AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2022: ಬೆಂಗಳೂರಿನಲ್ಲಿ ಯುಗಾದಿ ಅಗತ್ಯ ವಸ್ತುಗಳು, ಹೂ, ಹಣ್ಣು, ತರಕಾರಿ ಬೆಲೆ ಎಷ್ಟಾಗಿದೆ? ಇಲ್ಲಿದೆ ಸಂಪೂರ್ಣ ವಿವರ

ಯುಗಾದಿ ಹಬ್ಬದ ಹಿನ್ನೆಲೆ ಹೂವು, ಹಣ್ಣು ಬೆಲೆಗಳ ದರದಲ್ಲಿ ಏರಿಕೆಯಾಗಿದೆ. ಹಣ್ಣುಗಳಲ್ಲಿ 20 ರಿಂದ 30 ರೂಪಾಯಿ ಏರಿಕೆ ಆಗಿದ್ದರೆ ಹೂವುಗಳಲ್ಲಿ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ.

Ugadi 2022: ಬೆಂಗಳೂರಿನಲ್ಲಿ ಯುಗಾದಿ ಅಗತ್ಯ ವಸ್ತುಗಳು, ಹೂ, ಹಣ್ಣು, ತರಕಾರಿ ಬೆಲೆ ಎಷ್ಟಾಗಿದೆ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರಿನ ಕೆ.ಆರ್ ಮಾರ್ಕೆಟ್
TV9 Web
| Updated By: ganapathi bhat|

Updated on:Apr 01, 2022 | 10:20 AM

Share

ಬೆಂಗಳೂರು: ಯುಗಾದಿ ಹಬ್ಬದ ಹಿನ್ನಲೆ ರಾಜಧಾನಿ ಬೆಂಗಳೂರಿನ ಕೆ.ಆರ್ ಮಾರ್ಕೆಟ್​ನಲ್ಲಿ ಹಬ್ಬದ ಖರೀದಿ ಜೋರಾಗಿದೆ. ನಗರದ ಮಾರುಕಟ್ಟೆಗಳಲ್ಲಿ ಯುಗಾದಿ ಖರೀದಿ ಅಬ್ಬರ ಭರದಿಂದ ಸಾಗುತ್ತಿದೆ. ಹಬ್ಬದ ವಸ್ತುಗಳನ್ನು ಕೊಳ್ಳಲು ಜನ ಬ್ಯುಸಿಯಾಗಿದ್ದಾರೆ. ಈ ಬಾರಿ ಯುಗಾದಿ ಹಬ್ಬವನ್ನು ಜನತೆ ಸಡಗರದಿಂದ ಆಚರಿಸುತ್ತಿದೆ. ಕಳೆದ ಎರಡು- ಮೂರು ವರ್ಷಗಳಲ್ಲಿ ಕೊರೊನಾ ಕಾರಣದಿಂದ ಹಬ್ಬ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಮತ್ತೆ ಯುಗಾದಿ ಸಂಭ್ರಮಾಚರಣೆ ಜೋರಾಗಿದೆ. ಈ ಮಧ್ಯೆ, ಕಳೆದ ಮೂರು ದಿನಕ್ಕೆ ಹೋಲಿಸಿದರೆ ಇಂದು ಕೊಂಚ ದರ ಏರಿಕೆ ಆಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಹೂವು, ಹಣ್ಣು ಬೆಲೆಗಳ ದರದಲ್ಲಿ ಏರಿಕೆಯಾಗಿದೆ. ಹಣ್ಣುಗಳಲ್ಲಿ 20 ರಿಂದ 30 ರೂಪಾಯಿ ಏರಿಕೆ ಆಗಿದ್ದರೆ ಹೂವುಗಳಲ್ಲಿ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ.

ಚಾಂದ್ರಮಾನ ಯುಗಾದಿ ಹಬ್ಬ ಇರುವ ಹಿನ್ನೆಲೆ ಹಬ್ಬವನ್ನು ಧಾರ್ಮಿಕ ಹಬ್ಬವನ್ನಾಗಿ ಆಚರಿಸಲು ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆ ಮುಜರಾಯಿ ಇಲಾಖೆಗೆ ಸೇರಿದ ದೇಗುಲಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೂ ವಿಶೇಷ ಪೂಜೆ ಇರಲಿದೆ. ಭಕ್ತಾದಿಗಳಿಗೆ ಉಚಿತವಾಗಿ ಬೇವು ಬೆಲ್ಲ, ಪಾನಕ ಮಜ್ಜಿಗೆ ಜೊತೆ ತೀರ್ಥ ಪ್ರಸಾದವೂ ನೀಡುವ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಬನಶಂಕರಿ, ದೊಡ್ಡಗಣಪತಿ ಹಾಗೂ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಇರಲಿದೆ. ಜೊತೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ 1,200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಈ ವ್ಯವಸ್ಥೆ ಇರಲಿದೆ. ಹೊಸ ವರ್ಷದ ಮೊದಲ ದಿನವನ್ನು ಆಚರಿಸಲು ಎಲ್ಲಾ ರೀತಿಯಲ್ಲಿ ಜಿಲ್ಲಾಡಳಿತ ಸಿದ್ದವಾಗಿರುವ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಯುಗಾದಿ ಅಗತ್ಯ ವಸ್ತುಗಳ ಬೆಲೆ ಹೀಗಿದೆ:

– ಮಾವಿನ ಎಲೆ 10 ರೂ./ ಕಟ್ಟು – ಬೇವಿನ ಸೊಪ್ಪು 20 ರೂ./ ಕಟ್ಟು – ತುಳಸಿ ತೋರಣ 50 ರೂ./ ಮಾರು – ಬೆಲ್ಲ (ಅಚ್ಚು/ಉಂಡೆ) 50- 60 ರೂ./ kg

ಇಂದಿನ ಹೂವುಗಳ ಬೆಲೆ ಹೀಗಿದೆ:

– ಮಲ್ಲಿಗೆ ಮೊಗ್ಗು 200 ರೂ./ kg – ಸೇವಂತಿಗೆ 140 ರೂ./ kg – ಕನಕಾಂಬರ 300 ರೂ./ kg – ಸುಗಂಧರಾಜ 60 ರೂ./ kg – ಗುಲಾಬಿ 100 ರೂ./ kg – ಚೆಂಡು ಹೂವು 40 ರೂ./ kg

ಇಂದಿನ ಹಣ್ಣುಗಳ ಬೆಲೆ ಹೀಗಿದೆ:

– ಸೇಬು 160 ರೂ./ kg – ದಾಳಿಂಬೆ 250 ರೂ./ kg – ಮೂಸಂಬಿ 100 ರೂ./ kg – ಆರೆಂಜ್ 120 ರೂ./ kg – ಸಪೋಟ 100 ರೂ./ kg – ಸೀಬೆಹಣ್ಣು 120 ರೂ./ kg – ಏಲಕ್ಕಿ ಬಾಳೆಹಣ್ಣು 70 ರೂ./ kg – ದ್ರಾಕ್ಷಿ 100-120 ರೂ./ kg

ತರಕಾರಿ ಬೆಲೆ ಕೊಂಚ ಏರಿಕೆ:

– ಕ್ಯಾರೆಟ್ 40 ರೂ./ kg – ಬೀನ್ಸ್ 40 ರೂ./ kg – ಬಟಾಣಿ 80 ರೂ./ kg – ಬಿಟ್ರೋಟ್ 40 ರೂ./ kg – ಮುಲಂಗಿ 30 ರೂ./ kg – ಬದನೆಯಕಾಯಿ 30 ರೂ./ kg – ಕ್ಯಾಪ್ಸಿಕಮ್ 40 ರೂ./ kg – ನವಿಲುಕೋಸು 20 ರೂ./ kg – ಬೆಂಡೆಕಾಯಿ 40 ರೂ./ kg – ಹೀರೆಕಾಯಿ 30 ರೂ./ kg – ಪಡವಲಕಾಯಿ 60 ರೂ./ kg – ಟೋಮಾಟೋ 20 ರೂ./ kg – ಬೆಳ್ಳುಳ್ಳಿ 70 ರೂ./ kg – ಈರುಳ್ಳಿ 30 ರೂ./ kg – ಮೆಣಸಿನಕಾಯಿ 80 ರೂ./ kg – ಆಲೂಗಡ್ಡೆ 20 ರೂ./ kg

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್; ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ಟಿಕೆಟ್ ರೇಟ್, ದುಪ್ಪಟ್ಟು ಹಣ ಪೀಕಿದ್ರೆ ದಂಡ ಫಿಕ್ಸ್

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​

Published On - 10:14 am, Fri, 1 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ