AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಗೆ ಗಗನಕ್ಕೇರಿದ ತರಕಾರಿ ಬೆಲೆ; ಯಾವ ಯಾವ ತರಕಾರಿಗಳಿಗೆ ದರ ಎಷ್ಟಿದೆ ನೋಡಿ

ಒಂದು ಕೆಜಿ ಟೊಮ್ಯಾಟೋಗೆ 100 ರೂಪಾಯಿ ಆಗಿದೆ. 15 ದಿನದಿಂದ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ತರಕಾರಿಗಳು ಹೆಚ್ಚಿನದಾಗಿ ಮಾರುಕಟ್ಟೆಗೆ ಬರುತ್ತಿಲ್ಲ. ಬರುವ ಅಲ್ಪ ತರಕಾರಿಗೆ ವ್ಯಾಪಾರಸ್ಥರು ಹೆಚ್ಚಿನ ಬೆಲೆ ನಿಗದಿ ಮಾಡಿದ್ದಾರೆ.

ನಿರಂತರ ಮಳೆಗೆ ಗಗನಕ್ಕೇರಿದ ತರಕಾರಿ ಬೆಲೆ; ಯಾವ ಯಾವ ತರಕಾರಿಗಳಿಗೆ ದರ ಎಷ್ಟಿದೆ ನೋಡಿ
ತರಕಾರಿಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Nov 20, 2021 | 2:14 PM

Share

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು 15 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ರೈತರು ಬೆಳೆದ ಬೆಳೆಗಳು ಜಲಾವೃತವಾಗಿವೆ. ಫಸಲು ಅನ್ನದಾತನ ಕೈ ಸೇರುವ ಮೊದಲೇ ವರುಣಾರ್ಭಟಕ್ಕೆ ನೀರು ಪಾಲಾಗಿವೆ. ಹೀಗೆ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಾಗಿದೆ. ಟೊಮ್ಯಾಟೋ, ಈರುಳ್ಳಿ ಬೆಲೆ ಗಗನಕ್ಕೇರಿದೆ.

ಒಂದು ಕೆಜಿ ಟೊಮ್ಯಾಟೋಗೆ 100 ರೂಪಾಯಿ ಆಗಿದೆ. 15 ದಿನದಿಂದ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ತರಕಾರಿಗಳು ಹೆಚ್ಚಿನದಾಗಿ ಮಾರುಕಟ್ಟೆಗೆ ಬರುತ್ತಿಲ್ಲ. ಬರುವ ಅಲ್ಪ ತರಕಾರಿಗೆ ವ್ಯಾಪಾರಸ್ಥರು ಹೆಚ್ಚಿನ ಬೆಲೆ ನಿಗದಿ ಮಾಡಿದ್ದಾರೆ.

ತರಕಾರಿಗಳ ಬೆಲೆ ಹೀಗಿದೆ ಒಂದು ಕೆಜಿ ಟೊಮ್ಯಾಟೋಗೆ- 80ರಿಂದ 120 ರೂ. ಈರುಳ್ಳಿ- 40ರಿಂದ 60 ರೂ. ಕ್ಯಾರೆಟ್- 60 ರೂ. ಆಲೂಗಡ್ಡೆ- 30ರಿಂದ 50 ರೂ. ಸೋರೆಕಾಯಿ- 40ರಿಂದ 60 ರೂ. ಮೆಣಸಿನಕಾಯಿ- 100ರಿಂದ 130 ರೂ. ಇದೆ. ಹೀಗೆ ಮಳೆಯಿಂದ ಬಹುತೇಕ ತರಕಾರಿಗಳ ದರ ಹೆಚ್ಚಳವಾಗಿದ್ದು, ಮಳೆ ಮುಂದುವರೆದರೆ ಟೊಮ್ಯಾಟೋಗೆ 150 ರೂ. ದಾಟುವ ಸಾಧ್ಯತೆಯಿದೆ. ಸದ್ಯ ಟೊಮ್ಯಾಟೋ ಬೆಲೆ ಕೇಳಿ ಗ್ರಾಹಕರು ದಂಗಾಗಿದ್ದಾರೆ.

ಟೊಮ್ಯಾಟೋ ಭರ್ಜರಿ ವ್ಯಾಪಾರ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಭರ್ಜರಿ ವ್ಯಾಪಾರವಾಗುತ್ತಿದೆ. 15 ಕೆಜಿ ಬಾಕ್ಸ್​ಗೆ 1,500 ರೂ. ರಿಂದ 2 ಸಾವಿರಕ್ಕೆ ಮಾರಾಟವಾಗುತ್ತಿದೆ. ಇಳುವರಿ ಕಡಿಮೆಯಾಗಿರುವ ಹಿನ್ನೆಲೆ ಭರ್ಜರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಒಂದು ಕೆಜಿ ಟೊಮ್ಯಾಟೋ ಬೆಲೆ ಬರೋಬ್ಬರಿ 140 ರೂಪಾಯಿ ಆಗಿದೆ. ಕಳೆದ ಒಂದು ತಿಂಗಳಿನಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೋ ಸೇರಿ ಇನ್ನಿತರೆ ತರಕಾರಿಗಳಿಗೆ ರೋಗಬಾಧೆ ಎದುರಾಗಿತ್ತು. ಇಳುವರಿಯಲ್ಲಿ ತೀವ್ರ ಕುಸಿತ ಮತ್ತು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಹಾನಿಹಾನಿಯಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಏರಿಕೆ ಕಂಡಿದೆ.

ಇದನ್ನೂ ಓದಿ

Payal Rajput: ಫೋಟೋಶೂಟ್​ ವೇಳೆ ಮಿತಿ ಮೀರಿ ವರ್ತಿಸಿದ ಜೋಡಿ; ಕನ್ನಡಕ್ಕೆ ಕಾಲಿಡಲಿರುವ ನಟಿಯ ಹಾಟ್​​ ಫೋಟೋ ವೈರಲ್

ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ

Published On - 2:02 pm, Sat, 20 November 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ