AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವೀರಲೋಕದಿಂದ ನ. 15ರಿಂದ 17ರವರೆಗೆ ಪುಸ್ತಕ ಸಂತೆ

ಪುಸ್ತಕ ಸಂತೆಗೆ ವೀರಲೋಕದ ಜೊತೆಗೆ ಹಲವು ಸಂಸ್ಥೆಗಳು ಕೈಜೋಡಿಸಿವೆ. ನೂರಾರು ಪ್ರಕಾಶಕರು ಇಲ್ಲಿ ಸ್ಟಾಲ್‌ಗಳನ್ನು ಹಾಕುತ್ತಿದ್ದಾರೆ. ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್ ಪುಸ್ತಕ ಸಂತೆಯಲ್ಲಿ ಪಾಲ್ಗೊಳ್ಳುತ್ತಿದೆ. ಜೊತೆಗೆ ಕನ್ನಡ ನಾಡಿನ ಅಷ್ಟೂ ಸರ್ಕಾರಿ ನೌಕರರ ಸಂಘ ಸಂಸ್ಥೆಗಳನ್ನೂ ಭಾಗವಹಿಸುವಂತೆ ಕೋರಲಾಗಿದೆ.

ಬೆಂಗಳೂರಿನಲ್ಲಿ ವೀರಲೋಕದಿಂದ ನ. 15ರಿಂದ 17ರವರೆಗೆ ಪುಸ್ತಕ ಸಂತೆ
ಪುಸ್ತಕ ಸಂತೆ
ಸುಷ್ಮಾ ಚಕ್ರೆ
|

Updated on:Nov 13, 2024 | 2:14 PM

Share

ಬೆಂಗಳೂರು: ಕನ್ನಡದ ಪ್ರಮುಖ ಪ್ರಕಾಶನವಾದ ʼವೀರಲೋಕʼದ ವತಿಯಿಂದ ಎರಡನೇ ವರ್ಷದ ʼಪುಸ್ತಕ ಸಂತೆʼ ನವೆಂಬರ್‌ 15, 16 ಹಾಗೂ 17ರಂದು ಬೆಂಗಳೂರಿನ ಜಯನಗರದ ಶಾಲಿನಿ ಮೈದಾನದಲ್ಲಿ ನಡೆಯಲಿದೆ. ನೂರಾರು ಲೇಖಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ಹತ್ತಾರು ಕೃತಿಗಳು ಬಿಡುಗಡೆಗೊಳ್ಳಲಿವೆ ಎಂದು ವೀರಲೋಕದ ರೂವಾರಿ ವೀರಕಪುತ್ರ ಶ್ರೀನಿವಾಸ್‌ ತಿಳಿಸಿದ್ದಾರೆ.

ಕನ್ನಡ ಪುಸ್ತಕಗಳು ಎಲ್ಲೆಂದರಲ್ಲಿ ಸಿಗಬೇಕು, ಕನ್ನಡಿಗರು ಇರುವ ಕಡೆಯೇ ಪುಸ್ತಕಗಳು ಸಿಗಬೇಕು. ಕನ್ನಡ ಪುಸ್ತಕಗಳು ಕನ್ನಡಿಗರ ಬದುಕಿನ ಭಾಗವಾಗಬೇಕು ಎಂಬ ಆಶಯಗಳೊಂದಿಗೆ ವೀರಲೋಕ ಹಲವು ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅಂಥದ್ದೇ ಒಂದು ಪ್ರಯತ್ನ ಪುಸ್ತಕ ಸಂತೆ. ಕಳೆದ ವರ್ಷ ನಡೆದ ಪುಸ್ತಕ ಸಂತೆಯ ಮೊದಲ ಆವೃತ್ತಿ ಭಾರೀ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ವರ್ಷವೂ ಪ್ರಕಾಶಕರು, ಲೇಖಕರು ಹಾಗೂ ಓದುಗರನ್ನು ಒಟ್ಟುಗೂಡಿಸುವ ಹಬ್ಬಕ್ಕೆ ವೀರಲೋಕ ಮುಂದಾಗಿದೆ.

ಇದನ್ನೂ ಓದಿ: ಈ ಐಪಿಎಸ್ ಅಧಿಕಾರಿ ಬಳಿ ಇವೆ 15 ಸಾವಿರಕ್ಕೂ ಹೆಚ್ಚು ಕಾಮಿಕ್ಸ್‌ ಪುಸ್ತಕಗಳು

ಪುಸ್ತಕ ಸಂತೆಗೆ ವೀರಲೋಕದ ಜೊತೆಗೆ ಹಲವು ಸಂಸ್ಥೆಗಳು ಕೈಜೋಡಿಸಿವೆ. ನೂರಾರು ಪ್ರಕಾಶಕರು ಇಲ್ಲಿ ಸ್ಟಾಲ್‌ಗಳನ್ನು ಹಾಕುತ್ತಿದ್ದಾರೆ. ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್ ಪುಸ್ತಕ ಸಂತೆಯಲ್ಲಿ ಪಾಲ್ಗೊಳ್ಳುತ್ತಿದೆ. ಜೊತೆಗೆ ಕನ್ನಡ ನಾಡಿನ ಅಷ್ಟೂ ಸರ್ಕಾರಿ ನೌಕರರ ಸಂಘ ಸಂಸ್ಥೆಗಳನ್ನೂ ಭಾಗವಹಿಸುವಂತೆ ಕೋರಲಾಗಿದೆ. ಓದುಗರು ಹಾಗೂ ಲೇಖಕರು ಮುಖಾಮುಖಿಯಾಗಿಸುವುದು ಈ ಪ್ರಯೋಗದ ಉದ್ದೇಶ.

ತನ್ನ ಮೆಚ್ಚಿನ ಲೇಖಕರನ್ನು ಕಾಣುವ ಆಸೆ ಓದುಗರಿಗಿರಬಹುದು, ತಮ್ಮ ಅನಾಮಿಕ ಓದುಗರನ್ನು ಭೇಟಿಯಾಗುವ ಆಸೆ ಸಾಹಿತಿಗಳಿಗೂ ಇರಬಹುದು. ಆ ಇಬ್ಬರ ಮುಖಾಮುಖಿಗೆ ಈ ಸಂತೆ ವೇದಿಕೆಯಾಗುತ್ತಿದೆ. ಇಂತಹ ಪ್ರಯೋಗಕ್ಕೆ ತುಂಬು ಪ್ರೀತಿಯಿಂದ ಒಪ್ಪಿಗೆ ನೀಡಿದ ಎಲ್ಲಾ ಸಾಹಿತಿಗಳಿಗೆ ವೀರಲೋಕ ಮನದಾಳದ ಧನ್ಯವಾದಗಳನ್ನು ತಿಳಿಸಲಿಚ್ಚಿಸುತ್ತೇನೆ ಎಂದು ವೀರಕಪುತ್ರ ಶ್ರೀನಿವಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲೂ ತಲೆ ಎತ್ತಲಿದೆ ಟ್ರಂಪ್ ಟವರ್; ಅಮೆರಿಕ ಬಿಟ್ಟರೆ ಭಾರತದಲ್ಲೇ ಹೆಚ್ಚು

ಈ ಪುಸ್ತಕ ಸಂತೆ ಧೂಳು ಮುಕ್ತವಾಗಿರುತ್ತೆ ಎಂಬ ಖಾತ್ರಿ ವೀರಲೋಕದ್ದು. ಸುಮಾರು 20 ಸಾವಿರ ಅಡಿಯಷ್ಟು ಸ್ಥಳಕ್ಕೆ ಒಂದು ಅಡಿಯಷ್ಟು ಎತ್ತರದ ಪ್ಲಾಟ್ ಫಾರ್ಮ್ ಹಾಕಿ, ಅದರ ಮೇಲೆ ರತ್ನಗಂಬಳಿ ಹೊದಿಸಿ, ತಲೆ ಮೇಲೆ ಜರ್ಮನ್ ಟೆಂಟ್ ಹಾಕಿಸಿ, ಜಗಮಗ ಅನ್ನೋ ದೀಪಗಳನ್ನು ಬೆಳಗಿಸಿ ಲೇಖಕ ಓದುಗರನ್ನು ಸ್ವಾಗತಿಸಲು ಕಾಯುತ್ತಿದ್ದೇವೆ ಎಂದು ವೀರಕಪುತ್ರ ಶ್ರೀನಿವಾಸ್‌ ಅವರು ತಿಳಿಸಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Tue, 12 November 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ