Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್​

ಬೃಹತ್​ ಬೆಂಗಳೂರು ಮಹಾನಗರ ವ್ಯಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು 110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಬಿಡಬ್ಲ್ಯೂಎಸ್‌ಎಸ್​ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್‌ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್​
ಬೆಂಗಳೂರು ಟ್ರಾಫಿಕ್​
Follow us
ವಿವೇಕ ಬಿರಾದಾರ
|

Updated on: Sep 27, 2024 | 8:45 AM

ಬೆಂಗಳೂರು ಸೆಪ್ಟೆಂಬರ್​ 27: ಬೃಹತ್​ ಬೆಂಗಳೂರು ಮಹಾನಗರ ವ್ಯಪ್ತಿಯ (BBMP) 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತದ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಅಂತಿಮ ಹಂತ ತಲುಪಿದ್ದು, ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಪರಿಶೀಲನೆ ನಡೆಸಿದ್ದರು.

110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಉತ್ತರಹಳ್ಳಿ ರಸ್ತೆಯಲ್ಲಿ ಬಿಡಬ್ಲ್ಯೂಎಸ್‌ಎಸ್​ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್‌ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.

ಹೀಗಾಗಿ ಸುಗಮ ಸಂಚಾರ ದೃಷ್ಟಿಯಿಂದ “ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ)” ವರೆಗಿನ ರಸ್ತೆಯಲ್ಲಿ ಇಂದಿನಿಂದ (ಸೆ.27) ಒಂದು ತಿಂಗಳ ಕಾಲ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪರ್ಯಾಯ ಮಾರ್ಗ

ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಮೈಸೂರು ರಸ್ತೆ) ಕಡೆಗೆ ಸಂಚರಿಸುವ ವಾಹನಗಳು ಬಿಜಿಎಸ್ ಆಸ್ಪತ್ರೆ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ಮೂಕಾಂಬಿಕ ಸರ್ಕಲ್, ವೃಷಭಾವತಿ ಮೋರಿ ಬ್ರಿಡ್ಜ್ ಮೂಲಕ ಮೈಸೂರು ರಸ್ತೆಗೆ ಪ್ರವೇಶಿಸಬಹುದು.

ಟ್ವಿಟರ್ ಪೋಸ್ಟ್​

ಮೈಸೂರು ರಸ್ತೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ವಿಲೇಜ್ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ವಿಲೇಜ್ ಬ್ಯಾಕ್ ಗೇಟ್ ರಸ್ತೆ ಹಾಗೂ ಬಿಜಿಎಸ್ ಜಂಕ್ಷನ್ ಮೂಲಕ ಉತ್ತರಹಳ್ಳಿಗೆ ತಲುಪಬಹುದಾಗಿರುತ್ತದೆ. ನಗರದ ಕಡೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬಿಜಿಎಸ್ ಜಂಕ್ಷನ್ ಮೂಲಕ ಸಾಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸ್​ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು