AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಗಣ್ಯ ವ್ಯಕ್ತಿಗಳು ಆಗಮಿಸಿತ್ತಾರೆಂದು ಮಾರ್ಗ ಬದಲಾವಣೆಗೆ ನಿರ್ಧಾರ: ರಿಚ್ಮಂಡ್ ಫ್ಲೈಓವರ್ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ

ರಿಚ್ಮಂಡ್ ಫ್ಲೈಓವರ್ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಶಾಂತಿನಗರ, ನಂಜಪ್ಪ ವೃತ್ತದವರೆಗೆ ರಸ್ತೆ ಸಂಚಾರ ನಿರ್ಬಂಧ ಹೇರಲಾಗಿದೆ.

ಬೆಂಗಳೂರಿಗೆ ಗಣ್ಯ ವ್ಯಕ್ತಿಗಳು ಆಗಮಿಸಿತ್ತಾರೆಂದು ಮಾರ್ಗ ಬದಲಾವಣೆಗೆ ನಿರ್ಧಾರ: ರಿಚ್ಮಂಡ್ ಫ್ಲೈಓವರ್ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ
ಸಂಗ್ರಹ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Sep 27, 2022 | 10:33 AM

Share

ಬೆಂಗಳೂರು: ರಾಷ್ಟ್ರಪತಿ ಸೇರಿದಂತೆ ಗಣ್ಯ ವ್ಯಕ್ತಿಗಳು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರಿಂದ ಮಾರ್ಗ ಬದಲಾವಣೆ ಮಾಡಲಾಗಿದೆ. ರಿಚ್ಮಂಡ್ ಫ್ಲೈಓವರ್ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಶಾಂತಿನಗರ, ನಂಜಪ್ಪ ವೃತ್ತದವರೆಗೆ ರಸ್ತೆ ಸಂಚಾರ ನಿರ್ಬಂಧ ಹೇರಿ ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ಅಂಗಾಂಗ ದಾನ ಮಾಡಿ ಕುಟುಂಬಸ್ಥರಿಂದ ಮಾನವೀಯತೆ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ಹಿನ್ನೆಲೆ ಕುಟುಂಬಸ್ಥರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ನಗರದಲ್ಲಿ ನಡೆದಿದೆ. ದೀಪಕ್(26)ನ ಅಂಗಾಂಗ ದಾನ ಮಾಡಲಾಗಿದೆ. ಸೆ.25ರಂದು ನೈಸ್​ ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರ್​​​ಗೆ ಹಿಂಬದಿಯಿಂದ ಕಾರು ಬಂದು ಡಿಕ್ಕಿಯಾಗಿ ದೀಪಕ್​​ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನಲೆ ಮೃತನ ಕಿಡ್ನಿ, ಕಣ್ಣು, ಚರ್ಮ ಸೇರಿದಂತೆ ಅಂಗಾಂಗ ದಾನ ಮಾಡಲಾಗಿದೆ. ಸದ್ಯ ಆರ್.ಆರ್.ನಗರದ ಎಸ್ ಎಸ್ ಸ್ಪರ್ಶ್ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು ಇಂದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುತ್ತೆ. ಇದನ್ನೂ ಓದಿ: Rajasthan Politics: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮಲ್ಲಿಕಾರ್ಜನ ಖರ್ಗೆ ವರದಿ; ಹೈಕಮಾಂಡ್​​ಗೆ ಸೆಡ್ಡು ಹೊಡೆದ ಅಶೋಕ್ ಗೆಹ್ಲೋಟ್ ಬೆಂಬಲಿಗರಿಗೆ ನೊಟೀಸ್ ಸಾಧ್ಯತೆ

ಮರ ಕಡಿದ ಎಂದು ಆದಿವಾಸಿ ಬಂಧನ

ಮೈಸೂರು: ಅಕ್ರಮವಾಗಿ ಬೀಟೆ ಸಾಗುವಾನಿ ಮರ ಕಡಿದ ಆರೋಪ ಆದಿವಾಸಿಯನ್ನು ಬಂಧಿಸಿದ ಘಟನೆ ಮೈಸೂರಿನ ಹೆಚ್​ಡಿ ಕೋಟೆಯಲ್ಲಿ ನಡೆದಿದೆ. ಮೇಟಿಕುಪ್ಪೆ ಹಾಡಿ ನಿವಾಸಿ ದಾಸ ಬಂಧಿತ ಆರೋಪಿ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯದಲ್ಲಿ ಅಕ್ರಮವಾಗಿ ಬೆಲೆ ಬಾಳುವ ಮರ ಕಡಿದು ಸಾಗಿಸಿರುವ ಆರೋಪ ಕೇಳಿ ಬಂದಿದೆ. ಆದ್ರೆ ದಾಸ ಮರ ಕಡಿದಿಲ್ಲ ಅರಣ್ಯ ಇಲಾಖೆ ಸುಳ್ಳು ಕೇಸು ದಾಖಲಿಸಿದೆ ಎಂದು ಹಾಡಿ ಜನರು ಆರೋಪಿಸಿದ್ದಾರೆ.

ಪ್ರಸವದ ಬಳಿಕ ಮಹಿಳೆ ಸಾವು

ಮಡಿಕೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹರ್ಷಿತ ಎಂಬ 22 ವರ್ಷ ವಯಸ್ಸಿನ ಬಾಣಂತಿ ಪ್ರಸವದ ಬಳಿಕ ಸಾವನ್ನಪ್ಪಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸೆಪ್ಟೆಂಬರ್ 20ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Tue, 27 September 22

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!