AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿದೆ ನಿರಂತರ ಮಳೆ: ಗಗನಕ್ಕೇರಿದೆ ತರಕಾರಿ ಬೆಲೆ

ದುಡ್ಡು ಕೊಟ್ಟರೂ ಒಳ್ಳೆಯ ಮಾಲು ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸುರಿಯುತ್ತಿದೆ ನಿರಂತರ ಮಳೆ: ಗಗನಕ್ಕೇರಿದೆ ತರಕಾರಿ ಬೆಲೆ
ಬೆಂಗಳೂರು ತರಕಾರಿ ಮಾರುಕಟ್ಟೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 12, 2021 | 4:07 PM

Share

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ (Clyclone) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡೂ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ತರಕಾರಿ ಧಾರಣೆಗಳು ಗಗನಮುಖಿಯಾಗಿವೆ. ಮಾರುಕಟ್ಟೆಗೆ ಬರುತ್ತಿದ್ದ ತರಕಾರಿಗಳ ಪ್ರಮಾಣವೂ ಕಡಿಮೆಯಾಗಿದೆ. ನಗರಕ್ಕೆ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಬರುತ್ತದೆ. ಈ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿದ ಕಾರನ ತರಕಾರಿಗಳು ಹೊಲಗಳಲ್ಲೇ ನಾಶವಾಗಿವೆ. ದುಡ್ಡು ಕೊಟ್ಟರೂ ಒಳ್ಳೆಯ ಮಾಲು ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದರೆ, ಕಷ್ಟಪಟ್ಟು ದುಡಿದು ಬೆಳೆದ ಬೆಳೆ ಇನ್ನೇನು ಮಾರುಕಟ್ಟೆಗೆ ಸಾಗಿಸಬೇಕು ಎನ್ನುವ ಹೊತ್ತಿಗೆ ಹಾಳಾಗಿದೆ ಎಂದು ರೈತರು ಅಲವತ್ತುಕೊಳ್ಳುತ್ತಿದ್ದಾರೆ.

ಬಹುತೇಕ ತರಕಾರಿಗಳ ಧಾರಣೆ ₹15ರಿಂದ 20 ಹೆಚ್ಚಾಗಿದೆ. ಬೆಂಡೆಕಾಯಿ ₹ 40ರಿಂದ ₹ 70ಕ್ಕೆ, ಬಟಾಣಿ ₹ 200ರಿಂದ ₹ 280ಕ್ಕೆ, ಮೂಲಂಗಿ ₹ 20ರಿಂದ ₹ 40ಕ್ಕೆ, ಕ್ಯಾರೆಟ್ ₹ 70ರಿಂದ 90ಕ್ಕೆ, ಈರುಳ್ಳಿ ₹ 30ರಿಂದ ₹ 60ಕ್ಕೆ, ಟೊಮೆಟೊ ₹40ರಿಂದ ₹ 70ಕ್ಕೆ, ಆಲೂಗಡ್ಡೆ ₹ 20ರಿಂದ ₹ 40ಕ್ಕೆ, ನವಿಲು ಕೋಸು ₹ 40ರಿಂದ ₹ 120ಕ್ಕೆ, ಹುರುಳಿಕಾಯಿ ₹ 50ರಿಂದ ₹ 70ಕ್ಕೆ, ಕ್ಯಾಪ್ಸಿಕಂ ₹ 50 ರಿಂದ ₹ 80ಕ್ಕೆ ಹೆಚ್ಚಾಗಿದೆ.

ಅಕ್ಕಪಕ್ಕದ ರಾಜ್ಯಗಳಿಗೂ ಬೆಂಗಳೂರು ಮಾರುಕಟ್ಟೆಯಿಂದ ತರಕಾರಿ ಕಳಿಸಲಾಗುತ್ತಿತ್ತು. ಆದರೆ ಇದೀಗ ಬೆಂಗಳೂರಿಗೆ ಬರುವ ತರಕಾರಿ ಪ್ರಮಾಣ ಕಡಿಮೆಯಾಗಿರುವ ಕಾರಣ ಇತರ ರಾಜ್ಯಗಳಿಗೆ ಕಳಿಸಲು ಅಗುತ್ತಿಲ್ಲ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ. ಮಳೆ ಇದೇ ರೀತಿ ಮುಂದುವರಿದರೆ ಹಣ ಕೊಡುತ್ತೇವೆ ಎಂದರೂ ತರಕಾರಿ ಸಿಗದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Crime News: ತರಕಾರಿ ಅಂಗಡಿಯಲ್ಲಿ ಹಣ ಎಗರಿಸಲು ಯತ್ನ; ಕಳ್ಳನನ್ನು ಹಿಡಿದು ಥಳಿಸಿದ ಅಂಗಡಿ ಮಾಲೀಕ ಇದನ್ನೂ ಓದಿ: ನೀವು ಕಾಂತಿಯುತ ತ್ವಚೆ ಪಡೆಯಲು ಯಾವ ಯಾವ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಬೇಕು ಗೊತ್ತೇ?

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ