AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿದೆ ನಿರಂತರ ಮಳೆ: ಗಗನಕ್ಕೇರಿದೆ ತರಕಾರಿ ಬೆಲೆ

ದುಡ್ಡು ಕೊಟ್ಟರೂ ಒಳ್ಳೆಯ ಮಾಲು ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸುರಿಯುತ್ತಿದೆ ನಿರಂತರ ಮಳೆ: ಗಗನಕ್ಕೇರಿದೆ ತರಕಾರಿ ಬೆಲೆ
ಬೆಂಗಳೂರು ತರಕಾರಿ ಮಾರುಕಟ್ಟೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 12, 2021 | 4:07 PM

Share

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ (Clyclone) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡೂ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ತರಕಾರಿ ಧಾರಣೆಗಳು ಗಗನಮುಖಿಯಾಗಿವೆ. ಮಾರುಕಟ್ಟೆಗೆ ಬರುತ್ತಿದ್ದ ತರಕಾರಿಗಳ ಪ್ರಮಾಣವೂ ಕಡಿಮೆಯಾಗಿದೆ. ನಗರಕ್ಕೆ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಬರುತ್ತದೆ. ಈ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿದ ಕಾರನ ತರಕಾರಿಗಳು ಹೊಲಗಳಲ್ಲೇ ನಾಶವಾಗಿವೆ. ದುಡ್ಡು ಕೊಟ್ಟರೂ ಒಳ್ಳೆಯ ಮಾಲು ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದರೆ, ಕಷ್ಟಪಟ್ಟು ದುಡಿದು ಬೆಳೆದ ಬೆಳೆ ಇನ್ನೇನು ಮಾರುಕಟ್ಟೆಗೆ ಸಾಗಿಸಬೇಕು ಎನ್ನುವ ಹೊತ್ತಿಗೆ ಹಾಳಾಗಿದೆ ಎಂದು ರೈತರು ಅಲವತ್ತುಕೊಳ್ಳುತ್ತಿದ್ದಾರೆ.

ಬಹುತೇಕ ತರಕಾರಿಗಳ ಧಾರಣೆ ₹15ರಿಂದ 20 ಹೆಚ್ಚಾಗಿದೆ. ಬೆಂಡೆಕಾಯಿ ₹ 40ರಿಂದ ₹ 70ಕ್ಕೆ, ಬಟಾಣಿ ₹ 200ರಿಂದ ₹ 280ಕ್ಕೆ, ಮೂಲಂಗಿ ₹ 20ರಿಂದ ₹ 40ಕ್ಕೆ, ಕ್ಯಾರೆಟ್ ₹ 70ರಿಂದ 90ಕ್ಕೆ, ಈರುಳ್ಳಿ ₹ 30ರಿಂದ ₹ 60ಕ್ಕೆ, ಟೊಮೆಟೊ ₹40ರಿಂದ ₹ 70ಕ್ಕೆ, ಆಲೂಗಡ್ಡೆ ₹ 20ರಿಂದ ₹ 40ಕ್ಕೆ, ನವಿಲು ಕೋಸು ₹ 40ರಿಂದ ₹ 120ಕ್ಕೆ, ಹುರುಳಿಕಾಯಿ ₹ 50ರಿಂದ ₹ 70ಕ್ಕೆ, ಕ್ಯಾಪ್ಸಿಕಂ ₹ 50 ರಿಂದ ₹ 80ಕ್ಕೆ ಹೆಚ್ಚಾಗಿದೆ.

ಅಕ್ಕಪಕ್ಕದ ರಾಜ್ಯಗಳಿಗೂ ಬೆಂಗಳೂರು ಮಾರುಕಟ್ಟೆಯಿಂದ ತರಕಾರಿ ಕಳಿಸಲಾಗುತ್ತಿತ್ತು. ಆದರೆ ಇದೀಗ ಬೆಂಗಳೂರಿಗೆ ಬರುವ ತರಕಾರಿ ಪ್ರಮಾಣ ಕಡಿಮೆಯಾಗಿರುವ ಕಾರಣ ಇತರ ರಾಜ್ಯಗಳಿಗೆ ಕಳಿಸಲು ಅಗುತ್ತಿಲ್ಲ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ. ಮಳೆ ಇದೇ ರೀತಿ ಮುಂದುವರಿದರೆ ಹಣ ಕೊಡುತ್ತೇವೆ ಎಂದರೂ ತರಕಾರಿ ಸಿಗದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Crime News: ತರಕಾರಿ ಅಂಗಡಿಯಲ್ಲಿ ಹಣ ಎಗರಿಸಲು ಯತ್ನ; ಕಳ್ಳನನ್ನು ಹಿಡಿದು ಥಳಿಸಿದ ಅಂಗಡಿ ಮಾಲೀಕ ಇದನ್ನೂ ಓದಿ: ನೀವು ಕಾಂತಿಯುತ ತ್ವಚೆ ಪಡೆಯಲು ಯಾವ ಯಾವ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಬೇಕು ಗೊತ್ತೇ?

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ