AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ರಾತ್ರಿ 12 ರಿಂದ ಮುಂಜಾನೆ 5 ಗಂಟೆವರೆಗೆ ವಾಹನ ಸಂಚಾರಕ್ಕೆ ನಿಷೇಧ

ಮೇಲ್ಸೇತುವೆ ಮೇಲೆ ಭಾರಿ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದು ಪೊಲೀಸರಿಗೆ ಕಷ್ಟವಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಭಾರಿ ವಾಹನಗಳನ್ನು ತಡೆಗಟ್ಟಲು ಅಳವಡಿಸಿರುವ ಗ್ಯಾಂಟ್ರಿ ಪದೇ ಪದೆ ಹಾನಿಗೆ ಒಳಗಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ರಾತ್ರಿ 12 ರಿಂದ ಮುಂಜಾನೆ 5 ಗಂಟೆವರೆಗೆ ವಾಹನ ಸಂಚಾರಕ್ಕೆ ನಿಷೇಧ
ಪೀಣ್ಯ ಫ್ಲೈಓವರ್, ಸಂಚಾರಕ್ಕೆ ನಿರ್ಬಂಧ
TV9 Web
| Edited By: |

Updated on:Mar 13, 2022 | 9:41 AM

Share

ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಮಧ್ಯರಾತ್ರಿ 12 ರಿಂದ ಮುಂಜಾನೆ 5 ಗಂಟೆ ವರೆಗೆ ಸಂಚಾರ ನಿಷೇಧಿಸಲಾಗಿದೆ. ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಮೇಲ್ಸೇತುವೆ ಮೇಲೆ ಭಾರಿ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದು ಪೊಲೀಸರಿಗೆ ಕಷ್ಟವಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಭಾರಿ ವಾಹನಗಳನ್ನು ತಡೆಗಟ್ಟಲು ಅಳವಡಿಸಿರುವ ಗ್ಯಾಂಟ್ರಿ ಪದೇ ಪದೆ ಹಾನಿಗೆ ಒಳಗಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ರಾತ್ರಿ 12 ಗಂಟೆ ನಂತರ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ನಿರ್ಬಂಧ ಹೇರಿದ್ದಾರೆ. ಬೆಳಗಿನ ಜಾವ 5 ಗಂಟೆಯವರೆಗೂ ಮೇಲ್ಸೇತುವೆಯ ಮೇಲೆ ವಾಹನ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಾತ್ರಿ 12 ಗಂಟೆ ನಂತರ ಸರ್ವಿಸ್ ರಸ್ತೆ ಮೂಲಕ ದಾಸರಹಳ್ಳಿ, ಪೀಣ್ಯ, ಜಾಲಹಳ್ಳಿ ಕ್ರಾಸ್ ಮೂಲಕ ಗೊರಗುಂಟೆಪಾಳ್ಯ ತಲುಪುವುದು, ಗೊರಗುಂಟೆಪಾಳ್ಯದಿಂದ ಔಟರ್ ರಿಂಗ್ ರೋಡ್ ಬಳಸಿ ನಗರದಿಂದ ಹೊರ ಹೋಗುವುದು ಸೂಕ್ತ ಎಂದು ತಿಳಿಸಲಾಗಿದೆ. ನಗರಕ್ಕೆ ಬರುವ ವಾಹನಗಳು ಮಾದಾವಾರ ಬಳಿ ನೈಸ್ ರಸ್ತೆ ಬಳಸಿಕೊಂಡು ಬರುವುದು ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಆದೇಶ ಮಾಡಿದ್ದಾರೆ.

ನಗರದ ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಈ ಮೊದಲು ಮುಕ್ತವಾಗಿತ್ತು. ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅವಕಾಶ ನೀಡಿತ್ತು. ಕಳೆದ 58 ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್​, ಗೊರಗುಂಟೆಪಾಳ್ಯ-ನಾಗಸಂದ್ರ ನಡುವಿನ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿಸಲಾಗಿತ್ತು. ಇದೀಗ ಭಾರಿ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದು ಕಷ್ಟವಾದ ಹಿನ್ನೆಲೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ವಿವಿ ಅಕ್ರಮಗಳ ಅಡ್ಡೆಯಾಗುತ್ತಿದೆ; ಸಿಂಡಿಕೇಟ್ ಸದಸ್ಯರಿಂದಲೇ ರಾಜ್ಯಪಾಲರಿಗೆ ದೂರು

ಇದನ್ನೂ ಓದಿ: Petrol Diesel Rate Today: ಬೆಂಗಳೂರು ಹಾಗೂ ಇತರ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

Published On - 9:39 am, Sun, 13 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್