AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veeraloka Books release: ರವಿವಾರ ಉತ್ತರ ಕರ್ನಾಟಕದ ಹತ್ತು ಕೃತಿಗಳ ಲೋಕಾರ್ಪಣೆ: ಟಿವಿ9 ರವೀಂದ್ರ ಮುದ್ದಿ ಪುಸ್ತಕವೂ ಬಿಡುಗಡೆ

Raveendra Muddi varada teerada kathegalu: ವೀರಲೋಕ ಪ್ರಕಾಶನ ವತಿಯಿಂದ ನಡೆದಿರುವ ಉತ್ತರ ಪರ್ವ ಎಂಬ ವಿನೂತನ ಕಥಾ ಸುಗ್ಗಿಯಲ್ಲಿ ಆಯ್ಕೆ ಆದ ಉತ್ತರ ಕರ್ನಾಟಕದ 10 ಕೃತಿಗಳು ಭಾನುವಾರ (ಆ 4) ಚಾಮರಾಜಪೇಟೆಯಲ್ಲಿರುವ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಲೋಕಾರ್ಪಣೆಯಾಗಲಿವೆ. ಈ ಟಾಪ್ 10 ಕೃತಿಗಳಲ್ಲಿ ಟಿವಿ9 ಹಿರಿಯ ನಿರ್ಮಾಪಕ ರವೀಂದ್ರ ಮುದ್ದಿ ಅವರ “ವರದಾ ತೀರದ ಕತೆಗಳು” ಕೃತಿ ಕೂಡ ಬಿಡುಗಡೆ ಆಗಲಿದೆ.

Veeraloka Books release: ರವಿವಾರ ಉತ್ತರ ಕರ್ನಾಟಕದ ಹತ್ತು ಕೃತಿಗಳ ಲೋಕಾರ್ಪಣೆ: ಟಿವಿ9 ರವೀಂದ್ರ ಮುದ್ದಿ ಪುಸ್ತಕವೂ ಬಿಡುಗಡೆ
ಭಾನುವಾರ ಉತ್ತರ ಕರ್ನಾಟಕದ ಹತ್ತು ಕೃತಿಗಳ ಲೋಕಾರ್ಪಣೆ
ಆಯೇಷಾ ಬಾನು
|

Updated on: Aug 03, 2024 | 11:31 AM

Share

ಬೆಂಗಳೂರು, ಆಗಸ್ಟ್.03: ಬೆಂಗಳೂರಿನ ವೀರಲೋಕ ಪ್ರಕಾಶನವು (Veeraloka Books) ‘ಉತ್ತರ ಪರ್ವ’ ಎಂಬ ವಿನೂತನ ಕಥಾ ಸುಗ್ಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದರಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕ ಲೇಖಕರನ್ನೇ ಕೇಂದ್ರೀಕರಿಸಿ ಮೊದಲ ಹಂತದಲ್ಲಿ ಪ್ರಕಟಣೆಗೆ 10 ಲೇಖಕರ ಕೃತಿಗಳು ಆಯ್ಕೆಯಾಗಿದ್ದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ  ಕನ್ನಡ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.

ಉತ್ತರ ಪರ್ವ ಕಥಾ ಸುದ್ದಿಗೆ ನೂರಕ್ಕೂ ಹೆಚ್ಚು ಕೃತಿಗಳು ಆಯ್ಕೆಗಾಗಿ ಬಂದಿದ್ದವು. ಸಾಹಿತಿಗಳಾದ ರಾ.ಗಂ. ಅವರ ಸಂಪಾದಕತ್ವದಲ್ಲಿ ಮೂರು ಹಂತದ ಆಯ್ಕೆಯಲ್ಲಿ ಹತ್ತು ವಿಭಿನ್ನ ಕೃತಿಗಳನ್ನು ಆಯ್ಕೆ ಮಾಡಲಾಗಿದೆ.

  • ಶೇಕ್ಷಾವಲಿ ಮಣಿಗಾರ – ಆ ವದನ
  • ಮರ್ತುಜಾಬೇಗಂ ಕೊಡಗಲಿ – ಪರಸ್ಪರ ಮತ್ತಿತರ ಕೃತಿಗಳು
  • ಡಾ.ಸದಾಶಿವ ದೊಡಮನಿ – ಇರುಳ ಬಾಗಿಲಿಗೆ ಕಣ್ಣ ದೀಪ
  • ರವೀಂದ್ರ ಮುದ್ದಿ – ವರದಾ ತೀರದ ಕಥೆಗಳು
  • ಸಿ.ವಿ.ವೀರುಪಾಕ್ಷ – ಖದೀಜಾ
  • ಶ್ರೀಧರ ಗಸ್ತಿ – ಚಂದ್ರಾ ಲೇಔಟ್
  • ಪ್ರಕಾಶ ಗಿರಿಮಲ್ಲನವರ – ಜನನಾಯಕ
  • ಬಿಜೆ ಪಾರ್ವತಿ ವಿ. ಸೋನಾರೆ – ಓಡಿ ಹೋದಾಕಿ
  • ಕವಿತಾ ಹೆಗಡೆ ಅಭಯಂ – ಇತ್ತ ಹಾಯಲಿ ಚಿತ್ತ
  • ನವ್ಯ ಆರ್ ಕತ್ತಿ – ಮಾಯಾ ಗುಹೆಇದನ್ನೂ ಓದಿ: Veeraloka Books: ‘ಉತ್ತರ ಪರ್ವ’ದಲ್ಲಿ ಟಿವಿ9 ರವೀಂದ್ರ ಮುದ್ದಿ ಪುಸ್ತಕ ಟಾಪ್-10ಗೆ ಆಯ್ಕೆ

    ಆಯ್ಕೆಯಾದ ಈ ಎಲ್ಲ ಲೇಖಕರ ಕೃತಿಗಳು ನಾಳೆ ಅಂದರೆ ಆಗಸ್ಟ್ 04ರ ಭಾನುವಾರ ಬೆಳಗ್ಗೆ 10ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ  ಸಾಹಿತ್ಯ ಪರಿಷತ್ತು ಸಭಾ ಭವನದಲ್ಲಿ ಲೋಕಾರ್ಪಣೆ ಆಗಲಿವೆ. ಕೃತಿಕಾರರಿಗೆ ರಾಯಧನ ಮತ್ತು ಪುಸ್ತಕಗಳನ್ನು ನೀಡಿ ಗೌರವಿಸಲಾಗುವುದು. ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಬಿ.ಸುರೇಶ, ರಾ.ಗಂ, ಕರ್ಕಿ ಕೃಷ್ಣಮೂರ್ತಿ, ಮಧು ವೈ.ಎನ್, ಪ್ರಕಾಶಕ ವೀರಕಪುತ್ರ ಶ್ರೀನಿವಾಸ ಅವರುಗಳು ಉಪಸ್ಥಿತರಿರುತ್ತಾರೆ ಎಂದು ವ್ಯವಸ್ಥಾಪಕರಾದ ಅನಂತ ಕುಣಿಗಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    veeraloka books uttara parva 10 book releasing on sunday august 04th tv9 senior producer ravindra muddi varada teerada kathegalu

    ರವಿ ಮುದ್ದಿ

    ಟಿವಿ9 ಹಿರಿಯ ನಿರ್ಮಾಪಕ ರವೀಂದ್ರ ಮುದ್ದಿ ಪುಸ್ತಕವೂ ಬಿಡುಗಡೆ:

    “ಉತ್ತರ ಪರ್ವ” ಯೋಜನೆಗೆ ಬಂದಿದ್ದ ನೂರಾರು ಕೃತಿಗಳಲ್ಲಿ ಪ್ರಕಟಣೆಗೆ ಆಯ್ಕೆಯಾದ ಟಾಪ್ ಹತ್ತು ಕೃತಿಗಳಲ್ಲಿ ಪತ್ರಕರ್ತ ರವೀಂದ್ರ ಮುದ್ದಿ ಅವರ “ವರದಾ ತೀರದ ಕತೆಗಳು” ಕೃತಿ ಕೂಡ ಭಾನುವಾರ ಬಿಡುಗಡೆ ಆಗಲಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್