AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್; ರಾಜಕಾಲುವೆ ನೀರಲ್ಲಿ ಬೆಳೆಯಲಾಗುತ್ತಿದೆ ಸೊಪ್ಪು, ತರಕಾರಿ

ರಾಜಕಾಲುವೆ ನೀರಿನಿಂದ ಬೆಳೆದ ಸೊಪ್ಪು, ತರಕಾರಿಯನ್ನು ಬೆಂಗಳೂರಿನ ಸುತ್ತಮುತ್ತದ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು ಇದು ಜನರ ಆರೋಗ್ಯದ ಮೇಲೆ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ. ಮಾರಾಟಗಾರರು ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡ್ತಿದ್ದಾರೆ ಎಂದು ಕೆಲ ಸ್ಥಳಿಯರು ಆಕ್ರೋಶ ಹೊರ ಹಾಕಿದ್ದಾರೆ.

ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್; ರಾಜಕಾಲುವೆ ನೀರಲ್ಲಿ ಬೆಳೆಯಲಾಗುತ್ತಿದೆ ಸೊಪ್ಪು, ತರಕಾರಿ
ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್
ಶಾಂತಮೂರ್ತಿ
| Edited By: |

Updated on: Aug 24, 2024 | 10:15 AM

Share

ಬೆಂಗಳೂರು, ಆಗಸ್ಟ್​.24: ಸಿಲಿಕಾನ್ ಸಿಟಿ ಬೆಂಗಳೂರಿನ ಡಿ.ಚನ್ನಸಂದ್ರ ಸುತ್ತಮುತ್ತ ಹತ್ತಾರು ಎಕರೆಯಲ್ಲಿ ರಾಜಕಾಲುವೆ ನೀರನ್ನು ಬಳಸಿ ಸೊಪ್ಪು (Vegetables) ಬೆಳೆದು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್. ರಾಜಕಾಲುವೆ ನೀರಿನಿಂದ ಬೆಳೆದ ಸೊಪ್ಪು, ತರಕಾರಿಯನ್ನು ಬೆಂಗಳೂರಿನ (Bengaluru) ಸುತ್ತಮುತ್ತದ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು ಇದು ಜನರ ಆರೋಗ್ಯದ ಮೇಲೆ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಗಬ್ಬೆದ್ದು ನಾರುತ್ತಿರುವ ರಾಜಕಾಲುವೆ ನೀರಿಗೆ ಅನಧಿಕೃತವಾಗಿ ನೂರಾರು ಮೋಟಾರ್ ಅಳವಡಿಕೆ ಮಾಡಿ ಹತ್ತಾರು ಎಕರೆಗಳಲ್ಲಿ ಸೊಪ್ಪು, ತರಕಾರಿ ಬೆಳೆಯಲಾಗುತ್ತಿದೆ. ಬೆಂಗಳೂರಿನ ಬಹುತೇಕ ಮಾರ್ಕೆಟ್​ಗಳಿಗೆ ಇದೇ ಸೊಪ್ಪು ಸಫ್ಲೆ ಮಾಡಲಾಗುತ್ತಿದೆ. ಅಕ್ಕಪಕ್ಕದ ಇಂಡಸ್ಟ್ರೀಗಳ ಕೆಮಿಕಲ್ ಮಿಶ್ರಿತ ನೀರು ಕೂಡ ಇದೇ ಕಾಲುವೆಗೆ ಸೇರ್ಪಡೆಯಾಗುತ್ತಿದೆ. ಹೀಗಾಗಿ ಕೊಳಚೆ ನೀರಲ್ಲಿ ಬೆಳೆದ ಈ ಸೊಪ್ಪು ತಿಂದ್ರೆ ರೋಗ ಬರೋದು ಪಕ್ಕ. ಆರೋಗ್ಯಕರವಾಗಿರಲು ಸೊಪ್ಪು ತಿನ್ನುತ್ತಾರೆ. ಆದ್ರೆ ಅದೇ ಸೊಪ್ಪು ಈಗ ವಿಷಕಾರಿಯಾಗುತ್ತಿದೆ. ಮಾರಾಟಗಾರರು ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡ್ತಿದ್ದಾರೆ ಎಂದು ಕೆಲ ಸ್ಥಳಿಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ: ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ ಅಲ್ತಾಫ್​

ಈ ಹಿಂದೆ ಹುಬ್ಬಳ್ಳಿಯಲ್ಲಿ ಚರಂಡಿ ನೀರಲ್ಲಿ ಸೊಪ್ಪು ತೊಳೆದಿದ್ದ ವ್ಯಾಪಾರಿಯ ವಿಡಿಯೋ ರಾಜ್ಯದಲ್ಲೆಡೆ ಸಂಚಲನ ಮೂಡಿಸಿತ್ತು. ಇದೀಗ ಸಿಲಿಕಾನ್ ಸಿಟಿಯಲ್ಲೇ ಕೊಳಚೆ ನೀರಲ್ಲಿ ಸೊಪ್ಪಿನ ಕೃಷಿ ಮಾಡಲಾಗುತ್ತಿದೆ. ಇಡೀ ರಾಜಧಾನಿಯ ತ್ಯಾಜ್ಯ, ಹೊತ್ತು ಸಾಗೋ ರಾಜಕಾಲುವೆ ನೀರಲ್ಲಿ ಸೊಪ್ಪು ಬೆಳೆದು ಜನರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ವ್ಯಾಪಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಜನರ ಆರೋಗ್ಯ ಹಾಳುಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?