AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್; ರಾಜಕಾಲುವೆ ನೀರಲ್ಲಿ ಬೆಳೆಯಲಾಗುತ್ತಿದೆ ಸೊಪ್ಪು, ತರಕಾರಿ

ರಾಜಕಾಲುವೆ ನೀರಿನಿಂದ ಬೆಳೆದ ಸೊಪ್ಪು, ತರಕಾರಿಯನ್ನು ಬೆಂಗಳೂರಿನ ಸುತ್ತಮುತ್ತದ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು ಇದು ಜನರ ಆರೋಗ್ಯದ ಮೇಲೆ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ. ಮಾರಾಟಗಾರರು ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡ್ತಿದ್ದಾರೆ ಎಂದು ಕೆಲ ಸ್ಥಳಿಯರು ಆಕ್ರೋಶ ಹೊರ ಹಾಕಿದ್ದಾರೆ.

ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್; ರಾಜಕಾಲುವೆ ನೀರಲ್ಲಿ ಬೆಳೆಯಲಾಗುತ್ತಿದೆ ಸೊಪ್ಪು, ತರಕಾರಿ
ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್
ಶಾಂತಮೂರ್ತಿ
| Edited By: |

Updated on: Aug 24, 2024 | 10:15 AM

Share

ಬೆಂಗಳೂರು, ಆಗಸ್ಟ್​.24: ಸಿಲಿಕಾನ್ ಸಿಟಿ ಬೆಂಗಳೂರಿನ ಡಿ.ಚನ್ನಸಂದ್ರ ಸುತ್ತಮುತ್ತ ಹತ್ತಾರು ಎಕರೆಯಲ್ಲಿ ರಾಜಕಾಲುವೆ ನೀರನ್ನು ಬಳಸಿ ಸೊಪ್ಪು (Vegetables) ಬೆಳೆದು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್. ರಾಜಕಾಲುವೆ ನೀರಿನಿಂದ ಬೆಳೆದ ಸೊಪ್ಪು, ತರಕಾರಿಯನ್ನು ಬೆಂಗಳೂರಿನ (Bengaluru) ಸುತ್ತಮುತ್ತದ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು ಇದು ಜನರ ಆರೋಗ್ಯದ ಮೇಲೆ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಗಬ್ಬೆದ್ದು ನಾರುತ್ತಿರುವ ರಾಜಕಾಲುವೆ ನೀರಿಗೆ ಅನಧಿಕೃತವಾಗಿ ನೂರಾರು ಮೋಟಾರ್ ಅಳವಡಿಕೆ ಮಾಡಿ ಹತ್ತಾರು ಎಕರೆಗಳಲ್ಲಿ ಸೊಪ್ಪು, ತರಕಾರಿ ಬೆಳೆಯಲಾಗುತ್ತಿದೆ. ಬೆಂಗಳೂರಿನ ಬಹುತೇಕ ಮಾರ್ಕೆಟ್​ಗಳಿಗೆ ಇದೇ ಸೊಪ್ಪು ಸಫ್ಲೆ ಮಾಡಲಾಗುತ್ತಿದೆ. ಅಕ್ಕಪಕ್ಕದ ಇಂಡಸ್ಟ್ರೀಗಳ ಕೆಮಿಕಲ್ ಮಿಶ್ರಿತ ನೀರು ಕೂಡ ಇದೇ ಕಾಲುವೆಗೆ ಸೇರ್ಪಡೆಯಾಗುತ್ತಿದೆ. ಹೀಗಾಗಿ ಕೊಳಚೆ ನೀರಲ್ಲಿ ಬೆಳೆದ ಈ ಸೊಪ್ಪು ತಿಂದ್ರೆ ರೋಗ ಬರೋದು ಪಕ್ಕ. ಆರೋಗ್ಯಕರವಾಗಿರಲು ಸೊಪ್ಪು ತಿನ್ನುತ್ತಾರೆ. ಆದ್ರೆ ಅದೇ ಸೊಪ್ಪು ಈಗ ವಿಷಕಾರಿಯಾಗುತ್ತಿದೆ. ಮಾರಾಟಗಾರರು ಜನರ ಆರೋಗ್ಯದ ಜೊತೆ ಚೆಲ್ಲಾಟ ಆಡ್ತಿದ್ದಾರೆ ಎಂದು ಕೆಲ ಸ್ಥಳಿಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ: ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ ಅಲ್ತಾಫ್​

ಈ ಹಿಂದೆ ಹುಬ್ಬಳ್ಳಿಯಲ್ಲಿ ಚರಂಡಿ ನೀರಲ್ಲಿ ಸೊಪ್ಪು ತೊಳೆದಿದ್ದ ವ್ಯಾಪಾರಿಯ ವಿಡಿಯೋ ರಾಜ್ಯದಲ್ಲೆಡೆ ಸಂಚಲನ ಮೂಡಿಸಿತ್ತು. ಇದೀಗ ಸಿಲಿಕಾನ್ ಸಿಟಿಯಲ್ಲೇ ಕೊಳಚೆ ನೀರಲ್ಲಿ ಸೊಪ್ಪಿನ ಕೃಷಿ ಮಾಡಲಾಗುತ್ತಿದೆ. ಇಡೀ ರಾಜಧಾನಿಯ ತ್ಯಾಜ್ಯ, ಹೊತ್ತು ಸಾಗೋ ರಾಜಕಾಲುವೆ ನೀರಲ್ಲಿ ಸೊಪ್ಪು ಬೆಳೆದು ಜನರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ವ್ಯಾಪಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಜನರ ಆರೋಗ್ಯ ಹಾಳುಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ