಿಳು, ಮಲಯಾಳಿ, ಗುಜರಾತಿ, ಹೀಗೆ ಎಲ್ಲರೂ ಬಂದು ಬೆಂಗಳೂರನ್ನು ಹಾಳು ಮಾಡಿದ್ದಾರೆ. ಎಲ್ಲಂದರೆ ಅಲ್ಲಿ ಮನೆ, ಅಪಾರ್ಟ್ಮೆಂಟ್ ಕಟ್ಟುವ ಮೂಲಕ ಹಾಳು ಮಾಡಿದ್ದಾರೆ. ಬೆಂಗಳೂರಿನಲ್ಲಿ ಇದ್ದ ನೂರಾರು ಕೆರೆಗಳು ಮಾಯಾವಾಗಿವೆ. ಬೆಂಗಳೂರು ದರೋಡೆ ಕೋರರ ಪಾಲಾಗಿದೆ ಎಂದು ಆರೋಪಿಸಿದ್ದಾರೆ.

‘ಬೆಂಗಳೂರನ್ನು ಉಳಿಸಬೇಕಾದ ಕರ್ತವ್ಯ ಕನ್ನಡಿಗರದ್ದು. ಕನ್ನಡಿಗರ ರಾಜಧಾನಿ ಕನ್ನಡಿಗರದ್ದ ಆಗಬೇಕು. ಮಳೆ ಬಂದು ಬೆಂಗಳೂರು ಮುಳುಗಿ ಹೋಗಿದೆ ಅಂದರೆ ಅದಕ್ಕೆ ಸರ್ಕಾರವೇ ಕಾರಣ. ಸರ್ಕಾರದ ಬೇಜವಾಬ್ದಾರಿಯಿಂದ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ ಎಂದು ವಾಗ್ದಾಳಿ ಮಾಡಿದರು.

ಬಿಬಿಎಂಪಿ, ಬಿಡಿಎ, ಬೆಸ್ಕಾಂ, BWSSB, ಕೇಂದ್ರ ಗಳು ಬೆಂಗಳೂರಿನ ಶತ್ರುಗಳು ಆಗಿದ್ದಾರೆ. ಪ್ರಮುಖವಾಗಿ ಐಟಿಬಿಟಿ. ಐಟಿಬಿಟಿಯರವರು ಬೆಂಗಳೂರಿನ ಜಾಗಾ ಸರಿಯಿಲ್ಲ ಎಂದು ಹೇಳಿದ್ದಾರೆ. ಅಷ್ಟಕ್ಕೂ ನಿಮ್ಮ ಕೊಡುಗೆ ಏನಿದೇ ಬೆಂಗಳೂರಿಗೆ. ಐಟಿಬಿಟಿ ಹೆಸರನ್ನು ಹೇಳಿಕೊಂಡು ಎಷ್ಟು ಕನ್ನಡಗರಿಗೆ ನೀವು ಉದ್ಯೋಗ ಕೊಟ್ಟಿರಿ ? ನೀವೇನು ಚಕ್ರವರ್ತಿಗಳ ಅಥವಾ ದೊರೆಗಳೇ ಬೆಂಗಳೂರು ಬಿಟ್ಟು ಹೋಗುತ್ತೇವೆ ಅಂದರೆ ಹೋಗಿ. ನಾಳೆ ಬೆಳಗ್ಗೆನೇ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರನ್ನು ಬಿಟ್ಟು ಹೋಗಿ. ಮೋಹನ್ ದಾಸ್ ಪೈ ಬೆಂಗಳೂರಿನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ