AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್​

ಬೃಹತ್​ ಬೆಂಗಳೂರು ಮಹಾನಗರ ವ್ಯಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು 110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಬಿಡಬ್ಲ್ಯೂಎಸ್‌ಎಸ್​ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್‌ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್​
ಬೆಂಗಳೂರು ಟ್ರಾಫಿಕ್​
ವಿವೇಕ ಬಿರಾದಾರ
|

Updated on: Sep 27, 2024 | 8:45 AM

Share

ಬೆಂಗಳೂರು ಸೆಪ್ಟೆಂಬರ್​ 27: ಬೃಹತ್​ ಬೆಂಗಳೂರು ಮಹಾನಗರ ವ್ಯಪ್ತಿಯ (BBMP) 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತದ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಅಂತಿಮ ಹಂತ ತಲುಪಿದ್ದು, ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಪರಿಶೀಲನೆ ನಡೆಸಿದ್ದರು.

110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಉತ್ತರಹಳ್ಳಿ ರಸ್ತೆಯಲ್ಲಿ ಬಿಡಬ್ಲ್ಯೂಎಸ್‌ಎಸ್​ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್‌ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಹೀಗಾಗಿ ಸುಗಮ ಸಂಚಾರ ದೃಷ್ಟಿಯಿಂದ “ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ)” ವರೆಗಿನ ರಸ್ತೆಯಲ್ಲಿ ಇಂದಿನಿಂದ (ಸೆ.27) ಒಂದು ತಿಂಗಳ ಕಾಲ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪರ್ಯಾಯ ಮಾರ್ಗ

ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಮೈಸೂರು ರಸ್ತೆ) ಕಡೆಗೆ ಸಂಚರಿಸುವ ವಾಹನಗಳು ಬಿಜಿಎಸ್ ಆಸ್ಪತ್ರೆ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಮೂಕಾಂಬಿಕ ಸರ್ಕಲ್, ವೃಷಭಾವತಿ ಮೋರಿ ಬ್ರಿಡ್ಜ್ ಮೂಲಕ ಮೈಸೂರು ರಸ್ತೆಗೆ ಪ್ರವೇಶಿಸಬಹುದು.

ಟ್ವಿಟರ್ ಪೋಸ್ಟ್​

ಮೈಸೂರು ರಸ್ತೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ವಿಲೇಜ್ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ವಿಲೇಜ್ ಬ್ಯಾಕ್ ಗೇಟ್ ರಸ್ತೆ ಹಾಗೂ ಬಿಜಿಎಸ್ ಜಂಕ್ಷನ್ ಮೂಲಕ ಉತ್ತರಹಳ್ಳಿಗೆ ತಲುಪಬಹುದಾಗಿರುತ್ತದೆ. ನಗರದ ಕಡೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬಿಜಿಎಸ್ ಜಂಕ್ಷನ್ ಮೂಲಕ ಸಾಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸ್​ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ