AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಗೆ ಗಗನಕ್ಕೇರಿದ ತರಕಾರಿ ಬೆಲೆ; ಯಾವ ಯಾವ ತರಕಾರಿಗಳಿಗೆ ದರ ಎಷ್ಟಿದೆ ನೋಡಿ

ಒಂದು ಕೆಜಿ ಟೊಮ್ಯಾಟೋಗೆ 100 ರೂಪಾಯಿ ಆಗಿದೆ. 15 ದಿನದಿಂದ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ತರಕಾರಿಗಳು ಹೆಚ್ಚಿನದಾಗಿ ಮಾರುಕಟ್ಟೆಗೆ ಬರುತ್ತಿಲ್ಲ. ಬರುವ ಅಲ್ಪ ತರಕಾರಿಗೆ ವ್ಯಾಪಾರಸ್ಥರು ಹೆಚ್ಚಿನ ಬೆಲೆ ನಿಗದಿ ಮಾಡಿದ್ದಾರೆ.

ನಿರಂತರ ಮಳೆಗೆ ಗಗನಕ್ಕೇರಿದ ತರಕಾರಿ ಬೆಲೆ; ಯಾವ ಯಾವ ತರಕಾರಿಗಳಿಗೆ ದರ ಎಷ್ಟಿದೆ ನೋಡಿ
ತರಕಾರಿಗಳು (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Nov 20, 2021 | 2:14 PM

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು 15 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ರೈತರು ಬೆಳೆದ ಬೆಳೆಗಳು ಜಲಾವೃತವಾಗಿವೆ. ಫಸಲು ಅನ್ನದಾತನ ಕೈ ಸೇರುವ ಮೊದಲೇ ವರುಣಾರ್ಭಟಕ್ಕೆ ನೀರು ಪಾಲಾಗಿವೆ. ಹೀಗೆ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಾಗಿದೆ. ಟೊಮ್ಯಾಟೋ, ಈರುಳ್ಳಿ ಬೆಲೆ ಗಗನಕ್ಕೇರಿದೆ.

ಒಂದು ಕೆಜಿ ಟೊಮ್ಯಾಟೋಗೆ 100 ರೂಪಾಯಿ ಆಗಿದೆ. 15 ದಿನದಿಂದ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ತರಕಾರಿಗಳು ಹೆಚ್ಚಿನದಾಗಿ ಮಾರುಕಟ್ಟೆಗೆ ಬರುತ್ತಿಲ್ಲ. ಬರುವ ಅಲ್ಪ ತರಕಾರಿಗೆ ವ್ಯಾಪಾರಸ್ಥರು ಹೆಚ್ಚಿನ ಬೆಲೆ ನಿಗದಿ ಮಾಡಿದ್ದಾರೆ.

ತರಕಾರಿಗಳ ಬೆಲೆ ಹೀಗಿದೆ ಒಂದು ಕೆಜಿ ಟೊಮ್ಯಾಟೋಗೆ- 80ರಿಂದ 120 ರೂ. ಈರುಳ್ಳಿ- 40ರಿಂದ 60 ರೂ. ಕ್ಯಾರೆಟ್- 60 ರೂ. ಆಲೂಗಡ್ಡೆ- 30ರಿಂದ 50 ರೂ. ಸೋರೆಕಾಯಿ- 40ರಿಂದ 60 ರೂ. ಮೆಣಸಿನಕಾಯಿ- 100ರಿಂದ 130 ರೂ. ಇದೆ. ಹೀಗೆ ಮಳೆಯಿಂದ ಬಹುತೇಕ ತರಕಾರಿಗಳ ದರ ಹೆಚ್ಚಳವಾಗಿದ್ದು, ಮಳೆ ಮುಂದುವರೆದರೆ ಟೊಮ್ಯಾಟೋಗೆ 150 ರೂ. ದಾಟುವ ಸಾಧ್ಯತೆಯಿದೆ. ಸದ್ಯ ಟೊಮ್ಯಾಟೋ ಬೆಲೆ ಕೇಳಿ ಗ್ರಾಹಕರು ದಂಗಾಗಿದ್ದಾರೆ.

ಟೊಮ್ಯಾಟೋ ಭರ್ಜರಿ ವ್ಯಾಪಾರ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಭರ್ಜರಿ ವ್ಯಾಪಾರವಾಗುತ್ತಿದೆ. 15 ಕೆಜಿ ಬಾಕ್ಸ್​ಗೆ 1,500 ರೂ. ರಿಂದ 2 ಸಾವಿರಕ್ಕೆ ಮಾರಾಟವಾಗುತ್ತಿದೆ. ಇಳುವರಿ ಕಡಿಮೆಯಾಗಿರುವ ಹಿನ್ನೆಲೆ ಭರ್ಜರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಒಂದು ಕೆಜಿ ಟೊಮ್ಯಾಟೋ ಬೆಲೆ ಬರೋಬ್ಬರಿ 140 ರೂಪಾಯಿ ಆಗಿದೆ. ಕಳೆದ ಒಂದು ತಿಂಗಳಿನಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೋ ಸೇರಿ ಇನ್ನಿತರೆ ತರಕಾರಿಗಳಿಗೆ ರೋಗಬಾಧೆ ಎದುರಾಗಿತ್ತು. ಇಳುವರಿಯಲ್ಲಿ ತೀವ್ರ ಕುಸಿತ ಮತ್ತು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಹಾನಿಹಾನಿಯಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಏರಿಕೆ ಕಂಡಿದೆ.

ಇದನ್ನೂ ಓದಿ

Payal Rajput: ಫೋಟೋಶೂಟ್​ ವೇಳೆ ಮಿತಿ ಮೀರಿ ವರ್ತಿಸಿದ ಜೋಡಿ; ಕನ್ನಡಕ್ಕೆ ಕಾಲಿಡಲಿರುವ ನಟಿಯ ಹಾಟ್​​ ಫೋಟೋ ವೈರಲ್

ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ

Published On - 2:02 pm, Sat, 20 November 21

ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್