AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price Hike: ಬೆಂಗಳೂರಿನಲ್ಲಿ ಸೊಪ್ಪು, ತರಕಾರಿ ಬೆಲೆ ಏರಿಕೆ; ಗ್ರಾಹಕರು ಶಾಕ್

ಬೀನ್ಸ್, ನುಗ್ಗೆಕಾಯಿ, ಬದನೆಕಾಯಿ, ಕ್ಯಾರೆಟ್​ ಸೇರಿದಂತೆ ಹಲವು ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಯಾವ ತರಕಾರಿ ಕೇಳಿದ್ರೂ ಎಲ್ಲವೂ 50 ರಿಂದ 100ರೂಪಾಯಿ ಮುಟ್ಟಿದೆ.

Vegetable Price Hike: ಬೆಂಗಳೂರಿನಲ್ಲಿ ಸೊಪ್ಪು, ತರಕಾರಿ ಬೆಲೆ ಏರಿಕೆ; ಗ್ರಾಹಕರು ಶಾಕ್
ತರಕಾರಿ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Jun 14, 2023 | 7:21 AM

Share

ಬೆಂಗಳೂರು: ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಏರಿಕೆ ಕಂಡಿದೆ(Vegetable Price Hike). ಬೀನ್ಸ್‌ ಶತಕ ಬಾರಿಸಿದೆ. ನುಗ್ಗೆಕಾಯಿಗೆ ಪೆಟ್ರೋಲ್‌ ರೇಟ್‌(Petrol Rate) ಬಂದಿದೆ. ಬದನೆಕಾಯಿ ಶತಕದ ಬಳಿ ಬಂದು ನಿಂತಿದೆ. ಅಷ್ಟೇ ಅಲ್ಲ ಸೊಪ್ಪು ತರಕಾರಿ ಬೆಲೆಗಳು ಕೂಡಾ ಗಗನ ಮುಟ್ಟಿವೆ. ಅಷ್ಟಕ್ಕೂ ಮಳೆ ತರಕಾರಿ ತರಲು ಮಾರ್ಕೆಟ್‌ಗೆ ಹೋಗಿದ್ದ ಬೆಂಗಳೂರು ಮಂದಿ ಶಾಕ್ ಆಗಿದ್ದಾರೆ.

ತರಕಾರಿಗಳ ತರಹೇವಾರಿ ರೇಟ್‌ಕೇಳಿ ಮಹಿಳೆಯರು ಶಾಕ್‌

ಮಾರ್ಕೆಟ್​​​ಗೆ ಎಂಟ್ರಿ ಕೊಟ್ರೆ ಎದೆ ಬಡಿತ ಹೆಚ್ಚಾಗುತ್ತೆ. ಬೀನ್ಸ್, ನುಗ್ಗೆಕಾಯಿ, ಬದನೆಕಾಯಿ, ಕ್ಯಾರೆಟ್​ ಸೇರಿದಂತೆ ಹಲವು ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಯಾವ ತರಕಾರಿ ಕೇಳಿದ್ರೂ ಎಲ್ಲವೂ 50 ರಿಂದ 100ರೂಪಾಯಿ ಮುಟ್ಟಿದೆ. ಕೇವಲ ಈರುಳ್ಳಿ ಮಾತ್ರ ಕೈಗೆಟುಕುತ್ತಿದೆ. ತರಕಾರಿಗಳ ಬೆಲೆ ಗಗನಕ್ಕೇರಲು ಕಾರಣವೇ ಮಳೆ ಅಬ್ಬರ. ಕೆಲ ದಿನಗಳ ಹಿಂದೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತ ಸುರಿದ ಮಳೆಯಿಂದ ತರಕಾರಿ ಬೆಳೆಗಳಿಗೆ ಹಾನಿಯಾಗಿತ್ತು. ಹೀಗಾಗಿ ಇಳುವರಿ ಕಡಿಮೆಯಾಗಿದ್ದು ರಾಜಧಾನಿಗೆ ಪೂರೈಕೆಯಾಗುವ ತರಕಾರಿಗಳ ಬೆಲೆ ಹೆಚ್ಚಾಗಿವೆ. ಕಲಾಸಿಪಾಳ್ಯ, ಕೆ.ಆರ್‌.ಮಾರುಕಟ್ಟೆ ಅಷ್ಟೇ ಅಲ್ಲ, ಹಾಪ್‌ ಕಾಮ್ಸ್‌ನಲ್ಲೂ ಕೆಲ ತರಕಾರಿಗಳ ಬೆಲೆ ನೂರರ ಗಡಿ ದಾಟಿದೆ.

ಇದನ್ನೂ ಓದಿ: ಬೆಂಗಳೂರು ಮತ್ತು ಮೈಸೂರಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ ರೈತ, ಎತ್ತು ಸಾವು

ಗಗನ ಮುಟ್ಟಿದ ತರಕಾರಿ ರೇಟ್‌

ಒಂದು ಕೆಜಿ ಬೀನ್ಸ್‌ ಹಿಂದೆ 40 ರಿಂದ 50 ರೂಪಾಯಿಗೆ ಸಿಗ್ತಿತ್ತು. ಸದ್ಯ 100 ರ ಗಡಿದಾಟಿದೆ. ಅದ್ರಂತೆ 30 ರೂಪಾಯಿಗೆ ಸಿಗ್ತಿದ್ದ ಮೈಸೂರು ಬದನೆ ಈಗ 60 ರಿಂದ 80 ರೂಪಾಯಿ ಆಗಿದೆ. ಕ್ಯಾರೆಟ್‌ 30 ರಿಂದ 60 ಕ್ಕೆ ಜಿಗಿದಿದೆ. ನುಗ್ಗಿಕಾಯಿಯಂತೂ 40 ರೂಪಾಯಿ ಇದ್ದಿದ್ದು 100 ರೂಪಾಯಿ ತಲುಪಿದೆ. ತರಕಾರಿ ಮಾತ್ರವಲ್ಲ ಕೊತ್ತಂಬರಿ, ಮೆಂತ್ಯೆ, ಪಾಲಕ್‌ ಸೇರಿದಂತೆ ಸೊಪ್ಪಿನ ದರಗಳು ಕೂಡಾ ಹೆಚ್ಚಾಗಿವೆ. ಒಟ್ನಲ್ಲಿ ಕಳೆದ ವಾರಕ್ಕೆ ಹೋಲಿಸಿದ್ರೆ, ಈ ವಾರ ಶೇಕಡಾ 10 ರಿಂದ 25 ರಷ್ಟು ತರಕಾರಿಗಳ ದರ ದುಪ್ಪಟ್ಟು ಆಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್