AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veeraloka Books release: ರವಿವಾರ ಉತ್ತರ ಕರ್ನಾಟಕದ ಹತ್ತು ಕೃತಿಗಳ ಲೋಕಾರ್ಪಣೆ: ಟಿವಿ9 ರವೀಂದ್ರ ಮುದ್ದಿ ಪುಸ್ತಕವೂ ಬಿಡುಗಡೆ

Raveendra Muddi varada teerada kathegalu: ವೀರಲೋಕ ಪ್ರಕಾಶನ ವತಿಯಿಂದ ನಡೆದಿರುವ ಉತ್ತರ ಪರ್ವ ಎಂಬ ವಿನೂತನ ಕಥಾ ಸುಗ್ಗಿಯಲ್ಲಿ ಆಯ್ಕೆ ಆದ ಉತ್ತರ ಕರ್ನಾಟಕದ 10 ಕೃತಿಗಳು ಭಾನುವಾರ (ಆ 4) ಚಾಮರಾಜಪೇಟೆಯಲ್ಲಿರುವ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಲೋಕಾರ್ಪಣೆಯಾಗಲಿವೆ. ಈ ಟಾಪ್ 10 ಕೃತಿಗಳಲ್ಲಿ ಟಿವಿ9 ಹಿರಿಯ ನಿರ್ಮಾಪಕ ರವೀಂದ್ರ ಮುದ್ದಿ ಅವರ “ವರದಾ ತೀರದ ಕತೆಗಳು” ಕೃತಿ ಕೂಡ ಬಿಡುಗಡೆ ಆಗಲಿದೆ.

Veeraloka Books release: ರವಿವಾರ ಉತ್ತರ ಕರ್ನಾಟಕದ ಹತ್ತು ಕೃತಿಗಳ ಲೋಕಾರ್ಪಣೆ: ಟಿವಿ9 ರವೀಂದ್ರ ಮುದ್ದಿ ಪುಸ್ತಕವೂ ಬಿಡುಗಡೆ
ಭಾನುವಾರ ಉತ್ತರ ಕರ್ನಾಟಕದ ಹತ್ತು ಕೃತಿಗಳ ಲೋಕಾರ್ಪಣೆ
ಆಯೇಷಾ ಬಾನು
|

Updated on: Aug 03, 2024 | 11:31 AM

Share

ಬೆಂಗಳೂರು, ಆಗಸ್ಟ್.03: ಬೆಂಗಳೂರಿನ ವೀರಲೋಕ ಪ್ರಕಾಶನವು (Veeraloka Books) ‘ಉತ್ತರ ಪರ್ವ’ ಎಂಬ ವಿನೂತನ ಕಥಾ ಸುಗ್ಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದರಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕ ಲೇಖಕರನ್ನೇ ಕೇಂದ್ರೀಕರಿಸಿ ಮೊದಲ ಹಂತದಲ್ಲಿ ಪ್ರಕಟಣೆಗೆ 10 ಲೇಖಕರ ಕೃತಿಗಳು ಆಯ್ಕೆಯಾಗಿದ್ದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ  ಕನ್ನಡ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.

ಉತ್ತರ ಪರ್ವ ಕಥಾ ಸುದ್ದಿಗೆ ನೂರಕ್ಕೂ ಹೆಚ್ಚು ಕೃತಿಗಳು ಆಯ್ಕೆಗಾಗಿ ಬಂದಿದ್ದವು. ಸಾಹಿತಿಗಳಾದ ರಾ.ಗಂ. ಅವರ ಸಂಪಾದಕತ್ವದಲ್ಲಿ ಮೂರು ಹಂತದ ಆಯ್ಕೆಯಲ್ಲಿ ಹತ್ತು ವಿಭಿನ್ನ ಕೃತಿಗಳನ್ನು ಆಯ್ಕೆ ಮಾಡಲಾಗಿದೆ.

  • ಶೇಕ್ಷಾವಲಿ ಮಣಿಗಾರ – ಆ ವದನ
  • ಮರ್ತುಜಾಬೇಗಂ ಕೊಡಗಲಿ – ಪರಸ್ಪರ ಮತ್ತಿತರ ಕೃತಿಗಳು
  • ಡಾ.ಸದಾಶಿವ ದೊಡಮನಿ – ಇರುಳ ಬಾಗಿಲಿಗೆ ಕಣ್ಣ ದೀಪ
  • ರವೀಂದ್ರ ಮುದ್ದಿ – ವರದಾ ತೀರದ ಕಥೆಗಳು
  • ಸಿ.ವಿ.ವೀರುಪಾಕ್ಷ – ಖದೀಜಾ
  • ಶ್ರೀಧರ ಗಸ್ತಿ – ಚಂದ್ರಾ ಲೇಔಟ್
  • ಪ್ರಕಾಶ ಗಿರಿಮಲ್ಲನವರ – ಜನನಾಯಕ
  • ಬಿಜೆ ಪಾರ್ವತಿ ವಿ. ಸೋನಾರೆ – ಓಡಿ ಹೋದಾಕಿ
  • ಕವಿತಾ ಹೆಗಡೆ ಅಭಯಂ – ಇತ್ತ ಹಾಯಲಿ ಚಿತ್ತ
  • ನವ್ಯ ಆರ್ ಕತ್ತಿ – ಮಾಯಾ ಗುಹೆಇದನ್ನೂ ಓದಿ: Veeraloka Books: ‘ಉತ್ತರ ಪರ್ವ’ದಲ್ಲಿ ಟಿವಿ9 ರವೀಂದ್ರ ಮುದ್ದಿ ಪುಸ್ತಕ ಟಾಪ್-10ಗೆ ಆಯ್ಕೆ

    ಆಯ್ಕೆಯಾದ ಈ ಎಲ್ಲ ಲೇಖಕರ ಕೃತಿಗಳು ನಾಳೆ ಅಂದರೆ ಆಗಸ್ಟ್ 04ರ ಭಾನುವಾರ ಬೆಳಗ್ಗೆ 10ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ  ಸಾಹಿತ್ಯ ಪರಿಷತ್ತು ಸಭಾ ಭವನದಲ್ಲಿ ಲೋಕಾರ್ಪಣೆ ಆಗಲಿವೆ. ಕೃತಿಕಾರರಿಗೆ ರಾಯಧನ ಮತ್ತು ಪುಸ್ತಕಗಳನ್ನು ನೀಡಿ ಗೌರವಿಸಲಾಗುವುದು. ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಬಿ.ಸುರೇಶ, ರಾ.ಗಂ, ಕರ್ಕಿ ಕೃಷ್ಣಮೂರ್ತಿ, ಮಧು ವೈ.ಎನ್, ಪ್ರಕಾಶಕ ವೀರಕಪುತ್ರ ಶ್ರೀನಿವಾಸ ಅವರುಗಳು ಉಪಸ್ಥಿತರಿರುತ್ತಾರೆ ಎಂದು ವ್ಯವಸ್ಥಾಪಕರಾದ ಅನಂತ ಕುಣಿಗಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    veeraloka books uttara parva 10 book releasing on sunday august 04th tv9 senior producer ravindra muddi varada teerada kathegalu

    ರವಿ ಮುದ್ದಿ

    ಟಿವಿ9 ಹಿರಿಯ ನಿರ್ಮಾಪಕ ರವೀಂದ್ರ ಮುದ್ದಿ ಪುಸ್ತಕವೂ ಬಿಡುಗಡೆ:

    “ಉತ್ತರ ಪರ್ವ” ಯೋಜನೆಗೆ ಬಂದಿದ್ದ ನೂರಾರು ಕೃತಿಗಳಲ್ಲಿ ಪ್ರಕಟಣೆಗೆ ಆಯ್ಕೆಯಾದ ಟಾಪ್ ಹತ್ತು ಕೃತಿಗಳಲ್ಲಿ ಪತ್ರಕರ್ತ ರವೀಂದ್ರ ಮುದ್ದಿ ಅವರ “ವರದಾ ತೀರದ ಕತೆಗಳು” ಕೃತಿ ಕೂಡ ಭಾನುವಾರ ಬಿಡುಗಡೆ ಆಗಲಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ